Category: ಯಾದಗಿರಿ ಸುದ್ದಿ

News Acritical

  • ಅರ್ಹ ಮತದಾರರು ಪಟ್ಟಿಯಲ್ಲಿ ಹೆಸರು ಖಚಿತಪಡಿಸಿಕೊಳ್ಳಿ: ಮೀನಾಕ್ಷಿ ವಿ. ನಾಯಕ

    ಅರ್ಹ ಮತದಾರರು ಪಟ್ಟಿಯಲ್ಲಿ ಹೆಸರು ಖಚಿತಪಡಿಸಿಕೊಳ್ಳಿ: ಮೀನಾಕ್ಷಿ ವಿ. ನಾಯಕ

    ಸುದ್ದಿ ಬೆಳಕು ವಾರ್ತೆ ಸೈದಾಪೂರ: ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಂಡು, ಅಗತ್ಯವಿದ್ದಲ್ಲಿ ಹೊಸ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬೇಕು ಎಂದು ಸೈದಾಪೂರ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಮೀನಾಕ್ಷಿ ವಿ. ನಾಯಕ ಕರೆ ನೀಡಿದರು. ಕಾಂಗ್ರೆಸ್ ಪಕ್ಷದ ವತಿಯಿಂದ ಗೊಂದಡಗಿ, ಭೀಮನಳ್ಳಿ, ಬೆಳಗುಂದಿ, ಆನೂರ ಬಿ, ಆನೂರ ಕೆ, ಮಲ್ಹಾರ್, ಸಾವೂರ, ಹೆಗ್ಗಣಗೇರಾ ಹಾಗೂ ಸೈದಾಪೂರ ಇಂದಿರಾನಗರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಎಸ್‌ಐಆರ್ ಹಾಗೂ ಬಿಎಲ್‌ಎ-2 ಜಾಗೃತಿ…

  • ಮಾದಾರ ಚನ್ನಯ್ಯ ಸ್ವಾಮೀಜಿಗಳ ಜನ್ಮದಿನ: ಯಾದಗಿರಿಯಲ್ಲಿ ಸಸಿ ನೆಡುವ ಮೂಲಕ ಆಚರಣೆ

    ಮಾದಾರ ಚನ್ನಯ್ಯ ಸ್ವಾಮೀಜಿಗಳ ಜನ್ಮದಿನ: ಯಾದಗಿರಿಯಲ್ಲಿ ಸಸಿ ನೆಡುವ ಮೂಲಕ ಆಚರಣೆ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ : ನಗರದ ವಿಶ್ವರಾಧ್ಯ ನಗರದಲ್ಲಿ ಶ್ರೀ ಮಾದಾರ ಚೆನ್ನಯ ಸೇವಾ ಸಮಿತಿಯ ವತಿಯಿಂದ ಚಿತ್ರದುರ್ಗ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಪೀಠಾಧ್ಯಕ್ಷರು ಹಾಗೂ ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಅಧ್ಯಕ್ಷರಾದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಗಳವರ ಜನ್ಮ ದಿನದ ಪ್ರಯುಕ್ತ ಸಸಿ ನೇಡುವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಯಿತು. ​ಸಾಮರಸ್ಯ ಪ್ರಶಸ್ತಿ ಮತ್ತು ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಿಂದ ನಾಡಪ್ರಭು ಕೆಂಪೇಗೌಡರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿರುವ…

  • ಶಾಲಾ ಕಟ್ಟಡ ಕಾಮಗಾರಿ ಗುಣಮಟ್ಟದಿಂದ ಪೂರ್ಣಗೊಳಿಸಿ: ಶಾಸಕ ಚನ್ನಾರೆಡ್ಡಿ ಪಾಟೀಲ

    ಶಾಲಾ ಕಟ್ಟಡ ಕಾಮಗಾರಿ ಗುಣಮಟ್ಟದಿಂದ ಪೂರ್ಣಗೊಳಿಸಿ: ಶಾಸಕ ಚನ್ನಾರೆಡ್ಡಿ ಪಾಟೀಲ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಶಾಲಾ ಕೋಣೆ ಮತ್ತು ಕಂಪೌಂಡ ಕಟ್ಟಡದ ಕಾಮಗಾರಿ ಗುಣಮಟ್ಟದಲ್ಲಿ ಮಾಡುವಂತೆಯೇ ಯಾದಗಿರಿ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಜನಪ್ರೀಯ ಶಾಸಕರಾದ ಶಾಸಕರಾದ ಚನ್ನಾರೆಡ್ಡಿ ಪಾಟೀಲ ತುನ್ನೂರ ನುಡಿದರು. ವಡಗೇರಾ ತಾಲೂಕಿನ ಅನವಾರದಲ್ಲಿ ಕೆಕೆಆರ್ ಡಿಬಿಯಿಂದ ನಿರ್ಮಿತಿ ಕೇಂದ್ರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೊಣೆ ನಿರ್ಮಾಣ, ಕಂಪೌಡ ನಿರ್ಮಾಣ ಕೆಲಸಕ್ಕೆ ಗುದ್ದಲಿ ಪೂಜೆ ಮಾಡಿ ಮತ್ತು ಗ್ರಾಮದಲ್ಲಿ ನಿರ್ಮಿಸಿದ ತಂಗುದಾಣ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಶಾಸಕರು ಮಾತನಾಡಿದರು. ಈ ಶಾಲೆಗೆ ಇನ್ನೂ ಬೇಕಾದರೂ ವ್ಯವಸ್ಥೆ…

  • ಬೆಂಕಿ ಅವಘಡ ಪೀಡಿತ ರೈತನ ಹೊಲಕ್ಕೆ ಶಾಸಕ ತುನ್ನೂರು ಭೇಟಿ

    ಬೆಂಕಿ ಅವಘಡ ಪೀಡಿತ ರೈತನ ಹೊಲಕ್ಕೆ ಶಾಸಕ ತುನ್ನೂರು ಭೇಟಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ತಾಲೂಕಿನ ನಾಯಕಲ್ ಗ್ರಾಮದ ಖಾಸಿಂಸಾಬ್ ಹೊರಕೂರ ಅವರಿಗೆ ಸೇರಿದ ಹೊಲದಲ್ಲಿ ಬೆಂಕಿ ಹತ್ತಿದ ಪರಿಣಾಮ ಅಲ್ಲಿದ್ದ ಕಣಕಿ, ಹೊಟ್ಟು, ಸೊಪ್ಪು ಮತ್ತು ಪೈಪ್ ಲೈನ್ ಸಾಮಾನುಗಳು ಸುಟ್ಟು ಹಾನಿಯಾಗಿದ್ದನ್ನು ತಿಳಿದ ಯಾದಗಿರಿ ವಿಧಾನ ಸಭಾ ಮತಕ್ಷೇತ್ರದ ಕಾಂಗ್ರೆಸ್ ಶಾಸಕರಾದ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರು ರವಿವಾರ ಭೇಟಿ ನೀಡಿ ವಿಕ್ಷೀಸಿದರು. ಹೊಲದ ಮಾಲಿಕರಾದ ಖಾಸಿಂಸಾಬ್ ಹೊರಕುರ ಅವರೊಂದಿಗೆ ಮಾತನಾಡಿದ ಶಾಸಕರಾದ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಅವರು ಬೆಂಕಿ ಹತ್ತಿದ ಬಗ್ಗೆ ಕೇಳಿದರು.…

  • ರೈತರಿಗೆ ನಿರಂತರ 7 ಗಂಟೆ ವಿದ್ಯುತ್ ನೀಡಿ: ಜೆಸ್ಕಾಂ ಅಧ್ಯಕ್ಷರಿಗೆ ಮುದ್ನಾಳ ಮನವಿ

    ರೈತರಿಗೆ ನಿರಂತರ 7 ಗಂಟೆ ವಿದ್ಯುತ್ ನೀಡಿ: ಜೆಸ್ಕಾಂ ಅಧ್ಯಕ್ಷರಿಗೆ ಮುದ್ನಾಳ ಮನವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟು ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಪಂಪ್‌ಸೆಟ್‌ಗಳಿಗೆ ನಿರಂತರ 7 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ನೇತೃತ್ವದ ನಿಯೋಗವು ಶನಿವಾರ ಕಲಬುರಗಿಯಲ್ಲಿ ಜೆಸ್ಕಾಂ ಅಧ್ಯಕ್ಷ ಪ್ರವೀಣಕುಮಾರ ಪಾಟೀಲ್ ಹರವಾಳ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಜಿಲ್ಲೆಯಲ್ಲಿ ಈ ಬಾರಿ ಮಳೆ ಸರಿಯಾಗಿ ಆಗದ ಕಾರಣ ಬೆಳೆಗಳು ಒಣಗುವ ಹಂತಕ್ಕೆ ಬಂದಿವೆ. ಅಂತರ್ಜಲದಲ್ಲಿ ನೀರು…

  • ವಿದ್ಯುತ್ ವೈರ್ ಕಟ್ ಆರೋಪ; ಯಾದಗಿರಿ ಜೇಸ್ಕಾಂ ಕಚೇರಿಗೆ ರೈತರ ಮುತ್ತಿಗೆ

    ವಿದ್ಯುತ್ ವೈರ್ ಕಟ್ ಆರೋಪ; ಯಾದಗಿರಿ ಜೇಸ್ಕಾಂ ಕಚೇರಿಗೆ ರೈತರ ಮುತ್ತಿಗೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಐಪಿ ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂಬ ಆರೋಪದ ನಡುವೆ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ವಿದ್ಯುತ್ ಲೈನ್ ಕತ್ತರಿಸಿರುವ ಘಟನೆ ತೀವ್ರ ಉದ್ವಿಗ್ನತೆಗೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಬಾಚವಾರ, ನಿಂಗಸದಲ್ಳಿ, ಹಣಮಾನಾಯಕ ತಾಂಡಾ ಸೇರಿದಂತೆ ಹಲವು ಗ್ರಾಮಗಳ ರೈತರು ಜೇಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಯರಗೋಳ ಗ್ರಾಮದ 110 ಕೆವಿ ವಿದ್ಯುತ್ ಕೇಂದ್ರದಿಂದ ಬಾಚವಾರ, ನಿಂಗಸದಲ್ಳಿ ಹಾಗೂ ಹಣಮಾನಾಯಕ ತಾಂಡಾ ಭಾಗದ ಐಪಿ ಸೆಟ್‌ಗಳಿಗೆ ವಿದ್ಯುತ್ ಪೂರೈಕೆಯಾಗುತ್ತಿತ್ತು.…

  • ಅರ್ಹ ಫಲಾನುಭವಿಗಳಿಗೆ ಪಂಚ ಗ್ಯಾರಂಟಿ ಯೋಜನೆ ಸೌಲಭ್ಯ ಕಲ್ಪಿಸಿ: ಆಲ್ದಾಳ

    ಅರ್ಹ ಫಲಾನುಭವಿಗಳಿಗೆ ಪಂಚ ಗ್ಯಾರಂಟಿ ಯೋಜನೆ ಸೌಲಭ್ಯ ಕಲ್ಪಿಸಿ: ಆಲ್ದಾಳ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಅರ್ಹ ಫಲಾನುಭವಿಗಳಿಗೆ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ಕಲ್ಪಿಸುವ ಹಿನ್ನಲೆಯಲ್ಲಿ ಗೃಹ ಜ್ಯೋತಿ, ಗೃಹಲಕ್ಷಿö್ಮ, ಅನ್ನಭಾಗ್ಯ ಹಾಗೂ ಯುವ ನಿದಿ ಯೋಜನೆಗಳಡಿ ನೋಂದಣಿಯಾದ ಫಲಾನುಭವಿಗಳನ್ನು ಗ್ಯಾರಂಟಿ ಅನುಷ್ಟಾನ ಇಲಾಖೆಯ ಅಧಿಕಾರಿಗಳು ಮರು ಪರಿಶೀಲಿಸಿ, ಸೌಲಭ್ಯಗಳನ್ನು ಒದಗಿಸಬೇಕು ಎಂದು ಪಂಚ ಗ್ಯಾರಂಟಿ ಅನುಷ್ಟಾನ ತಾಲೂಕ ಸಮಿತಿ ಅಧ್ಯಕ್ಷ ಶ್ರೀ ಕೃಷ್ಣಪ್ಪಗೌಡ ಆಲ್ದಾಳ ಅವರು ಸೂಚಿಸಿದರು. ಶಹಾಪುರ ತಾಲೂಕ ಪಂಚಾಯತ ಸಭಾಂಗಣದಲ್ಲಿ ಜುಲೈ 18 ರಂದು ನಡೆದ ಪಂಚ ಗ್ಯಾರಂಟಿ ಯೋಜನೆಗಳ…

  • ರೈತರ ಆತ್ಮಹತ್ಯೆ ತಡೆಯಲು ತಕ್ಷಣ ಬರ ಘೋಷಿಸಿ: ವಿಶ್ವನಾಥ ನಾಯಕ ಒತ್ತಾಯ

    ರೈತರ ಆತ್ಮಹತ್ಯೆ ತಡೆಯಲು ತಕ್ಷಣ ಬರ ಘೋಷಿಸಿ: ವಿಶ್ವನಾಥ ನಾಯಕ ಒತ್ತಾಯ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ಶೇ. 25 ಕ್ಕೂ ಕಮ್ಮಿ ಮಳೆಯಾದ ಹಿನ್ನೆಲೆಯಲ್ಲಿ ಕೂಡಲೇ ಬರ ಪೀಡಿತ ಎಂದು ಘೋಷಿಸಬೇಕು ಬರಪರಿಹಾರ ಕಾಮಗಾರಿ ಆರಂಭಿಸಬೇಕು ಮತ್ತು ರೈತರ ಸಾಲಮನ್ನಾ ಮಾಡಬೇಕು ಎಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಬಿ.ಎನ್. ವಿಶ್ವನಾಥ ನಾಯಕ ಒತ್ತಾಯಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಮಳೆಯೇ ಬಾರದ ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳು ನೀರಿಲ್ಲದೇ ಒಣಗುತ್ತಿವೆ. ಒಣಗಿದ ಬೆಳೆ ಕಂಡು ರೈತರು ಕಂಗಾಲಾಗಿದ್ದಾರೆ. ಮಳೆ ಬಾರದೇ ಇದ್ದುದರಿಂದ ರೈತರು…

  • ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ

    ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ

    ಸುದ್ದಿ ಬೆಳಕು ವಾರ್ತೆ ಹುಣಸಗಿ : ಜುಲೈ 21ರಂದು ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ಯಾದಗಿರಿ, ಹುಣಸಗಿ ತಾಲೂಕು ಆರೋಗ್ಯ ಇಲಾಖೆ ಹಾಗೂ ಬೆಂಗಳೂರಿನ ಪ್ರಸಿದ್ಧ ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ನೇತ್ರ 3 ಶಸ್ತ್ರಚಿಕಿತ್ಸಾ ಹಾಗೂ ರಕ್ತದಾನ ಶಿಬಿರವನ್ನು ಹುಣಸಗಿ ಯುಕೆಪಿ ಕ್ಯಾಂಪ್ ನ ನೀಲಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ.ಎನ್. ದಂಡಿನ್ ಹೇಳಿದರು. ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯೊಂದಿಗೆ ಮಾತನಾಡಿ, ಜಿಪಂ ಮಾಜಿ ಸದಸ್ಯ ನಾಗಣ್ಣ ಸಾಹು ದಂಡಿನ್ ಅವರ…

  • ಯಾದಗಿರಿ ಜಿಲ್ಲೆಯನ್ನು ‘ತೀವ್ರ ಬರಪೀಡಿತ’ ಎಂದು ಘೋಷಿಸಲು AIKKMS ಆಗ್ರಹ

    ಯಾದಗಿರಿ ಜಿಲ್ಲೆಯನ್ನು ‘ತೀವ್ರ ಬರಪೀಡಿತ’ ಎಂದು ಘೋಷಿಸಲು AIKKMS ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಳೆ ಕೊರತೆಯಿಂದ ತತ್ತರಿಸಿರುವ ಯಾದಗಿರಿ ಜಿಲ್ಲೆಯನ್ನು ತಕ್ಷಣವೇ ‘ತೀವ್ರ ಬರಪೀಡಿತ’ ಎಂದು ಘೋಷಿಸಬೇಕು ಹಾಗೂ ಪ್ರತಿ ಎಕರೆಗೆ 50 ಸಾವಿರ ರೂ. ಬೆಳೆ ನಷ್ಟ ಪರಿಹಾರ ನೀಡಬೇಕು ಎಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (AIKKMS) ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಈ ಕುರಿತು ಜುಲೈ 18ರಂದು ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿರುವ ಸಂಘಟನೆ, ಜಿಲ್ಲೆಯ ರೈತರು ಎದುರಿಸುತ್ತಿರುವ ಭೀಕರ ಪರಿಸ್ಥಿತಿಯನ್ನು ವಿವರಿಸಿದೆ. ಬತ್ತಿದ…

Suddi Belaku