Category: ಯಾದಗಿರಿ ಸುದ್ದಿ

News Acritical

  • ಯರಗೋಳ, ಹೋರುಂಚಾದಲ್ಲಿ ₹7 ಕೋಟಿ ರಸ್ತೆ ಕಾಮಗಾರಿಗೆ ಶಾಸಕ ಕಂದಕೂರ ಚಾಲನೆ

    ಯರಗೋಳ, ಹೋರುಂಚಾದಲ್ಲಿ ₹7 ಕೋಟಿ ರಸ್ತೆ ಕಾಮಗಾರಿಗೆ ಶಾಸಕ ಕಂದಕೂರ ಚಾಲನೆ

    ಡೆವಲಪ್ಮೆಂಟ್ ಪಾಲಿಟಿಕ್ಸ್ ಮಾಡಿ, ಸೆಟಲ್‌ಮೆಂಟ್ ರಾಜಕಾರಣ ಬೇಡ: ಡಿಕೆಶಿಗೆ ಶಾಸಕ ಕಂದಕೂರ ಸಲಹ ಸುದ್ದಿ ಬೆಳಕು ವಾರ್ತೆ  ಯಾದಗಿರಿ : ರಾಜ್ಯದಲ್ಲಿ ಅಧಿಕಾರ ನಡೆಸಿದ ಮೂರು ಜನ ಮುಖ್ಯಮಂತ್ರಿಗಳು ತಮ್ಮ ಜನಪರ ಆಡಳಿತದಿಂದ ಜನ ಮಾನಸದಲ್ಲಿ ಅಚ್ಚಳಿಯದಂತೆ ಉಳಿದಿದ್ದಾರೆ ಎಂದು ಗುರಮಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರು ತಿಳಿಸಿದರು. ಸೋಮವಾರ ಮತಕ್ಷೇತ್ರದ ಹೋರುಂಚಾ ಹಾಗೂ ಯರಗೋಳ ಗ್ರಾಮದಲ್ಲಿ ಕೆಕೆಆರ್ ಡಿಬಿಯ ಮೈಕ್ರೋ ಎಸ್.ಸಿಪಿ ಯೋಜನೆಯಡಿ ಥಾವರು ನಾಯಕ ತಾಂಡಾದಿಂದ ತಾನು ನಾಯಕ ತಾಂಡಾವರೆಗೆ ಮುಖ್ಯರಸ್ತೆ 4 ಕೋಟಿ…

  • ವಸತಿ ನಿಲಯಗಳಲ್ಲಿ ಬಯೊಮೆಟ್ರಿಕ್ ದುರ್ಬಳಕೆ : ಕರವೇ ಗಂಭೀರ ಆರೋಪ

    ವಸತಿ ನಿಲಯಗಳಲ್ಲಿ ಬಯೊಮೆಟ್ರಿಕ್ ದುರ್ಬಳಕೆ : ಕರವೇ ಗಂಭೀರ ಆರೋಪ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಗುರುಮಠಕಲ್ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಪ. ಜಾ. ಮತ್ತು ಪ. ಪಂ. ವಸತಿ ನಿಲಯಗಳಲ್ಲಿ ಬಯೊಮೆಟ್ರಿಕ್ ಹಾಜರಾತಿ ಇದ್ದರೂ ಅದರ ಸದ್ಬಳಕೆ ಆಗದೇ ವಾರ್ಡನ್ ಗಳು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಇದರಲ್ಲಿ ತಾಲ್ಲೂಕು ಅಧಿಕಾರಿಗಳು ಸಿಬ್ಬಂದಿ ವರ್ಗದವರು ಶಾಮೀಲಾಗಿದ್ದು, ಇವರ ವಿರುದ್ಧ ಕ್ರಮ ಕೈಗೊಂಡು ತಪ್ಪಿತಸ್ಥ ಅಧಿಕರಿಗಳ ಅಮಾನತು ಮಾಡುವಂತೆ ಕರವೇ ಜಿಲ್ಲಾ ಪ್ರಧಾನಕಾರ್ಯದರ್ಶಿ ಸಿದ್ದು ನಾಯಕ ಹತ್ತಿಕುಣಿ ಆಗ್ರಹಿಸಿದರು. ಗುರುಮಠಕಲ್ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ…

  • ಅನುಭವಿ ನಾಯಕ ರುದ್ರಪ್ಪ ಲಮಾಣಿ ಅವರಿಗೆ ಡಿಸಿಎಂ ಪಟ್ಟ ನೀಡಬೇಕು: ಆಕಾಶ ಪವಾರ

    ಅನುಭವಿ ನಾಯಕ ರುದ್ರಪ್ಪ ಲಮಾಣಿ ಅವರಿಗೆ ಡಿಸಿಎಂ ಪಟ್ಟ ನೀಡಬೇಕು: ಆಕಾಶ ಪವಾರ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಹಾಲಿ ಶಾಸಕ ಹಾಗೂ ಮಾಜಿ ಉಪ ಸಭಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವರಿಗೆ ರಾಜ್ಯ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ (DCM) ಸ್ಥಾನ ನೀಡಬೇಕು ಅಖಿಲ ಭಾರತ ಬಂಜಾರಾ ಸೇವಾ ಸಂಘ ಹಾಗೂ ಜಿಲ್ಲಾ ಅಧ್ಯಕ್ಷರು ಹಾಗೂ ಕಾಂಗ್ರೆಸ ಯುವ ಮುಖಂಡರಾದ ಆಕಾಶ ಪವಾರ ಒತ್ತಾಯಿಸಿದೆ. ​ಸಮಾಜದ ಹಿರಿಯ ನಾಯಕ ಮತ್ತು ಅನುಭವಿ ರಾಜಕಾರಣಿ ಆದ ​ರುದ್ರಪ್ಪ ಲಮಾಣಿ ಅವರು ಲಮಾಣಿ ಸಮಾಜದ ಅತ್ಯಂತ ಹಿರಿಯ ಮತ್ತು…

  • ಗ್ರಾಮೀಣ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು: ಶಾಸಕ ಕಂದಕೂರ

    ಗ್ರಾಮೀಣ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು: ಶಾಸಕ ಕಂದಕೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸರ್ಕಾರದಿಂದ ಬಿಡುಗಡೆಗೊಳಿಸುವ ಅನುದಾನವನ್ನ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಅಧಿಕಾರಿಗಳು ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುವಂತೆ ಶಾಸಕ ಶರಣಗೌಡ ಕಂದಕೂರ ಸಂಬಂಧಿಸಿದ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಬುಧವಾರ ಗುರಮಠಕಲ್ ಕ್ಷೇತ್ರದ ಚಿನ್ನಾಕಾರ್ ಕ್ರಾಸ್ ಬಳಿ ಕೆಕೆಆರ್ಡಿಬಿ ಮೈಕ್ರೋ ಸಾಮಾನ್ಯ ಯೋಜನೆ ಅಡಿಯಲ್ಲಿ 9.90 ಕೋಟಿ ರೂ.ವೆಚ್ಛದಲ್ಲಿ ಮತಕ್ಷೇತ್ರದ ಸಿಂದಗಿ-ಕೊಡಂಗಲ್ ರಾಜ್ಯ ಹೆದ್ದಾರಿ 16 ಮುಖ್ಯ ರಸ್ತೆ ಆಯ್ದು ಭಾಗಗಳಲ್ಲಿ ಮರು ಡಾಂಬರಕರಣ ಹಾಗೂ ಗುರುಮಠಕಲ್ ಪಟ್ಟಣದ ರಸ್ತೆ…

  • ಯಾದಗಿರಿಯಲ್ಲಿ ಭಾರಿ ಮಳೆ ಅಬ್ಬರ – ಜಲಾವೃತ ರಸ್ತೆಗಳು, ಸಾರ್ವಜನಿಕರ ಆಕ್ರೋಶ

    ಯಾದಗಿರಿಯಲ್ಲಿ ಭಾರಿ ಮಳೆ ಅಬ್ಬರ – ಜಲಾವೃತ ರಸ್ತೆಗಳು, ಸಾರ್ವಜನಿಕರ ಆಕ್ರೋಶ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ನಸುಕಿನ ಜಾವದಿಂದಲೇ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಯಾದಗಿರಿ ನಗರ ಸೇರಿದಂತೆ ಹಲವೆಡೆ ವರುಣನ ಆರ್ಭಟ ಮುಂದುವರಿದಿದೆ. ನಗರದ ಪ್ರಮುಖ ರಸ್ತೆಗಳು ಮಳೆ ನೀರಿನಿಂದ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶೇಷವಾಗಿ ನಗರದ ಕೇಂದ್ರ ಬಸ್ ನಿಲ್ದಾಣ ಸಮೀಪದ ರಸ್ತೆ ಸಂಪೂರ್ಣ ನೀರಿನಿಂದ ಆವೃತವಾಗಿದ್ದು, ಬೈಕ್ ಹಾಗೂ ಇತರೆ ವಾಹನಗಳು ಜಲ ದಿಗ್ಬಂಧನಕ್ಕೆ ಸಿಲುಕಿದ ದೃಶ್ಯಗಳು ಕಂಡುಬಂದವು. ರಸ್ತೆ ಮಧ್ಯೆ ನಿಂತ ವಾಹನಗಳ ಸುತ್ತ ಮಳೆ…

  • ಡೀಸೆಲ್ ಕೊರತೆ: ಸುರಪುರದಲ್ಲಿ ರಾತ್ರಿಯಿಡೀ ಸಾಲಿನಲ್ಲಿ ನಿಂತ ಜನರು

    ಡೀಸೆಲ್ ಕೊರತೆ: ಸುರಪುರದಲ್ಲಿ ರಾತ್ರಿಯಿಡೀ ಸಾಲಿನಲ್ಲಿ ನಿಂತ ಜನರು

    ಸುದ್ದಿ ಬೆಳಕು ವಾರ್ತೆ ಸುರಪುರ: ನಗರದಲ್ಲಿ ಡೀಸೆಲ್ ಕೊರತೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪೆಟ್ರೋಲ್ ಬಂಕ್‌ಗಳ ಮುಂದೆ ವಾಹನಗಳ ದೀರ್ಘ ಸಾಲು ಕಾಣಿಸಿಕೊಂಡು, ಪ್ರಮುಖ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಗರಸಭೆ ಸಮೀಪದ ಪೆಟ್ರೋಲ್ ಬಂಕ್ ಬಳಿ ಸೋಮವಾರ ತಡರಾತ್ರಿ ಕಂಡುಬಂತು. ಡೀಸೆಲ್ ಪಡೆಯಲು ಟ್ರ್ಯಾಕ್ಟರ್, ಲಾರಿ, ಬೈಕ್ ಸೇರಿದಂತೆ ನೂರಾರು ವಾಹನಗಳು ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಸಾಲುಗಟ್ಟಿ ನಿಂತಿದ್ದವು. ವಾಹನಗಳನ್ನು ರಸ್ತೆ ಮಧ್ಯೆಯೇ ಅಡ್ಡಲಾಗಿ ನಿಲ್ಲಿಸಿದ್ದರಿಂದ ಬಸ್ ನಿಲ್ದಾಣದಿಂದ ವಿವಿಧ ಕಡೆಗಳಿಗೆ ತೆರಳುವ ವಾಹನಗಳಿಗೆ ರಸ್ತೆ ಇಲ್ಲದಂತಾಯಿತು.…

  • ರಾಮಸಮುದ್ರ ಗ್ರಾಮದಲ್ಲಿ ಚಿರತೆ ದಾಳಿ – ಎಮ್ಮೆ ಕರು ಬಲಿ, ರೈತರಲ್ಲಿ ಆತಂಕ

    ರಾಮಸಮುದ್ರ ಗ್ರಾಮದಲ್ಲಿ ಚಿರತೆ ದಾಳಿ – ಎಮ್ಮೆ ಕರು ಬಲಿ, ರೈತರಲ್ಲಿ ಆತಂಕ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ತಾಲೂಕಿನ ರಾಮಸಮುದ್ರ ಗ್ರಾಮದಲ್ಲಿ ಚಿರತೆ ದಾಳಿಗೆ ಎಮ್ಮೆ ಕರು ಬಲಿಯಾದ ಘಟನೆ ಗ್ರಾಮಸ್ಥರಲ್ಲಿ ಭೀತಿ ಉಂಟುಮಾಡಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆರೋಪಿಸಿದ್ದಾರೆ. ಗ್ರಾಮದ ರೈತ ಆಂಜನೇಯ ತಂ. ಬುಗ್ಗಪ್ಪ ಬಾಗ್ಲಿ ಅವರ ಜಮೀನಿನಲ್ಲಿ ಮೇಯುತ್ತಿದ್ದ ಎಮ್ಮೆ ಕರುವನ್ನು ರವಿವಾರ ಬೆಳಿಗ್ಗೆ ಚಿರತೆ ಎಳೆದುಕೊಂಡು ಹೋಗಿ ಗವಿಯಲ್ಲಿ ತಿಂದು ಹಾಕಿರುವ ಘಟನೆ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಘಟನೆಯ ಮಾಹಿತಿ ತಿಳಿದ ತಕ್ಷಣ ಸಾಮಾಜಿಕ ಹೋರಾಟಗಾರ…

  • ಮೇ 26ರಂದು ಯಾದಗಿರಿಯಲ್ಲಿ ಬಿಜೆಪಿ ಉಗ್ರ ಪ್ರತಿಭಟನೆ

    ಮೇ 26ರಂದು ಯಾದಗಿರಿಯಲ್ಲಿ ಬಿಜೆಪಿ ಉಗ್ರ ಪ್ರತಿಭಟನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರ ಸೇರಿದಂತೆಯೇ ಇಡಿ ಯಾದಗಿರಿ ಸುಮಾರು 16 ಕ್ಕೂ ಹೆಚ್ಚು ಬೇಡಿಕೆಗಳಿಗೆ ಆಗ್ರಹಿಸಿ ಮೇ 26ರಂದು ನಗರದಲ್ಲಿ ಉಗ್ರ ಹೋರಾಟ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಬಿಜೆಪಿ ಕಾರ್ಯಕಾರಿ ಮಂಡಳಿ ಸದಸ್ಯ ಮಹೇಶರೆಡ್ಡಿ ಮುದ್ದಾಳ ಹೇಳಿದ್ದಾರೆ. ಇಲ್ಲಿನ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ಅಂದು ಬೆಳಗ್ಗೆ 9ಕ್ಕೆ ಮೈಲಾಪುರ ಅಗಸಿಯಿಂದ ನಗರಸಭೆಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಅಲ್ಲಿಯೇ ಧರಣಿ ಕುಳಿತುಕೊಳ್ಳಲಾಗುವುದು. ಜಿಲ್ಲಾಧಿಕಾರಿ ಮತ್ತು ಪೌರಾಯುಕ್ತರು ಸ್ಥಳಕ್ಕೇ…

  • ನಗರ ಹಾಗೂ ಗ್ರಾಮೀಣ ಭಾಗದ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ತುನ್ನೂರ

    ನಗರ ಹಾಗೂ ಗ್ರಾಮೀಣ ಭಾಗದ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ತುನ್ನೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾ ಕೇಂದ್ರವಾಗಿ ಯಾದಗಿರಿ ನಗರದ ೧೫ ವರ್ಷ ಕಳೆದಿದೆ, ನಗರ ವರ್ಷ-ವರ್ಷಕ್ಕೆ ವಿಸ್ತಾರವಾಗುತ್ತಿದೆ, ಇಲ್ಲಿನ ಜನರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು, ನಾನು ಶಾಸಕನಾಗಿ ಆಯ್ಕೆಯಾಗಿ ೩ ವರ್ಷಗಳಲ್ಲಿ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ಹೊಸಳ್ಳಿ ಕ್ರಾಸ್‌ನಲ್ಲಿ ಹಮ್ಮಿಕೊಂಡಿದ್ದ ಲೋಕೋಪಯೋಗಿ ಇಲಾಖೆಯಿಂದ ೭ ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಿರುವ ಕ್ರಾಸ್‌ನಿಂದ…

  • ದೇವಪುರ ಬಳಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ – ಹಲವರಿಗೆ ಗಾಯ

    ದೇವಪುರ ಬಳಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ – ಹಲವರಿಗೆ ಗಾಯ

    ಸುದ್ದಿ ಬೆಳಕು ವಾರ್ತೆ ಸುರಪುರ : ಜಿಲ್ಲೆಯ ಸುರಪುರ ತಾಲೂಕಿನ ದೇವಪುರ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಹೆದ್ದಾರಿಯಿಂದ ಪಕ್ಕಕ್ಕೆ ಇಳಿದು ಅಪಘಾತಕ್ಕೀಡಾದ ಪರಿಣಾಮ ಹಲವರು ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ದಾವಣಗೆರೆಯಿಂದ ಕಲಬುರ್ಗಿ ಕಡೆಗೆ ತೆರಳುತ್ತಿದ್ದ ಕಲಬುರ್ಗಿ ಬಸ್ ಘಟಕ ಸಂಖ್ಯೆ–3ರ ಬಸ್‌ನ್ನು ಚಾಲಕ ವೇಗವಾಗಿ ಚಲಾಯಿಸುತ್ತಿದ್ದ ವೇಳೆ ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಇಳಿದಿದೆ ಎಂದು ತಿಳಿದು ಬಂದಿದೆ. ಬಸ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದು, ಕ್ಷಣಾರ್ಧದಲ್ಲಿ ಪ್ರಯಾಣಿಕರಲ್ಲಿ…

Suddi Belaku