by
Category: ಯಾದಗಿರಿ ಸುದ್ದಿ
News Acritical

ಮಹಿಳಾ ಮೀಸಲಾತಿ ವಿರೋಧ ಮಹಿಳೆಯರಿಗೆ ಅಪಮಾನ: ಲಲಿತಾ ಅನಪುರ ಕಿಡಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏ.22: ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ಪ್ರಧಾನಮಂತ್ರಿ Narendra Modi ಕೈಗೊಂಡ ಪ್ರಯತ್ನಕ್ಕೆ ವಿಪಕ್ಷಗಳು ಅಡ್ಡಿಯಾಗಿರುವುದು ಮಹಿಳೆಯರಿಗೆ ಮಾಡಿದ ಅಪಮಾನ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕು. ಲಲಿತಾ ಅನಪುರ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದ್ದರೆ ಇತಿಹಾಸದಲ್ಲಿ ಮಹತ್ವದ ಸಾಧನೆಯಾಗುತ್ತಿತ್ತು. ಆದರೆ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ ವಿರೋಧದಿಂದ ಅವರ ಮಹಿಳಾ ವಿರೋಧಿ ನಿಲುವು ಬಯಲಾಗಿದೆ ಎಂದು ಆರೋಪಿಸಿದರು. ಕಾಂಗ್ರೆಸ್…
by

ಸಿಡಿಲು ಅಪ್ಪಳಿ ಮಹಿಳೆ ದಾರುಣ ಸಾವು
ಸುದ್ದಿ ಬೆಳಕು ವಾರ್ತೆ ಹಟ್ಟಿ ಚಿನ್ನದ ಗಣಿ, ಏಪ್ರಿಲ್ 22 : ಸಮೀಪದ ಯರಜಂತಿ ಗ್ರಾಮದ ಬಸವನಬಗಡಿ ದೊಡ್ಡಿಯಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯ ವೇಳೆ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ದುರಗಮ್ಮ (49), ಗಂಡ ಸಾಬಣ್ಣ ನಾಯಕ ಎಂದು ಗುರುತಿಸಲಾಗಿದೆ. ತಾವು ವಾಸಿಸುತ್ತಿದ್ದ ಜಮೀನಿನಲ್ಲಿ ಜಾನುವಾರುಗಳಿಗೆ ಸಂಗ್ರಹಿಸಿದ್ದ ಮೇವಿನ ಬಣವಿಯನ್ನು ಮಳೆಯಿಂದ ರಕ್ಷಿಸಲು ತಾಡಪತ್ರೆ ಹೊದಿಸಿ, ಅಲ್ಲಿಂದ ಸಮೀಪದ ಗುಡಿಸಲಿಗೆ ಮರಳುತ್ತಿದ್ದ ವೇಳೆ ಸಿಡಿಲು ಅಪ್ಪಳಿಸಿ ಸ್ಥಳದಲ್ಲೇ ಅಸು ನೀಗಿದ್ದಾರೆ ಎಂದು…
by

ಕೃಷಿ ಸೌಲಭ್ಯಕ್ಕೆ ಪ್ರತಿಯೊಬ್ಬ ರೈತರು ಎಫ್.ಐ.ಡಿ. ಕಡ್ಡಾಯವಾಗಿ ನೋಂದಣಿಗೆ ಆಹ್ವಾನ
ಸುದ್ದಿ ಬೆಳಕು ವಾರ್ತೆ ಯಾದಗಿರಿ ಏಪ್ರಿಲ್ 21 : ಕೃಷಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಪ್ರತಿಯೊಬ್ಬ ರೈತರಿಗೆ ಎಫ್.ಐ.ಡಿ. ಕಡ್ಡಾಯವಾಗಿ ನೋಂದಣಿಗೆ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಸಹಾಯಕ ಕೃಷಿ ನಿರ್ದೇಶಕರು ಸುರೇಶ.ಬಿ ಅವರು ತಿಳಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಕೃಷಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಪ್ರತಿಯೊಬ್ಬ ರೈತರಿಗೆ ಎಫ್.ಐ.ಡಿ (ಫ್ರೂಟ್) ಅಗತ್ಯವಾಗಿದ್ದು, ಎಫ್.ಐ.ಡಿ ಮಾಡಿಸಿಕೊಳ್ಳದೆ ಇರುವ ರೈತರು ನೋಂದಣಿ ಮಾಡಿಸಿಕೊಳ್ಳಬೇಕು. ಯಾದಗಿರಿ ತಾಲ್ಲೂಕಿನಲ್ಲಿ 98624 ಸರ್ವೆ ನಂಬರ್ಗಳಿದ್ದು, ಇದರಲ್ಲಿ 67039 ಸರ್ವೆ ನಂಬರ್ಗಳ ಎಫ್.ಐ.ಡಿಯಾಗಿವೆ. ಉಳಿದ 31585 ಸರ್ವೆ…
by

ಗುಡುಗು-ಮಿಂಚಿನೊಂದಿಗೆ ಮಳೆ: ಬಿಸಿಲಿನಿಂದ ಬಳಲಿದ ಜನರಿಗೆ ತಂಪಿನ ನಿರಾಳತೆ
ಸುದ್ದಿ ಬೆಳಕು ವಾರ್ತೆ ಗುರುಮಠಕಲ್ ಏಪ್ರಿಲ್ 21 : ಕಳೆದ ಹಲವು ದಿನಗಳಿಂದ ತೀವ್ರ ಬಿಸಿಲಿನ ಬೇಗೆಗೆ ತತ್ತರಿಸಿದ್ದ ಗುರುಮಠಕಲ್ ಜನತೆಗೆ ಮಂಗಳವಾರ ಸಂಜೆ ಗುಡುಗು-ಮಿಂಚಿನೊಂದಿಗೆ ಮಳೆ ಸುರಿದು ಪ್ರಕೃತಿ ತಂಪಿನ ಸ್ಪರ್ಶ ನೀಡಿತು. ಮಧ್ಯಾಹ್ನದ ವೇಳೆಗೆ 40 ಡಿಗ್ರಿ ಸೆಲ್ಸಿಯಸ್ಗೂ ಹೆಚ್ಚು ಉಷ್ಣಾಂಶ ದಾಖಲಾಗಿದ್ದು, ಜನರು ಮನೆಗಳಲ್ಲೇ ಸಿಲುಕುವಂತಾಗಿತ್ತು. ಮಧ್ಯಾಹ್ನದ ವೇಳೆಯಲ್ಲಿ ಉಷ್ಣಾಂಶ ಏರಿಕೆಯಿಂದ ಜನರು ಮನೆಯಿಂದ ಹೊರಬರಲು ಹಿಂಜರಿಯುತ್ತಿದ್ದರೆ, ಸಂಜೆ ಏಕಾಏಕಿ ಆಕಾಶ ಮೋಡಗಳಿಂದ ಆವರಿಸಿಕೊಂಡು ಗಾಳಿ ಜೋರಾಗಿ ಬೀಸತೊಡಗಿತು. ಕೆಲವೇ ಕ್ಷಣಗಳಲ್ಲಿ ಗುಡುಗು-ಮಿಂಚಿನೊಂದಿಗೆ…
by

ಸ್ಥಳಿಯ ಕಾಂಗ್ರೆಸ್ ನಾಯಕರಿಗೆ ಕಟಕಟಿ ಕಿವಿಮಾತು
ಯಾದಗಿರಿ: ಗುರುಮಠಕಲ್ ಮತಕ್ಷೇತ್ರದ ಹತ್ತಿಕುಣಿ ಜಲಾಶಯದ ನಾಲೆಗಳ ಆಧುನಿಕರಣ ಕೆಲಸದ ಕುರಿತು ಜಿಲ್ಲಾ ಕಾಂಗ್ರೆಸ್ನ ಕೆಲ ಸ್ಥಳೀಯ ಮುಖಂಡರು ಸತ್ಯಾಸತ್ಯತೆ ತಿಳಿದುಕೊಂಡು ಹೇಳಿಕೆ ನೀಡುವುದು ಉತ್ತಮವೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಷಚಂದ್ರ ಕಟಕಟಿ ಕಿವಿ ಮಾತು ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಕಳೆದ ನಾಲ್ಕು ದಿನಗಳ ಹಿಂದೇ ರಾಜ್ಯ ಸರ್ಕಾರ ಈ ಕೆಲಸಕ್ಕೆ ಆಡಳಿತ ಅನುಮೋದನೆ ನೀಡಿದ್ದೇ ತಡ, ಇಲ್ಲಿಯ ಕೆಲ ಕಾಂಗ್ರೆಸ್ ಮುಖಂಡರು ಇದನ್ನೇ ಬಂಡವಾಳ ಮಾಡಿಕೊಂಡು, ಇದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅವರೇ…
by

ಸೈದಾಪುರ ವಲಯ ವೀರಶೈವ ಸಮಾಜದಿಂದ ಬಸವೇಶ್ವರ ಜಯಂತಿ ಆಚರಣೆ
ಮಹಾತ್ಮರನ್ನು ಪ್ರತಿನಿತ್ಯ ಸ್ಮರಣೆ ಮಾಡಬೇಕು: ಸೋಮೇಶ್ವರಾನಂದ ಸುದ್ದಿ ಬೆಳಕು ವಾರ್ತೆ ಸೈದಾಪುರ ಏಪ್ರಿಲ್ 20 : ಅನುಭವ ಮಂಟಪ ರಚಿಸಿ ನಾಡಿಗೆ ಹೊಸ ಕಲ್ಪನೆಯನ್ನು ಕೊಟ್ಟ ಮಹಾತ್ಮರನ್ನು ಪ್ರತಿನಿತ್ಯ ಸ್ಮರಣೆ ಮಾಡಬೇಕು. ಬಸವಣ್ಣವನರ ವಿಚಾರಧಾರೆಗಳು ಜಯಂತಿ ಆಚರಣೆಗೆ ಸೀಮಿತವಾಗದೆ ಲಿಂಗದಾರಿಗಳಾಗಿ ದಿನಾ ನಿತ್ಯದಲ್ಲಿ ಪಾಲನೆ ಮಾಡಬೇಕು ಎಂದು ಸಿದ್ಧಚೇತನಾಶ್ರಮದ ಸಿದ್ಧಾರೂಢ ಮಠದ ಸೋಮೇಶ್ವರಾನಂದ ಮಹಾಸ್ವಾಮಿಗಳು ಆರ್ಶೀವಚನ ನೀಡಿದರು. ಪಟ್ಟಣದಲ್ಲಿ ವಲಯ ವೀರಶೈವ ಸಮಾಜದ ವತಿಯಿಂದ ವಿಶ್ವನಾಥ ಮಂದಿರದಲ್ಲಿ ಹಮ್ಮಿಕೊಂಡ ಬಸವೇಶ್ವರ ಜಯಂತಿ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು. ಬಸವಣ್ಣನವರು…
by

ಗುರುಗಳಿಗೆ ಕೃತಜ್ಞತೆ: 25 ವರ್ಷಗಳ ಬಳಿಕ ವಿದ್ಯಾರ್ಥಿಗಳ ಭಾವನಾತ್ಮಕ ಸ್ನೇಹ ಸಮ್ಮಿಲನ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 20: ವಿದ್ಯಾರ್ಥಿಗಳು ಕಲಿತ ಶಾಲೆಯನ್ನು ಮತ್ತು ಅಕ್ಷರ ಕಲಿಸಿದ ಗುರುಗಳನ್ನು ಸ್ಮರಿಸುವುದು ಸಂಸ್ಕಾರದ ಸಂಕೇತ. ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರಿ ಇಂತಹ ಗುರು ವಂದನಾ ಕಾರ್ಯಕ್ರಮ ಹಮ್ಮಿಕೊಂಡಿರುವುದು ಹೆಮ್ಮೆಯ ವಿಷಯ ಎಂದು ನಿವೃತ್ತ ಶಿಕ್ಷಕ ಸುಂದರ್ ಅವರು ಅಭಿಪ್ರಾಯಪಟ್ಟರು. ನಗರದ ಚಿರಂಜೀವಿ ಮೆಥೋಡಿಸ್ಟ್ ಕನ್ನಡ ಪ್ರೌಢಶಾಲೆಯ ಆವರಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ 2000–2001ನೇ ಸಾಲಿನ ಕನ್ನಡ ಮಾಧ್ಯಮ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ‘ಗುರು ವಂದನಾ ಹಾಗೂ ಸ್ನೇಹ ಸಮ್ಮಿಲನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು…
by

ನಗನೂರು ದುರಂತ ಪೀಡಿತರಿಗೆ ಪರಿಹಾರ ಘೋಷಣೆ ಮಾಡಿ: ಶಾಸಕ ಕಂದಕೂರ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 20 : ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಸಂಭವಿಸಿದ ದುರಂತ ಘಟನೆಗಳ ಪೀಡಿತ ಕುಟುಂಬಗಳಿಗೆ ತಕ್ಷಣ ಪರಿಹಾರಧನ ಘೋಷಿಸಬೇಕು ಎಂದು ಶಾಸಕ ಶರಣಗೌಡ ಕಂದಕೂರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಾರ್ಚ್ 29, 2026ರಂದು ನಗನೂರು ಗ್ರಾಮದಲ್ಲಿ ರೈತನ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಒಂದೇ ಕುಟುಂಬದ ನಾಲ್ವರು ದಲಿತ ಮಕ್ಕಳು ಬಿಸಿಲಿನ ತಾಪದ ನಡುವೆ ಮೃತಪಟ್ಟಿದ್ದರು. ಈ ದುರ್ಘಟನೆಗೆ ಸುಮಾರು 20 ದಿನಗಳು ಕಳೆದರೂ ಸರ್ಕಾರದಿಂದ ಯಾವುದೇ ಪರಿಹಾರ ಘೋಷಣೆ ಅಥವಾ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ
















