ವಿಶೇಷಚೇತನರು ಸರ್ಕಾರದ ಸೌಲಭ್ಯ ಪಡೆದು ಮುಖ್ಯವಾಹಿನಿಗೆ ಬರಲಿ: ಶಾಸಕ ತುನ್ನೂರ್

Posted by

ಸುದ್ದಿ ಬೆಳಕು ವಾರ್ತೆ

ಯಾದಗಿರಿ, ಏಪ್ರಿಲ್ 23 : ವಿಶೇಷಚೇತನರು ದೈಹಿಕ ನ್ಯೂನತೆಗೆ ಎದೆಗುಂದದೆ, ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರು ಹೇಳಿದರು

​ಗುರುವಾರ ಶಾಸಕರ ಕಾರ್ಯಾಲಯದಲ್ಲಿ 2025-26ನೇ ಸಾಲಿನ ಶಹಾಪುರ ತಾಲೂಕು ಪಂಚಾಯಿತಿಯ ಅನಿರ್ಬಂಧಿತ ಅಭಿವೃದ್ಧಿ ಅನುದಾನ ಯೋಜನೆಯಡಿ ಯಾದಗಿರಿ ಮತಕ್ಷೇತ್ರದ ಇಬ್ಬರು ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಅವರು ಮಾತನಾಡಿದರು.

​ಸಾಧನೆಯ ಹಾದಿಯಲ್ಲಿ ಮುನ್ನಡೆಯಿರಿ, ವಿಶೇಷಚೇತನರು ಮಾನಸಿಕವಾಗಿ ಕುಗ್ಗಬಾರದು. ಇಂದು ಪ್ರತಿಯೊಂದು ರಂಗದಲ್ಲೂ ವಿಶೇಷಚೇತನರು ತಮ್ಮದೇ ಆದ ಸಾಧನೆ ಮಾಡುತ್ತಿದ್ದಾರೆ. ಅದೇ ರೀತಿ ಈ ಭಾಗದ ವಿಶೇಷಚೇತನರೂ ಕೂಡ ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಬರಬೇಕು ಎಂದು ಪ್ರೋತ್ಸಾಹಿಸಿದರು.

​ಈ ಸಂದರ್ಭದಲ್ಲಿ ಶಹಾಪುರ ತಾಲೂಕು ಪಂಚಾಯತ್ ಲೆಕ್ಕಾಧಿಕಾರಿ ಶಾರದಮ್ಮ, ಪುನರ್ವಸತಿ ಕಾರ್ಯಕರ್ತರು ನಾಗರಾಜ, ಕಾಂಗ್ರೆಸ್ ಮುಖಂಡರಾದ ಶರಣಗೌಡ ಬಲಕಲ್ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

Suddi Belaku