by
Tag: ಕರ್ನಾಟಕ ಸುದ್ದಿ

ಗುರುಮಠಕಲ್ನಲ್ಲಿ ಪೋಲೇಲ ಯಲ್ಲಮ್ಮ ದೇವಿ 6ನೇ ಜಾತ್ರಾ ಮಹೋತ್ಸವ ಸಂಭ್ರಮ
ಸುದ್ದಿ ಬೆಳಕು ವಾರ್ತೆ ಗುರುಮಠಕಲ್: ಪಟ್ಟಣದ ನಗರೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಪೋಲೇಲ ಯಲ್ಲಮ್ಮ ದೇವಿಯ 6ನೇ ಜಾತ್ರಾ ಮಹೋತ್ಸವವು ಶ್ರದ್ಧಾಭಕ್ತಿ ಹಾಗೂ ಸಡಗರದಿಂದ ನೆರವೇರಿತು. ಆಷಾಢ ಮಾಸದ ನಾಗರ ಅಮಾವಾಸ್ಯೆ ಪ್ರಯುಕ್ತ ನಡೆದ ಉತ್ಸವದಲ್ಲಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ ಭಕ್ತರು ಪಾಲ್ಗೊಂಡು ದೇವಿಯ ದರ್ಶನ ಪಡೆದು ನೈವೇದ್ಯ ಸಮರ್ಪಿಸಿದರು. ಉತ್ಸವದ ಅಂಗವಾಗಿ ಯಲ್ಲಮ್ಮ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಿದವು. ದೇವಿಯ ದರ್ಶನಕ್ಕಾಗಿ ಭಕ್ತರು ಸರದಿಯಲ್ಲಿ ನಿಂತು ಪೂಜೆ…

ಮುಂಡರಗಿ ಮಾಳಿ ಕೆರೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ತಾಲೂಕಿನ ಮುಂಡರಗಿ ಗ್ರಾಮದಲ್ಲಿ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ ಅಂಡ್ ಆಜೀವಿಕ್ ಮಿಷನ್ ಗ್ರಾಮೀಣ ಯೋಜನೆಯಡಿ ಪ್ರಗತಿಯಲ್ಲಿದ್ದ ಮಾಳಿ ಕೆರೆಯ ಸಮಗ್ರ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪಂಚಾಯಿತಿ ಮುಖ್ಯ ಕರ್ಯನರ್ವಾಹಕ ಅಧಿಕಾರಿಗಳಾದ ಶ್ರೀ ಲವೀಶ್ ಓರಡಿಯಾ ರವರು ಆ.೧೨ ರಂದು ಭೇಟಿ ನೀಡಿ ಕಾಮಗಾರಿಯ ಭೌತಿಕ ಸ್ಥಿತಿ ಹಾಗೂ ಪ್ರಗತಿ ವೀಕ್ಷಿಸಿದರು. ಕಾಮಗಾರಿ ಸ್ಥಳದಲ್ಲಿ ಕುಡಿಯುವ ನೀರು, ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಶುದ್ಧ ಕುಡಿಯುವ ನೀರಿನ ಘಟಕದಿಂದ…
by

ಪತ್ರಕರ್ತರ ಧ್ವನಿ ಸಂಘದಿಂದ ಶಾಸಕ ದರ್ಶನಾಪುರರಿಗೆ ಸನ್ಮಾನ
ಸುದ್ದಿ ಬೆಳಕು ವಾರ್ತೆ ಶಹಾಪುರ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ವತಿಯಿಂದ ಶಾಸಕ ಹಾಗೂ ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರನ್ನು ಸನ್ಮಾನಿಸಲಾಯಿತು. ಸಂಘದ ಪದಾಧಿಕಾರಿಗಳು ಶಾಸಕರಿಗೆ ಶಾಲು ಹೊದಿಸಿ, ಹಾರ ಹಾಕಿ ಗೌರವಿಸಿದರು. ಬಳಿಕ ಪತ್ರಕರ್ತರ ಸಂಘಟನೆಯ ಚಟುವಟಿಕೆಗಳು ಹಾಗೂ ಪತ್ರಕರ್ತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಪತ್ರಕರ್ತರು ಸಮಾಜದ ಆಗುಹೋಗುಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿಯುತ ಕೆಲಸ ಮಾಡುತ್ತಿದ್ದಾರೆ. ಪತ್ರಕರ್ತರ ಸಮಸ್ಯೆಗಳ…
by

ಯಾದಗಿರಿ ರಸ್ತೆ, ಪಾದಚಾರಿ ಮಾರ್ಗ ಪರಿಶೀಲಿಸಿದ ಡಿಸಿ; ಒತ್ತುವರಿ ತೆರವಿಗೆ ಸೂಚನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ವಿವಿಧಡೆ ಬುಧವಾರ ಬೆಳಂಬೆಳಗ್ಗೆ ಮಿಂಚಿನ ಸಂಚಾರ ನಡೆಸಿರುವ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಅವರು, ಇಲ್ಲಿನ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಪರಿಶೀಲನೆ ಮಾಡಿದರು. ನಗರದ ಡಿಗ್ರಿ ಕಾಲೇಜಿನಿಂದ ಕನಕ ಸರ್ಕಲ್ ಹೋಗುವ ರಸ್ತೆಗೆ ತೆರಳಿದ ಅವರು, ರಸ್ತೆ, ಪಾದಚಾರಿ ಮಾರ್ಗ, ಮಾರುಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆ ಮತ್ತು ಮೂಲಸೌಕರ್ಯಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಒಳರಸ್ತೆ ಪರಿಶೀಲನೆ ನಡೆಸಿ, ರಸ್ತೆಯ ಅಗಲ ಹಾಗೂ…
by

ಆ.16ರಂದು ಯಾದಗಿರಿಯಲ್ಲಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಸಮಾರಂಭ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ (ರಿ.) ಬೆಂಗಳೂರು, ಜಿಲ್ಲಾ ಘಟಕ ಯಾದಗಿರಿ ವತಿಯಿಂದ ವಿಶೇಷ ಉಪನ್ಯಾಸ, ಅಭಿನಂದನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆ.16ರಂದು ಬೆಳಿಗ್ಗೆ 10.30ಕ್ಕೆ ಯಾದಗಿರಿ ನಗರದ ಚಿತ್ತಾಪುರ ರಸ್ತೆಯಲ್ಲಿರುವ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಡಾ.ರವೀಂದ್ರನಾಥ ಎಸ್ ಹೊಸ್ಮನಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ…
by

ಜಿಲ್ಲಾ ಹಿರಿಯ ತೆರಿಗೆ ಸಲಹೆಗಾರ ಪ್ರವೀಣ್ ಕುಮಾರ್ ವಿಭೂತಿಗೆ ಸನ್ಮಾನ.
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಪ್ರತಿ ವರ್ಷದಂತೆ ಈ ವರ್ಷವೂ ನಡೆದ ತೆರಿಗೆ ಸಲಹೆಗಾರರ ಸಮ್ಮೇಳನದಲ್ಲಿ ಯಾದಗಿರಿ ಹಿರಿಯ ಸಲಹೆಗಾರರನ್ನು ಗುರುತಿಸಿ ಸನ್ಮಾನಗೈದ ವೇದಿಕೆಯ ಕುರಿತು ಮಾತನಾಡಿದ ಜಿಲ್ಲಾಧ್ಯಕ್ಷ ನಾಗಪ್ಪ ಮೊಗದಂಪೂರ್ ಇತ್ತೀಚಿಗೆ ಕೋಲಾರ ಜಿಲ್ಲೆ ಅಜ್ಜಪ್ಪನಹಳ್ಳಿಯಲ್ಲಿ 2026-27 ಸಾಲಿನ ರಾಷ್ಟ್ರೀಯ ತೆರಿಗೆ ಸಮ್ಮೇಳನದಲ್ಲಿ ಸತತವಾಗಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ ಯಾದಗಿರಿ ಜಿಲ್ಲೆಯ ಹಿರಿಯರು ಹಾಗೂ ಖಜಾಂಚಿ ಆಗಿರುವ ಪ್ರವೀಣ್ ಕುಮಾರ್ ಅವರಿಗೆ ಈ ವರ್ಷದ ಹಿರಿಯ ನಾಗರಿಕರ ಸನ್ಮಾನ ಸಿಕ್ಕಿದ್ದು ಸಂತಸವಾಗಿದೆ ಹಲವು…
by

ಬಿಡದಿ ಟೌನ್ಶಿಪ್ ಪಾದಯಾತ್ರೆಯಲ್ಲಿ ರೈತರಿಲ್ಲ, ನಿಖಿಲ್ ರಾಜಕೀಯ ಭವಿಷ್ಯಕ್ಕಾಗಿ ಹೋರಾಟ: ಸಿಎಂ ಡಿಕೆಶಿ
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಬಿಡದಿ ಟೌನ್ ಶಿಪ್ ವಿರೋಧಿಸಿ ಬಿಜೆಪಿ- ಜೆಡಿಎಸ್ ಮಾಡುತ್ತಿರುವ ಪಾದಯಾತ್ರೆಯಲ್ಲಿ ಯಾವ ರೈತರೂ ಇಲ್ಲ. ತಮ್ಮ ಮನೆಯ ಹುಡುಗನ (ನಿಖಿಲ್ ಕುಮಾರಸ್ವಾಮಿ) ರಾಜಕೀಯ ಭವಿಷ್ಯಕ್ಕಾಗಿ ಮಾಡುತ್ತಿರುವ ಹೋರಾಟ ಇದು” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಮಾಲೂರಿನಲ್ಲಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು. ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ಮಾಡುತ್ತಿರುವ ಪಾದಯಾತ್ರೆಯಲ್ಲಿ ದೇವೇಗೌಡರು ಭಾಗಿಯಾಗಿದ್ದಾರೆ ಎಂದು ಹೇಳಿದಾಗ “ಬೇರೆ ಕ್ಷೇತ್ರದಲ್ಲಿರುವ ಪಕ್ಷದ ಕಾರ್ಯಕರ್ತರನ್ನು…
by

ಬೆಂಗಳೂರಿನಲ್ಲಿ ಕನ್ನಡಿಗ ಯುವಕನ ಮೇಲಿನ ಹಲ್ಲೆ ಖಂಡನಾರ್ಹ : ರಾಚನಗೌಡ ಮುದ್ನಾಳ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕನ್ನಡದಲ್ಲಿ ಮಾತನಾಡಿದಕ್ಕೆ ಯಾದಗಿರಿ ಮೂಲದ ಡೆಲಿವರಿ ಬಾಯ್ ಮೇಲೆ ಬೆಂಗಳೂರಿನಲ್ಲಿ ನಡೆದ ಹಲ್ಲೆ ಘಟನೆಯನ್ನು ಬಿಜೆಪಿಯ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಯಾದಗಿರಿ ಮೂಲದ ಬಸವರಾಜ್ ಎಂಬ ಯುವಕ ಜೆಪ್ಟೋ ಕಂಪನಿಯಲ್ಲಿ ಡೆಲಿವರಿ ಕೆಲಸ ಮಾಡುತ್ತಿದ್ದಾನೆ. ಆಗಸ್ಟ್ 8 ರಂದು ಮುಂಜಾನೆ ಬೆಂಗಳೂರಿನ ಸಂತೋಷ್ ನಗರದಲ್ಲಿ ಡೆಲಿವರಿ ಮುಗಿಸಿ ಮನೆಗೆ ತೆರಳುವಾಗ ಕನ್ನಡದಲ್ಲಿ ಮಾತನಾಡಿದ ಕಾರಣಕ್ಕೆ ನೆರೆ ರಾಜ್ಯದ…
by

ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳು, ಪೋಕ್ಸೋ ಕಾಯ್ದೆ ಕುರಿತು ಜಾಗೃತಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ನಜರತ್ ಕಾಲೋನಿಯಲ್ಲಿರುವ ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳಿಗೆ ಸಂಬಂಧಿಸಿದ ಕಾನೂನುಗಳ ಕುರಿತು ವಿಶೇಷ ಅರಿವು ಮೂಡಿಸುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ರಾಜೇಂದ್ರ ಕುಮಾರ್ ಯಾದವ್, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೋ (POCSO) ಕಾಯ್ದೆ, ಬಾಲ ನ್ಯಾಯ ಕಾಯ್ದೆ ಹಾಗೂ…
by

ನಗರಸಭೆ ಪಕ್ಕದ ಕಸದ ತಿಪ್ಪೆ ತೆರವುಗೊಳಿಸಿ ನೈರ್ಮಲ್ಯ ಕಾಪಾಡಿ: ವಿಶ್ವನಾಥ ನಾಯಕ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರಸಭೆ ಕಾರ್ಯಾಲಯದ ಪಕ್ಕದಲ್ಲಿ ಕೂಡು ರಸ್ತೆಯ ಮೂಲೆಯ ಮೇಲೆ ಕಸವನ್ನು ತಂದು ಹಾಕುತ್ತಿದ್ದು, ಇದರಿಂದ ಅಲ್ಲಿನ ಶಾಲಾ/ಕಾಲೇಜು ವಿದ್ಯಾರ್ಥಿಗಳಿಗೆ ಕೆಟ್ಟ ವಾಸನೆಯಿಂದ ತೊಂದರೆ ಆಗುತ್ತಿದ್ದು, ನೈರ್ಮಲ್ಯ ಕಾಪಾಡಲು ಕ್ರಮ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹಿಸಿದೆ. ಈ ಕುರಿತು ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದ ಜಿಲ್ಲಾಧ್ಯಕ್ಷ ಬಿ.ಎನ್. ವಿಶ್ವನಾಥ ನಾಯಕ, ಕೂಡಲೇ ಕ್ರಮ ಕೈಗೊಂಡು ನಗರಸಭೆಯ ಪಕ್ಕದಿಂದ ಡಿಸಿ ಕಚೇರಿಗೆ ತೆರಳುವ ರಸ್ತೆಯ ಕೂಡುರಸ್ತೆಯ ಮೂಲೆಯ ಮೇಲೆ ಎಲ್ಲರೂ ಕಸ ತಂದು…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ
















