Tag: ಯಾದಗಿರಿ ಸುದ್ದಿ

  • ಮೇ 1ರಂದು ಭಗವಾನ ಗೌತಮ ಬುದ್ಧರ ಜಯಂತಿ

    ಮೇ 1ರಂದು ಭಗವಾನ ಗೌತಮ ಬುದ್ಧರ ಜಯಂತಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾಡಳಿತ, ಜಿಪಂ ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಗವಾನ ಗೌತಮ ಬುದ್ದ ಜಯಂತ್ಯೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಮೇ 1 ರಂದು ಬೆಳಗ್ಗೆ 11ಕ್ಕೆ ಇಲ್ಲಿನ ಲುಂಬಿನಿ ಉದ್ಯಾನವನದಲ್ಲಿ ಭಗವಾನ ಗೌತಮ ಬುದ್ಧರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಪ್ರಮುಖರಾದ ಮರೆಪ್ಪ ಚಟ್ಟರಕರ್ ಮತ್ತು ಬಾಬುರಾವ ಭೂತಾಳೆ ತಿಳಿಸಿದ್ದಾರೆ. ಇಲ್ಲಿನ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದರನ ನಾಗಲೋಕ ಬುದ್ಧವಿಹಾರದ ಪೂಜ್ಯ ಭಂತೆ ಶಾಂತಿ…

  • ಸುಳ್ಳು ದೂರುಗಳಿಗೆ ಕಡಿವಾಣ – 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್

    ಸುಳ್ಳು ದೂರುಗಳಿಗೆ ಕಡಿವಾಣ – 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸುಳ್ಳು ಹಾಗೂ ದುರುದ್ದೇಶಪೂರಿತ ದೂರುಗಳನ್ನು ನೀಡಿ ಬಳಿಕ ಹಿಂಪಡೆಯುವ ಪ್ರವೃತ್ತಿಗೆ ಕಡಿವಾಣ ಹಾಕಲು ಜಿಲ್ಲಾ ಪಂಚಾಯತ್ ಕಠಿಣ ಕ್ರಮ ಕೈಗೊಂಡಿದ್ದು, 24 ದೂರುದಾರರಿಗೆ ಒಟ್ಟು ₹1,57,475 ವಸೂಲಾತಿ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ ತಿಳಿಸಿದ್ದಾರೆ. ಸರ್ಕಾರದ 05.03.2021ರ ಸುತ್ತೋಲೆಯ ಅನ್ವಯ, ಮೊದಲು ದೂರು ಸಲ್ಲಿಸಿ ನಂತರ ಹಿಂಪಡೆದ ಹಾಗೂ ಸಾಕ್ಷ್ಯಾಧಾರವಿಲ್ಲದೆ ಸುಳ್ಳು ದೂರು ನೀಡಿದವರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ನೋಟಿಸ್ ಪಡೆದವರು ಸಮಾಧಾನಕರ…

  • ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅಗತ್ಯ – ನ್ಯಾಯಾಧೀಶ ಮರಿಯಪ್ಪ

    ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅಗತ್ಯ – ನ್ಯಾಯಾಧೀಶ ಮರಿಯಪ್ಪ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ: ಜನಸಾಮಾನ್ಯರು ದೈನಂದಿನ ಜೀವನದಲ್ಲಿ ಕಾನೂನಿನ ಮೂಲಭೂತ ಅರಿವು ಹೊಂದಿರುವುದು ಅತ್ಯಗತ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಮರಿಯಪ್ಪ ಅವರು ತಿಳಿಸಿದರು. ​ಯಾದಗಿರಿ ಜಿಲ್ಲೆಯ ಹೊನಗೇರಾ ಗ್ರಾಮ ಪಂಚಾಯಿತಿ ಕಾರ್ಯಾಲಯದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಯಾದಗಿರಿ ವತಿಯಿಂದ ಮತ್ತು ಶಿಕ್ಷಣ ಇಲಾಖೆ ,ಗ್ರಾಮ ಪಂಚಾಯಿತಿ, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾರ್ಮಿಕ ಇಲಾಖೆ,ಇವರುಗಳ…

  • ವಿಎ, ಆರ್ ಐಗಳಿಗೆ 17 ಲ್ಯಾಪ್ ಟಾಪ್ ಗಳ ವಿತರಣೆ

    ವಿಎ, ಆರ್ ಐಗಳಿಗೆ 17 ಲ್ಯಾಪ್ ಟಾಪ್ ಗಳ ವಿತರಣೆ

    ಕಂದಾಯ ಇಲಾಖೆ ಕೆಲಸ ನಿಗದಿತ ಅವಧಿಯೊಳಗೆ ಮುಗಿಸಿ : ಶಾಸಕ ತುನ್ನೂರ ಸೂಚನೆ ಸುದ್ದಿ ಬೆಳಕು ವಾರ್ತೆ ಯಾದಗಿರಿ: ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆಯೇ ಇ ಆಫೀಸ್, ಇ ಪಾವತಿ ಸೇರಿದಂತೆಯೇ ಇತರೇ ಕೆಲಸಗಳು ಗಣಕಿರಣದ ಮೂಲಕವೇ ಮಾಡಬೇಕು ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು. ಇಲ್ಲಿನ ಅವರ ಜನಸಂಪರ್ಕ ಕಚೇರಿಯಲ್ಲಿ ಮಂಗಳವಾರ ಸುಮಾರು 17 ಲ್ಯಾಪ್ ಟಾಪ್ ಗಳನ್ನು ವಿಎ, ಹಾಗೂ ಆರ್ ಐಗಳಿಗೇ ವಿತರಿಸಿ ಅವರು ಮಾತನಾಡಿದರು. ಕಂದಾಯ ಸಚಿವ ಕೃಷ್ಣ ಬೈರೈಗೌಡ ಅವರು…

  • ಮಹೇಶರಡ್ಡಿ  ಮುದ್ನಾಳ ಅವರಿಗೆ ಸನ್ಮಾನ – ಯುವ ನಾಯಕರಾಗಿ ಬೆಳೆಯಲಿ ಎಂದು ಹಾರೈಕೆ

    ಮಹೇಶರಡ್ಡಿ ಮುದ್ನಾಳ ಅವರಿಗೆ ಸನ್ಮಾನ – ಯುವ ನಾಯಕರಾಗಿ ಬೆಳೆಯಲಿ ಎಂದು ಹಾರೈಕೆ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ: ರಾಷ್ಟ್ರೀಯ ವೀರಶೈವ ಮಹಾಸಭಾ ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ಮಾಜಿ ಶಾಸಕ ದಿ. ವೆಂಕಟರೆಡ್ಡಿ ಮುದ್ನಾಳ ಅವರ ಸುಪುತ್ರರಾದ ಮಹೇಶರಡ್ಡಿ ಮುದ್ನಾಳ ಅವರನ್ನು ನಗರದ ಸಾಯಿ ಗ್ರೂಪ್ ವತಿಯಿಂದ ಸನ್ಮಾನಿಸಲಾಯಿತು. ​ ನಂತರ ಮಾತನಾಡಿದ ನಗರಸಭೆ ಮಾಜಿ ಸದಸ್ಯರಾದ ಸ್ವಾಮಿದೇವ ದಾಸನಕೇರಿ, ಮಹೇಶರಡ್ಡಿ ಮುದ್ನಾಳ ಅವರು ಸಣ್ಣ ವಯಸ್ಸಿನಲ್ಲಿಯೇ ಉನ್ನತ ಜವಾಬ್ದಾರಿಯನ್ನು ಅಲಂಕರಿಸಿದ್ದಾರೆ. ಅವರು ತಮ್ಮ ತಂದೆಯವರಾದ ದಿ. ವೆಂಕಟರೆಡ್ಡಿ ಮುದ್ನಾಳ ಅವರ ಮಾರ್ಗದಲ್ಲಿಯೇ ನಡೆದು, ಯುವ ನಾಯಕರಾಗಿ…

  • ವಿಶೇಷ ಚೇತನರಿಗೆ ತ್ರಿಚಕ್ರ ಮೋಟಾರು ವಾಹನ ವಿತರಣೆ – ಸ್ವಾವಲಂಬಿ ಬದುಕಿಗೆ ಪ್ರೋತ್ಸಾಹ

    ವಿಶೇಷ ಚೇತನರಿಗೆ ತ್ರಿಚಕ್ರ ಮೋಟಾರು ವಾಹನ ವಿತರಣೆ – ಸ್ವಾವಲಂಬಿ ಬದುಕಿಗೆ ಪ್ರೋತ್ಸಾಹ

    ಸುದ್ದಿ ಬೆಳಕು ವಾರ್ತೆ ಶಹಾಪುರ: ವಿಶೇಷ ಚೇತನರ ಸ್ವಾವಲಂಬಿ ಬದುಕಿಗೆ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಕರೆ ನೀಡಿದರು. ಶಹಾಪುರ ತಾಲೂಕ ಪಂಚಾಯಿತಿಯ 2025-26ನೇ ಸಾಲಿನ ವಿಶೇಷ ಚೇತನರ ಅನಿರ್ಬಂಧಿತ ಅಭಿವೃದ್ಧಿ ಅನುದಾನದಡಿ ವಿದ್ಯುತ್ ಚಾಲಿತ ತ್ರಿಚಕ್ರ ವಾಹನ ವಿತರಣಾ ಕಾರ್ಯಕ್ರಮವನ್ನು ಸಚಿವರ ಜನ ಸಂಪರ್ಕ ಕಚೇರಿ ಆವರಣದಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ಆಯ್ದ ಐದು ಫಲಾನುಭವಿಗಳಿಗೆ ತ್ರಿಚಕ್ರ ಮೋಟಾರು ವಾಹನಗಳ ಕೀಲಿಗಳನ್ನು ಹಸ್ತಾಂತರಿಸಿ ಮಾತನಾಡಿದ ಅವರು, ಈ ಸೌಲಭ್ಯವು…

  • ಓದಿಗೆ ಬೆಲೆಕೊಟ್ಟು ಸಾಧಕರಾಗಿರಿ – ಎಸ್‌ಪಿ ಪೃಥ್ವಿಕ್ ಶಂಕರ್ ಕರೆ

    ಓದಿಗೆ ಬೆಲೆಕೊಟ್ಟು ಸಾಧಕರಾಗಿರಿ – ಎಸ್‌ಪಿ ಪೃಥ್ವಿಕ್ ಶಂಕರ್ ಕರೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ಕಾರಣ ಮಕ್ಕಳು ಓದಿನ ಕಡೆ ಹೆಚ್ಚಿನ ಗಮನ ಹರಿಸುವ ಮೂಲಕ ಜೀವನದಲ್ಲಿ ಸಾಧನೆ ಮಾಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹೇಳಿದರು.ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕವು ಇಲ್ಲಿನ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪಿಯು ಪರೀಕ್ಷೆಯಲ್ಲಿ ಅತ್ಯುಧಿಕ ಅಂಕಗಳನ್ನು ಪಡೆದ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ನಿಮ್ಮ ಕಣ್ಣು ಎದುರಿಗೆ ಡಾ. ನಿವೇದಿತಾ ಭಾವಿಮನಿ ಇದ್ದಾರೆ. ಅವರ…

  • ಯಾದಗಿರಿಯಲ್ಲಿ ‘ಮನ್ ಕೀ ಬಾತ್’ ಕಾರ್ಯಕ್ರಮ ವೀಕ್ಷಣೆ

    ಯಾದಗಿರಿಯಲ್ಲಿ ‘ಮನ್ ಕೀ ಬಾತ್’ ಕಾರ್ಯಕ್ರಮ ವೀಕ್ಷಣೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 26 : ನಗರದ ವಾರ್ಡ್ ನಂ. ೨೧ರಲ್ಲಿ ಮಾಜಿ ನಗರಸಭೆ ಸದಸ್ಯೆ ವಿಜಯಲಕ್ಷ್ಮಿ ನಾನೇಕ್ ಅವರ ನಿವಾಸದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ೧೩೩ನೇ ‘ಮನ್ ಕೀ ಬಾತ್’ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಲಾಯಿತು. ಈ ಕಾರ್ಯಕ್ರಮವನ್ನು ಯಾದಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ವೆಂಕಟರಡ್ಡಿ ಮುದ್ನಾಳ ಅವರು ವೀಕ್ಷಿಸಿ, ಕಾರ್ಯಕ್ರಮದ ಸಂದೇಶಗಳನ್ನು ಗಮನಿಸಿದರು. ಈ ಸಂದರ್ಭದಲ್ಲಿ ಹಿರಿಯ ಮುಖಂಡ ರುದ್ರಗೌಡ…

  • ಶಿಕ್ಷಣವೇ ಶಕ್ತಿ: ಹಕ್ಕುಗಳಿಗಾಗಿ ಸಂಘಟಿತ ಹೋರಾಟಕ್ಕೆ ದೇವರಾಜ ನಾಯಕ ಕರೆ

    ಶಿಕ್ಷಣವೇ ಶಕ್ತಿ: ಹಕ್ಕುಗಳಿಗಾಗಿ ಸಂಘಟಿತ ಹೋರಾಟಕ್ಕೆ ದೇವರಾಜ ನಾಯಕ ಕರೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 26 : ಬಂಜಾರ ಸಮಾಜದ ಯುವಕರು ಶಿಕ್ಷಣದ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕಿದ್ದು, ಸಂಘಟಿತ ಹೋರಾಟದಿಂದ ಮಾತ್ರ ತಮ್ಮ ಹಕ್ಕುಗಳನ್ನು ಪಡೆಯಲು ಸಾಧ್ಯ ಎಂದು ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ರಾಜ್ಯಾಧ್ಯಕ್ಷ ದೇವರಾಜ ನಾಯಕ ಹೇಳಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಆಯೋಜಿಸಲಾದ ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಮೂಲಾಧಾರವಾಗಿದ್ದು, ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು…

  • ಆರ್ಯ ವೈಶ್ಯ ಸಮಾಜದ ಪ್ರತಿಭಾವಂತ ಬಾದಾಮಿ ಪರಿವಾರದ ವಿದ್ಯಾರ್ಥಿಗಳಿಗೆ ಸನ್ಮಾನ

    ಆರ್ಯ ವೈಶ್ಯ ಸಮಾಜದ ಪ್ರತಿಭಾವಂತ ಬಾದಾಮಿ ಪರಿವಾರದ ವಿದ್ಯಾರ್ಥಿಗಳಿಗೆ ಸನ್ಮಾನ

    ಸಮಾಜ ಸೇವೆ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯ ಸುದ್ದಿ ಬೆಳಕು ವಾರ್ತೆ ಸೈದಾಪುರ, ಏಪ್ರಿಲ್ 26: ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಮೂಲಾಧಾರವಾಗಿದ್ದು, ವಿದ್ಯಾರ್ಥಿಗಳು ತಮ್ಮ ಪರಿಶ್ರಮ ಮತ್ತು ದೃಢಸಂಕಲ್ಪದ ಮೂಲಕ ಉತ್ತಮ ಸಾಧನೆ ಮಾಡುವುದರ ಜೊತೆಗೆ ಸಮಾಜ ಸೇವೆ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ನ್ಯಾಯವಾದಿ ಸಂತೋಷ ಬಾದಾಮಿ ಹೇಳಿದರು. ಪಟ್ಟಣದಲ್ಲಿ ಆರ್ಯ ವೈಶ್ಯ ಸಮಾಜದ ಹಬ್ಬವಾದ ವಾಸವಿ ಜಯಂತಿ ಪ್ರಯುಕ್ತ ಬಾದಾಮಿ ಪರಿವಾರದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು. ಈ…

Suddi Belaku