by
Tag: ಸುರಪುರ ಸುದ್ದಿ

ಡೀಸೆಲ್ ಕೊರತೆ: ಸುರಪುರದಲ್ಲಿ ರಾತ್ರಿಯಿಡೀ ಸಾಲಿನಲ್ಲಿ ನಿಂತ ಜನರು
ಸುದ್ದಿ ಬೆಳಕು ವಾರ್ತೆ ಸುರಪುರ: ನಗರದಲ್ಲಿ ಡೀಸೆಲ್ ಕೊರತೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪೆಟ್ರೋಲ್ ಬಂಕ್ಗಳ ಮುಂದೆ ವಾಹನಗಳ ದೀರ್ಘ ಸಾಲು ಕಾಣಿಸಿಕೊಂಡು, ಪ್ರಮುಖ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಗರಸಭೆ ಸಮೀಪದ ಪೆಟ್ರೋಲ್ ಬಂಕ್ ಬಳಿ ಸೋಮವಾರ ತಡರಾತ್ರಿ ಕಂಡುಬಂತು. ಡೀಸೆಲ್ ಪಡೆಯಲು ಟ್ರ್ಯಾಕ್ಟರ್, ಲಾರಿ, ಬೈಕ್ ಸೇರಿದಂತೆ ನೂರಾರು ವಾಹನಗಳು ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಸಾಲುಗಟ್ಟಿ ನಿಂತಿದ್ದವು. ವಾಹನಗಳನ್ನು ರಸ್ತೆ ಮಧ್ಯೆಯೇ ಅಡ್ಡಲಾಗಿ ನಿಲ್ಲಿಸಿದ್ದರಿಂದ ಬಸ್ ನಿಲ್ದಾಣದಿಂದ ವಿವಿಧ ಕಡೆಗಳಿಗೆ ತೆರಳುವ ವಾಹನಗಳಿಗೆ ರಸ್ತೆ ಇಲ್ಲದಂತಾಯಿತು.…
by

ದೇವಪುರ ಬಳಿ ಕೆಎಸ್ಆರ್ಟಿಸಿ ಬಸ್ ಅಪಘಾತ – ಹಲವರಿಗೆ ಗಾಯ
ಸುದ್ದಿ ಬೆಳಕು ವಾರ್ತೆ ಸುರಪುರ : ಜಿಲ್ಲೆಯ ಸುರಪುರ ತಾಲೂಕಿನ ದೇವಪುರ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಹೆದ್ದಾರಿಯಿಂದ ಪಕ್ಕಕ್ಕೆ ಇಳಿದು ಅಪಘಾತಕ್ಕೀಡಾದ ಪರಿಣಾಮ ಹಲವರು ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ದಾವಣಗೆರೆಯಿಂದ ಕಲಬುರ್ಗಿ ಕಡೆಗೆ ತೆರಳುತ್ತಿದ್ದ ಕಲಬುರ್ಗಿ ಬಸ್ ಘಟಕ ಸಂಖ್ಯೆ–3ರ ಬಸ್ನ್ನು ಚಾಲಕ ವೇಗವಾಗಿ ಚಲಾಯಿಸುತ್ತಿದ್ದ ವೇಳೆ ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಇಳಿದಿದೆ ಎಂದು ತಿಳಿದು ಬಂದಿದೆ. ಬಸ್ನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದು, ಕ್ಷಣಾರ್ಧದಲ್ಲಿ ಪ್ರಯಾಣಿಕರಲ್ಲಿ…
by

ಆರ್ಥಿಕ ಸ್ವಾವಲಂಬನೆಗೆ ಸಹಕಾರವೇ ಮೂಲ ಮಂತ್ರ : ಶರಣಯ್ಯ ಸ್ವಾಮಿ ನೀಲಗಿರಿಮಠ
ಸುದ್ದಿ ಬೆಳಕು ವಾರ್ತೆ ಸುರಪುರ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ ನಿ., ಯಾದಗಿರಿ ಹಾಗೂ ಯಾದಗಿರಿ ಸಹಕಾರ ಇಲಾಖೆ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯ ಪತ್ತಿನ ಸಹಕಾರ ಸಂಘ ನಿ, ಸುರಪುರ ಇವರುಗಳ ಸಂಯುಕ್ತಾಶ್ರಯದಲ್ಲಿ ಆಡಳಿತ ಮಂಡಳಿ ನಿರ್ದೇಶಕರಿಗಾಗಿ ‘ಕ್ಲಸ್ಟರ್ ತರಬೇತಿ ಕಾರ್ಯಕ್ರಮ’ವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಜಗದ್ಗುರು ರೇಣುಕಾಚಾರ್ಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಶ್ರೀ ಶರಣಯ್ಯ ಸ್ವಾಮಿ ನೀಲಗಿರಿಮಠ, “ಪತ್ತಿನ ಸಹಕಾರ…
by

ಅಂಬೇಡ್ಕರ್ ಜಯಂತಿ ವಿವಾದ: ಶಾಸಕರು, ತಹಸೀಲ್ದಾರ್ರ ವಿರುದ್ಧದ ಆರೋಪ ಸತ್ಯಕ್ಕೆ ದೂರ – ರಮೇಶ ದೊರೆ ಆಲ್ದಾಳ
ಸುರಪುರ: ಸಂವಿಧಾನ ಶಿಲ್ಪಿ B R Ambedkar ಅವರ ಜಯಂತಿ ಆಚರಣೆ ವಿಚಾರದಲ್ಲಿ ತಾಲೂಕು ಆಡಳಿತ ಹಾಗೂ ಶಾಸಕರ ವಿರುದ್ಧ ಮಾಡಲಾಗುತ್ತಿರುವ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನವಾಗಿದೆ ಎಂದು ಸಾಮೂಹಿಕ ಸಂಘಟನೆಗಳ ಒಕ್ಕೂಟದ ಮುಖಂಡ ರಮೇಶ ದೊರೆ ಆಲ್ದಾಳ ಸ್ಪಷ್ಟಪಡಿಸಿದರು. ಸಭೆಯ ನಿರ್ಣಯದಂತೆ ಆಯ್ಕೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 10ರಂದು ತಹಸೀಲ್ದಾರರು ಸಭೆ ಕರೆದು ವಿಶೇಷ ಆಹ್ವಾನಿತರ ಹೆಸರನ್ನು ಸೂಚಿಸಲು ಕೇಳಿದ್ದರು. ಎಲ್ಲಾ ಸಂಘಟನೆಗಳ ಒಮ್ಮತದಿಂದ ಶಿಕ್ಷಣಪ್ರೇಮಿ ಮಾನಪ್ಪ ಕರಡಕಲ್ ಅವರನ್ನು…
by

ಅಂಬೇಡ್ಕರ್ ಜಯಂತಿ ಆಹ್ವಾನ ವಿವಾದ – ಮಾನಪ್ಪ ಕಟ್ಟಿಮನಿ ಕಡೆಗಣನೆಗೆ ದಲಿತ ಸಂಘಟನೆಗಳ ಆಕ್ರೋಶ
ಸುರಪುರ: ತಾಲೂಕು ಆಡಳಿತದಿಂದ ಆಯೋಜಿಸಲಾಗುತ್ತಿರುವ ಡಾ. ಬಾಬಾಸಾಹೇಬ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಆಹ್ವಾನದಲ್ಲಿ ಸಮಾಜದ ಹಿರಿಯ ಮುಖಂಡ ಮಾನಪ್ಪ ಕಟ್ಟಿಮನಿ ಅವರ ಹೆಸರನ್ನು ಕೈಬಿಟ್ಟಿರುವುದಕ್ಕೆ ದಲಿತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ದಲಿತ ಪರ ಸಂಘಟನೆಗಳ ಮುಖಂಡ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ಪೂರ್ವಭಾವಿ ಸಭೆಯಲ್ಲಿ ಒಪ್ಪಿಗೆಯಾದ ನಿರ್ಣಯವನ್ನು ಲೆಕ್ಕಿಸದೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಪಿಸಿದರು. ಪೂರ್ವಭಾವಿ ಸಭೆ ನಿರ್ಣಯ ಉಲ್ಲಂಘನೆ ಅಂಬೇಡ್ಕರ್ ಜಯಂತಿ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ…
by

ಸುರಪುರದಲ್ಲಿ ಎನ್ಆರ್ಜಿ ಟ್ರೋಫಿ 2026 ಉದ್ಘಾಟನೆ – ಕ್ರೀಡೆಯಿಂದ ನೆಮ್ಮದಿ: ರಾಜುಗೌಡ
ಸುರಪುರ: ಕ್ರೀಡೆ ಮನುಷ್ಯನ ಜೀವನದಲ್ಲಿ ನೆಮ್ಮದಿ ಮತ್ತು ಶಿಸ್ತು ತರಲು ಅತ್ಯಂತ ಮುಖ್ಯವಾಗಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ Narasimha Nayak Rajugowda ಹೇಳಿದರು. ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ಎನ್ಆರ್ಜಿ ಟ್ರೋಫಿ 2026 ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆ ವ್ಯಕ್ತಿಯ ಮನೋಬಲವನ್ನು ಹೆಚ್ಚಿಸುವುದರ ಜೊತೆಗೆ ಜೀವನದ ಸವಾಲುಗಳನ್ನು ಎದುರಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು. 360 ತಂಡಗಳ ಭರ್ಜರಿ ಟೂರ್ನಿ ಈ ಬಾರಿ ಟೂರ್ನಮೆಂಟ್ನಲ್ಲಿ 360 ತಂಡಗಳು ಭಾಗವಹಿಸುತ್ತಿದ್ದು, ಸುರಪುರ…
by

ರುಕ್ಮಾಪುರದಲ್ಲಿ ಶ್ರೀ ಬನಶಂಕರಿ ದೇವಸ್ಥಾನ ಮಹೋತ್ಸವ – ಏಪ್ರಿಲ್ 19ರಂದು ಭವ್ಯ ಕಾರ್ಯಕ್ರಮ
ಸುರಪುರ: ತಾಲೂಕಿನ ಸುಕ್ಷೇತ್ರ ರುಕ್ಮಾಪುರ ಗ್ರಾಮದಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಏಪ್ರಿಲ್ 19ರಂದು ಭವ್ಯ ಧಾರ್ಮಿಕ ಮಹೋತ್ಸವ ನಡೆಯಲಿದ್ದು, ವಿವಿಧ ಪೂಜಾ ವಿಧಿವಿಧಾನಗಳು ಮತ್ತು ಕಾರ್ಯಕ್ರಮಗಳು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿ ತಿಳಿಸಿದೆ. ಐದು ದಿನಗಳ ಧಾರ್ಮಿಕ ಕಾರ್ಯಕ್ರಮ ಏಪ್ರಿಲ್ 15ರಿಂದ 19ರವರೆಗೆ ಐದು ದಿನಗಳ ಕಾಲ ಮಹೋತ್ಸವ ನಡೆಯಲಿದೆ. ಏಪ್ರಿಲ್ 15: ಮೂರ್ತಿಗಳ ಮೆರವಣಿಗೆ (ಶರಣಬಸವೇಶ್ವರ ದೇವಸ್ಥಾನದಿಂದ) ಪ್ರತಿದಿನ: ಪೂಜಾ, ಹೋಮ-ಹವನಗಳು (ಶ್ರೀಶೈಲ ವೈದಿಕ ತಂಡದಿಂದ) ಸಂಜೆ: ಧಾರ್ಮಿಕ ಪ್ರವಚನಗಳು ಪ್ರಮುಖ ಕಾರ್ಯಕ್ರಮಗಳು ಗಣೇಶ…
by

ಸುರಪುರ ಕಾಲೇಜಿಗೆ ₹2 ಕೋಟಿ ವೆಚ್ಚದ ಆಡಳಿತ ಕಚೇರಿ ಕಟ್ಟಡಕ್ಕೆ ಚಾಲನೆ – ಶಾಸಕ ರಾಜಾ ವೇಣುಗೋಪಾಲ ನಾಯಕ
ಸುರಪುರ : ಕಾಲೇಜು ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ಸೌಲಭ್ಯ ಒದಗಿಸುವ ಉದ್ದೇಶದಿಂದ ₹2 ಕೋಟಿ ವೆಚ್ಚದಲ್ಲಿ ಆಡಳಿತ ಕಚೇರಿ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದು ಶಾಸಕ Raja Venugopal Nayak ತಿಳಿಸಿದ್ದಾರೆ. ನಗರದ ಕಮಲ ಕಿಶೋರ ಗೋವರ್ಧನದಾಸ ಲಡ್ಡಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಮೂರು ಮಹಡಿ ಭವ್ಯ ಕಟ್ಟಡ 2024-25ನೇ ಸಾಲಿನ ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿ ಈ ಅನುದಾನ ಮಂಜೂರಾಗಿದ್ದು, ಮೂರು ಮಹಡಿಯ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ














