Tag: Breaking News

  • ಯಾದಗಿರಿಯಲ್ಲಿ ಪತ್ರಕರ್ತನ ಅಪಹರಣ ಆರೋಪ; ಪೊಲೀಸ್ ಸಿಬ್ಬಂದಿ ವಿರುದ್ಧ ಶಂಕೆ

    ಯಾದಗಿರಿಯಲ್ಲಿ ಪತ್ರಕರ್ತನ ಅಪಹರಣ ಆರೋಪ; ಪೊಲೀಸ್ ಸಿಬ್ಬಂದಿ ವಿರುದ್ಧ ಶಂಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ಲುಂಬಿನಿ ಗಾರ್ಡನ್‌ ಬಳಿ ಪತ್ರಕರ್ತನೊಬ್ಬರನ್ನು ಕಾರಿನಲ್ಲಿ ಬಲವಂತವಾಗಿ ಕರೆದೊಯ್ದಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಯಾದಗಿರಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಶಿಧರ ಕಾಲೊನಿ ಹೊಸಳ್ಳಿ ಕ್ರಾಸ್‌ ನಿವಾಸಿ ಹಾಗೂ ಕ್ರಾಂತಿ ಪತ್ರಿಕೆಯ ಪತ್ರಕರ್ತ ಸಾಗರ ಪ್ರೇಮಕುಮಾರ ದೇಸಾಯಿ (35) ಅಪಹರಣಕ್ಕೊಳಗಾದವರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಶನಿವಾರ ಬೆಳಿಗ್ಗೆ 11.30ರ ಸುಮಾರಿಗೆ ಮನೆಯಿಂದ ಸ್ಕೂಟಿಯಲ್ಲಿ ಹೊರಟಿದ್ದ ಸಾಗರ, 11.45ರಿಂದ 11.50ರ ನಡುವೆ ಲುಂಬಿನಿ ಗಾರ್ಡನ್‌ ಬಳಿ ತೆರಳುತ್ತಿದ್ದಾಗ ಕಾರಿನಲ್ಲಿ…

  • ಯಾದಗಿರಿಯ ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿ ವಿಷಕಾರಿ ರಾಸಾಯನಿಕ ಸೋರಿಕೆ: ಮೂವರು ಕಾರ್ಮಿಕರ ದುರ್ಮರಣ, ಇಬ್ಬರ ಸ್ಥಿತಿ ಗಂಭೀರ

    ಯಾದಗಿರಿಯ ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿ ವಿಷಕಾರಿ ರಾಸಾಯನಿಕ ಸೋರಿಕೆ: ಮೂವರು ಕಾರ್ಮಿಕರ ದುರ್ಮರಣ, ಇಬ್ಬರ ಸ್ಥಿತಿ ಗಂಭೀರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ವಿಷಕಾರಿ ರಾಸಾಯನಿಕ ಸೋರಿಕೆ ದುರಂತದಲ್ಲಿ ಹೊರರಾಜ್ಯದ ಮೂವರು ಕಾರ್ಮಿಕರು ಸ್ಥಳದಲ್ಲೇ ದುರ್ಮರಣ ಹೊಂದಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ರಾಸಾಯನಿಕ ಸೋರಿಕೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದವರನ್ನು ತೆಲಂಗಾಣ ಮತ್ತು ಮಧ್ಯಪ್ರದೇಶ ಮೂಲದ ಕಾರ್ಮಿಕರೆಂದು ಗುರುತಿಸಲಾಗಿದೆ. ಗಾಯಗೊಂಡ ಇಬ್ಬರು ಆಂಧ್ರಪ್ರದೇಶ ಮೂಲದವರಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ವಿವರ: ಕಟ್ಲಾ ಗಣೇಶ್ (ತಂದೆ: ಕಾಡದೇವಪ್ಪ) – ಅಲಂಪಲ್ಲಿ ನಿವಾಸಿ, ಕೃಷ್ಣ,…

  • ಮಾವಿನಮಟ್ಟಿ ಗ್ರಾಮದಲ್ಲಿ ಜಮೀನು ವಿವಾದ – ಕೊಲೆ ಪ್ರಕರಣ, ಆರೋಪಿಗಳ ಮನೆಗೆ ಬೆಂಕಿ ಹಚ್ಚಿದ ಘಟನೆ

    ಮಾವಿನಮಟ್ಟಿ ಗ್ರಾಮದಲ್ಲಿ ಜಮೀನು ವಿವಾದ – ಕೊಲೆ ಪ್ರಕರಣ, ಆರೋಪಿಗಳ ಮನೆಗೆ ಬೆಂಕಿ ಹಚ್ಚಿದ ಘಟನೆ

    ಯಾದಗಿರಿ, ಏಪ್ರಿಲ್: ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಜಮೀನಿನ ವಿಚಾರವಾಗಿ ಉಂಟಾದ ಜಗಳ ಭೀಕರ ಕೊಲೆಗೆ ತಿರುಗಿ, ಬಳಿಕ ಆರೋಪಿಗಳ ಮನೆಗೆ ಬೆಂಕಿ ಹಚ್ಚಿದ ಘಟನೆ ಗ್ರಾಮದಲ್ಲಿ ಆತಂಕ ಉಂಟುಮಾಡಿದೆ. ಜಮೀನು ವಿಚಾರದಿಂದ ಹಿಂಸಾಚಾರ ಮಾರ್ಚ್ 30ರಂದು ಎರಡು ಎಕರೆ ಜಮೀನಿನ ವಿಚಾರವಾಗಿ ಹನುಮಂತರಾಯ ಮತ್ತು ಅವರ ಮಕ್ಕಳೊಂದಿಗೆ ನಡೆದ ವಾಗ್ವಾದ ಹಿಂಸಾತ್ಮಕವಾಗಿ ತಿರುಗಿ, ಪರಮೇಶ್ ಗಿಂಡಿ ಕೊಲೆಯಾದ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಬಂಧನ ಘಟನೆ ಬಳಿಕ ಪೊಲೀಸರು ತ್ವರಿತ ಕ್ರಮ ಕೈಗೊಂಡು…

  • ಯರಗೊಳ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ – ಚಪ್ಪಲಿ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ನಷ್ಟ

    ಯರಗೊಳ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ – ಚಪ್ಪಲಿ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ನಷ್ಟ

    ಯಾದಗಿರಿ: ತಾಲೂಕಿನ ಯರಗೊಳ ಗ್ರಾಮದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಚಪ್ಪಲಿ ಅಂಗಡಿಯೊಂದು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿವೆ. ವ್ಯಾಪಾರಸ್ಥನಿಗೆ ಭಾರೀ ನಷ್ಟ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯಿಂದ ಅಂಗಡಿಯಲ್ಲಿದ್ದ ಚಪ್ಪಲಿ ಮತ್ತು ಇತರೆ ವಸ್ತುಗಳು ಸುಟ್ಟುಹೋಗಿ ವ್ಯಾಪಾರಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜೀವನೋಪಾಯಕ್ಕಾಗಿ ನಂಬಿಕೊಂಡಿದ್ದ ಅಂಗಡಿ ನಾಶವಾಗಿರುವುದರಿಂದ ಮಾಲೀಕರು ಕಂಗಾಲಾಗಿದ್ದಾರೆ. ಸ್ಥಳಕ್ಕೆ ಶರಣಪ್ಪ ಮಾನೇಗಾರ್ ಭೇಟಿ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಹಿಂದುಳಿದ ವರ್ಗದ ನಾಯಕ Sharannappa Manegar ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ…

Suddi Belaku