by
Tag: Karnataka News

ಯಾದಗಿರಿಯಲ್ಲಿ ವಿಷಕಾರಿ ದುಬೈ ಮರಗಳ ತೆರವು ಆರಂಭ: ಜಯ ಕರ್ನಾಟಕ ಮನವಿಗೆ ಅರಣ್ಯ ಇಲಾಖೆ ಸ್ಪಂದನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರ ಸೌಂದರೀಕರಣ ಹೆಸರಲ್ಲಿ ಸರ್ಕಾರದ ಬೊಕ್ಕಸ ಹಾಳು ಮಾಡಿ ಮುಖ್ಯ ರಸ್ತೆ ವಿಭಜಕ ಮದ್ಯದಲ್ಲಿ ನೆಟ್ಟಿದ್ದ ವಿಷಕಾರುವ ದುಬೈ ಗಿಡಗಳನ್ನು ನೆಲಸಮ ಮಾಡುವ ಕಾರ್ಯಕ್ಕೆ ಗುರುವಾರ ಬೆಳಗ್ಗೆ ಅರಣ್ಯ ಇಲಾಖೆ ಕಾರ್ಯಾರಂಭ ಮಾಡಿದೆ. ಇಲ್ಲಿನ ಗಂಜ್ ವೃತ್ತದಿಂದ ಗಿಡಗಳ ತೆರವು ಪ್ರಾರಂಭವಾಗಿದ್ದು, ಶೀಘ್ರ ನಗರದ ಎಲ್ಲ ದುಬೈ ವಿಷ ವೃಕ್ಷಗಳ ಕಡಿದು ಹಾಕುವುದಾಗಿ ಇಲಾಖೆ ತಿಳಿಸಿದೆ ಎಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಬಿಎನ್. ವಿಶ್ವನಾಥ ನಾಯಕ ತಿಳಿಸಿದ್ದಾರೆ. ಈ…

ಪತ್ರಿಕೋದ್ಯಮ ಸಮಾಜದ ಕನ್ನಡಿ: ಪತ್ರಕರ್ತರ ಧ್ವನಿ ಪದಾಧಿಕಾರಿಗಳಿಗೆ ಸನ್ಮಾನ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ದಲಿತ ಸಂಘರ್ಷ ಸಮಿತಿ (ಭೀಮಮಾರ್ಗ) ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ನಗರದ ಹಳೆ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಇಂದೂಧರ್ ಸಿನ್ನೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುದಾನ ಸಾಬ್, ಜಿಲ್ಲಾ ಖಜಾಂಜಿ ನಾಗಪ್ಪ ಮಾಲಿ ಪಾಟೀಲ್ ಹಾಗೂ ಸಂಘಟನಾ ಕಾರ್ಯದರ್ಶಿ ರೂಪೇಶ್ ಹುಲಿಕಾರ್ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಖಜಾಂಜಿ ನಾಗಪ್ಪ…
by

ನಮ್ಮಲ್ಲಿ ಎಲ್ಲಾ ಶಾಸಕರು ಸಚಿವ ಸ್ಥಾನಕ್ಕೆ ಅರ್ಹರು
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿಯ 3 ಉದ್ಯಾನ ನಿರ್ಮಾಣ ಮಾಡಲು ನಮ್ಮ ಸರ್ಕಾರ ಚಿಂತನೆ ನಡೆಸಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಲಾಲ್ ಬಾಗ್ ನಲ್ಲಿ ‘ಗಂಗ ಸಾಮ್ರಾಜ್ಯ ವೈಭವ’ ಪರಿಕಲ್ಪನೆಯಲ್ಲಿ ಆಯೋಜಿಸಲಾಗಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ ಶಿವಕುಮಾರ್ ಅವರು ಗುರುವಾರ ಚಾಲನೆ ನೀಡಿ, ಮಾಧ್ಯಮಗಳೊಂದಿಗೆ ಮಾತನಾಡಿದರು. “ಬೆಂಗಳೂರಿನಲ್ಲಿರುವ ರಕ್ಷಣಾ ಇಲಾಖೆ ಜಾಗದಲ್ಲಿ ಇಂತಹ ಉದ್ಯಾನ ನಿರ್ಮಾಣ ಮಾಡುವ ಉದ್ದೇಶವಿದೆ. ಈ…
by

ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘಕ್ಕೆ ಜಾಗ ನೀಡಲು ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗೆ ಜಾಗ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ವಿಧಾನಸೌಧ ಸುತ್ತಮುತ್ತ ಜಾಗ ಹುಡುಕಬೇಕು, ಹೊರ ಭಾಗದಲ್ಲಾದರೆ ದೊಡ್ಡ ಜಾಗ ನೀಡಲು ಸಿದ್ಧ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು. ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಗುರುವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಶಿವಕುಮಾರ್…
by

ಕಡೇಚೂರು–ಬಾಡಿಯಾಳ ವಿಷಾನಿಲ ದುರಂತ: ಮೃತ ಕಾರ್ಮಿಕರ ಕುಟುಂಬಕ್ಕೆ ಸಂಸದ ದೊಡ್ಡಮನಿ ಸಂತಾಪ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಇಲ್ಲಿನ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದ ಫಾರ್ಮಾ ಕಂಪನಿಯೊಂದರಲ್ಲಿ ನಿನ್ನೆ ಸಂಭವಿಸಿದ ಸಲ್ಫರ್ ಡೈಆಕ್ಸೈಡ್ ಅನಿಲ ಸೋರಿಕೆಯಿಂದಾಗಿ ಕರ್ತವ್ಯನಿರತ ಮೂವರು ಕಾರ್ಮಿಕರು ಮೃತಪಟ್ಟು, ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿರುವ ದುರಂತಕ್ಕೆ ಕಲಬುರಗಿ ಲೋಕಸಭಾ ಕ್ಷೇತ್ರದ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ತೀವ್ರ ಕಂಬನಿ ಮಿಡಿದಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಯಾದಗಿರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿದ ಸಂಸದರು, ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಕಾರ್ಮಿಕರಿಗೆ ತಕ್ಷಣವೇ ಅತ್ಯುನ್ನತ…
by

ಕಡೇಚೂರು ಕೈಗಾರಿಕೆಲಿ ಮತ್ತೆ ದುರಂತ, ಕಂಪೆನಿಗಳ ಮಾಲಿಕರ ಹೊಣೆ ಮಾಡಿ ಕೊಲೆ ಕೇಸ್ ದಾಖಲಿಸಿ : ಕರವೇ ಒತ್ತಾಯ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕಡೇಚೂರು ಕೈಗಾರಿಕಾ ಪ್ರದೇಶದ ವಿಷಾನಿಲ ದುರಂತದಿAದ ಮೂವರು ಮೃತಪಟ್ಟು ಓರ್ವ ಗಂಭೀರ ಘಟನೆ ನಡೆದು ಒಂದು ಬೆಳಗ್ಗೆ ಮತ್ತೊಂದು ಕೈಗಾರಿಕೆಯಲ್ಲಿ ಇಂಥದ್ದೇ ದುರಂತ ನಡೆದು ಓರ್ವ ಕಾರ್ಮಿಕ ಗಂಭೀರ ಸ್ಥಿತಿಗೆ ತಲುಪಿ ಆಸ್ಪತ್ರೇ ಸೇರಿದ್ದು ಪ್ರಕರಣ ದಾಖಲಾಗಿದ್ದರೂ ಸರ್ಕಾರ ಇಂತಹ ಕಂಪೆನಿಗಳ ಮುಚ್ಚಲು ಕ್ರಮ ಕೈಗೊಳ್ಳುತ್ತಿಲ್ಲವೇಕೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾದ್ಯಕ್ಷ ಟಿ.ಎನ್. ಭೀಮುನಾಯಕ ಪ್ರಶ್ನಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ರಾಮೀಸ್ ಕಂಪನಿ ಹೆಸರಿನ ಕೈಗಾರಿಕೆ…
by

ಕಡೇಚೂರು ಅನಿಲ ಸೋರಿಕೆ ದುರಂತ: ಮೃತರ ಕುಟುಂಬಕ್ಕೆ ₹20 ಲಕ್ಷ ಪರಿಹಾರ; ಸಮಗ್ರ ತನಿಖೆಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿ ಜಿಲ್ಲೆಯ ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿರುವ ಸಿಐಎಲ್ ಲ್ಯಾಬೊರೇಟರೀಸ್ (CIL Laboratories) ಘಟಕದಲ್ಲಿ ಸಲ್ಫರ್ ಡೈಆಕ್ಸೈಡ್ ($SO_2$) ಅನಿಲ ಸೋರಿಕೆಯಾಗಿ ಮೂವರು ಕಾರ್ಮಿಕರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅತ್ಯಂತ ದುಃಖಕರವಾಗಿದೆ ಎಂದು ಗೃಹ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆ ನಡೆದ ತಕ್ಷಣವೇ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ್ದು, ಗಾಯಾಳುಗಳಿಗೆ ತುರ್ತು ಚಿಕಿತ್ಸೆಯ…
by

ಯಾದಗಿರಿಯ ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿ ವಿಷಕಾರಿ ರಾಸಾಯನಿಕ ಸೋರಿಕೆ: ಮೂವರು ಕಾರ್ಮಿಕರ ದುರ್ಮರಣ, ಇಬ್ಬರ ಸ್ಥಿತಿ ಗಂಭೀರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ವಿಷಕಾರಿ ರಾಸಾಯನಿಕ ಸೋರಿಕೆ ದುರಂತದಲ್ಲಿ ಹೊರರಾಜ್ಯದ ಮೂವರು ಕಾರ್ಮಿಕರು ಸ್ಥಳದಲ್ಲೇ ದುರ್ಮರಣ ಹೊಂದಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ರಾಸಾಯನಿಕ ಸೋರಿಕೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದವರನ್ನು ತೆಲಂಗಾಣ ಮತ್ತು ಮಧ್ಯಪ್ರದೇಶ ಮೂಲದ ಕಾರ್ಮಿಕರೆಂದು ಗುರುತಿಸಲಾಗಿದೆ. ಗಾಯಗೊಂಡ ಇಬ್ಬರು ಆಂಧ್ರಪ್ರದೇಶ ಮೂಲದವರಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ವಿವರ: ಕಟ್ಲಾ ಗಣೇಶ್ (ತಂದೆ: ಕಾಡದೇವಪ್ಪ) – ಅಲಂಪಲ್ಲಿ ನಿವಾಸಿ, ಕೃಷ್ಣ,…
by

ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಮನವಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ವೈನ್ ಶಾಪ್ಗಳು ಹಾಗೂ ಬಾರ್ಗಳಿಂದ ಅಕ್ರಮವಾಗಿ ಮದ್ಯ ಸಾಗಾಟ ಮತ್ತು ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾರ್ಮಿಕ ಸೇನೆ ಜಿಲ್ಲಾ ಘಟಕದಿಂದ ಅಬಕಾರಿ ಇಲಾಖೆಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ಮಾತಾನಾಡಿದ ಸಂಘದ ಜಿಲ್ಲಾ ಅಧ್ಯಕ್ಷ ಪೋಲಪ್ಪ ಎಂ. ನಾರಾಯಣೋರ್ ಅವರು ಯಾದಗಿರಿ ಅಬಕಾರಿ ಉಪ ಆಯುಕ್ತರಿಗೆ ಸಲ್ಲಿಸಿ ಮಾತಾನಾಡಿದ ಅವರು ಕೆಲವು ವೈನ್ ಶಾಪ್ಗಳು ಮತ್ತು ಬಾರ್ಗಳಿಂದ ಟಂಟಂ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ
















