Tag: Karnataka Politics

  • ನಾರಿ ಶಕ್ತಿ ಮಸೂದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕ ಟೀಕೆ

    ನಾರಿ ಶಕ್ತಿ ಮಸೂದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕ ಟೀಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 18 : ಭಾರತದ ನಾರಿಶಕ್ತಿ ಪ್ರಜಾಪ್ರಭುತ್ವದ ನಾಯಕತ್ವ ವಹಿಸುವುದನ್ನು ತಡೆಯುವ ಮೂಲಕ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ದೇಶಕ್ಕೆ ದ್ರೋಹ ಬಗೆದಿರುವುದಲ್ಲೇ ಇತಿಹಾಸವನ್ನು ಮರುಕಳಿಸುವಂತೆ ಮಾಡಿದೆ. ದೇಶದ ಆಡಳಿತ ಹಾಗೂ ಶಾಸನ ರಚನಾ ಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ಕಲ್ಪಿಸುವ ‘ನಾರಿ ಶಕ್ತಿ ವಂದನಾ’ ಐತಿಹಾಸಿಕ ಮಸೂದೆಯನ್ನು ಕಾಂಗ್ರೆಸ್ ನೇತೃತ್ವದ ಇಂಡಿ ಮೈತ್ರಿಕೂಟ ಸೋಲಿಸಿದೆ. ದೇಶ ಈ ದಿನವನ್ನೆಂದೂ ಮರೆಯದು. ಭವ್ಯ ಭಾರತದ ಇತಿಹಾಸಕ್ಕೆ ಇದೊಂದು ಕರಾಳ ದಿನವಾಗಿ ಉಳಿಯಲಿದೆ.‌…

  • ಛಲವಾದಿ ವಿರುದ್ಧ ಆರೋಪ ವಿವಾದ ತೀವ್ರ – ಎಂಎಲ್‌ಸಿ ರಮೇಶ್ ವಿರುದ್ಧ ಕ್ರಮ ಎಚ್ಚರಿಕೆ

    ಛಲವಾದಿ ವಿರುದ್ಧ ಆರೋಪ ವಿವಾದ ತೀವ್ರ – ಎಂಎಲ್‌ಸಿ ರಮೇಶ್ ವಿರುದ್ಧ ಕ್ರಮ ಎಚ್ಚರಿಕೆ

    ಯಾದಗಿರಿ : ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಬಗ್ಗೆ ಇಲ್ಲ, ಸಲ್ಲದ ಆರೋಪಗಳನ್ನು ಮಾಡಿರುವ ಕಾಂಗ್ರೆಸ್ ನ ಎಂಎಲ್ ಸಿ ರಮೇಶ ಅವರ‌ ವಿರುದ್ಧ ಪ್ರಕರಣ ದಾಖಲಿಸಲಾಗುವುದೆಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪರಶುರಾಮ್ ಕುರಕುಂದಾ ಎಚ್ಚರಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಪ್ರತಿಪಕ್ಷದ ನಾಯಕನಾಗಿ ನಾರಾಯಣಸ್ವಾಮಿ ಅವರು ಸಮರ್ಥವಾಗಿ ಕೆಲಸ ಮಾಡುತ್ತಿರುವುದು ಕಾಂಗ್ರೆಸ್ ನವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಅದೇ ಕಾರಣಕ್ಕಾಗಿ ಇಂತಹವರನ್ನು ಮುಂದೆ ಮಾಡಿ ಇಲ್ಲದ ಆರೋಪಗಳನ್ನು ಮಾಡಿಸುವತ್ತ ಕಾಂಗ್ರೆಸ್…

  • ಸಾಮರಸ್ಯ, ಸಮಾನತೆ ಅರ್ಥವಾದಾಗ ಮಾತ್ರ ಸಮ ಸಮಾಜ ನಿರ್ಮಾಣ : ಸಿಎಂ ಸಿದ್ದರಾಮಯ್ಯ
    ,

    ಸಾಮರಸ್ಯ, ಸಮಾನತೆ ಅರ್ಥವಾದಾಗ ಮಾತ್ರ ಸಮ ಸಮಾಜ ನಿರ್ಮಾಣ : ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕರ್ನಾಟಕ ಸರ್ಕಾರ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಆಯೋಜಿಸಿದ್ದ “ಕನ್ನಡ ಸಾಮರಸ್ಯದ ನೆಲೆಗಳು” ಯೋಜನೆಯಡಿ 41 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕನ್ನಡ ಸಾಮರಸ್ಯ ನೆಲೆ ಯೋಜನೆಯಡಿ ಒಟ್ಟು 100 ಪುಸ್ತಕಗಳನ್ನು ಹೊರತರುವ ಉದ್ದೇಶವಿದ್ದು, ಉಳಿದ 59 ಕೃತಿಗಳು ಶೀಘ್ರದಲ್ಲೇ ಬಿಡುಗಡೆಯಾಗಲಿವೆ. ದೇಶ ಹಾಗೂ…

  • ಮರಾಠಿ ನಿಯಮಕ್ಕೆ ಬೆಂಬಲ – ಕರ್ನಾಟಕದಲ್ಲೂ ಕನ್ನಡ ಕಡ್ಡಾಯವಾಗಲಿ: ಕರವೇ ಆಗ್ರಹ

    ಮರಾಠಿ ನಿಯಮಕ್ಕೆ ಬೆಂಬಲ – ಕರ್ನಾಟಕದಲ್ಲೂ ಕನ್ನಡ ಕಡ್ಡಾಯವಾಗಲಿ: ಕರವೇ ಆಗ್ರಹ

    ಮಹಾರಾಷ್ಟ್ರದಲ್ಲಿ ಮರಾಠಿ ಭಾಷೆ ಬಾರದ ಟ್ಯಾಕ್ಸಿ ಮತ್ತು ಆಟೋ ಚಾಲಕರ ಪರವಾನಗಿಯನ್ನು ರದ್ದುಪಡಿಸಲು ಅಲ್ಲಿನ ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರ ದೃಢ ನಿರ್ಧಾರ ಕೈಗೊಂಡಿದೆ. ಮೇ 1ರಿಂದ (ಮಹಾರಾಷ್ಟ್ರ ದಿನಾಚರಣೆಯಂದು) ಈ ನಿಯಮ ಕಟ್ಟುನಿಟ್ಟಾಗಿ ಜಾರಿಗೆ ಬರುತ್ತಿದೆ. ಸಾರಿಗೆ ಇಲಾಖೆಯ ಅಧಿಕಾರಿಗಳು ರಾಜ್ಯಾದ್ಯಂತ 59 ಆರ್‌ಟಿಒ ಕಚೇರಿಗಳಲ್ಲಿ ತಪಾಸಣೆ ನಡೆಸಿ, ಮರಾಠಿ ಓದಲು, ಬರೆಯಲು ಮತ್ತು ಮಾತನಾಡಲು ತಿಳಿಯದ ಚಾಲಕರ ಪರವಾನಗಿಗಳನ್ನು ರದ್ದುಗೊಳಿಸುವ ಕೆಲಸ ಈಗಾಗಲೇ ಆರಂಭಿಸಿದ್ದಾರೆ. ಈ ಅರ್ಥಪೂರ್ಣ, ಧೈರ್ಯದ ನಿರ್ಧಾರವನ್ನು ಕರ್ನಾಟಕ ರಕ್ಷಣಾ…

  • ತಳವಾರ ಸಮಾಜಕ್ಕೆ ಎಸ್‌ಟಿ ಪ್ರಮಾಣಪತ್ರಕ್ಕಾಗಿ ಏ.27ರಂದು ‘ಕಲಬುರಗಿ ಚಲೋ’ ಕರೆ

    ತಳವಾರ ಸಮಾಜಕ್ಕೆ ಎಸ್‌ಟಿ ಪ್ರಮಾಣಪತ್ರಕ್ಕಾಗಿ ಏ.27ರಂದು ‘ಕಲಬುರಗಿ ಚಲೋ’ ಕರೆ

    ಯಾದಗಿರಿ : ತಳವಾರ ಸಮಾಜಕ್ಕೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ನೀಡುವಂತೆ ಆಗ್ರಹಿಸಿ ಮಾಡು ಇಲ್ಲವೇ ಮಡಿ ಎಂಬ ಘೋಷ ವಾಕ್ಯದೊಂದಿಗೆ ಕಲಬುರಗಿ ಚಲೋ ಏಪ್ರಿಲ್ 27ರಂದು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ತಳವಾರ ಸಮಾಜದ ರಾಜ್ಯಾಧ್ಯಕ್ಷ ಡಾ. ಸರ್ದಾರ ರಾಯಪ್ಪ ಹೇಳಿದರು. ಬುಧವಾರ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಅನಿರ್ದಿಷ್ಟಾವಧಿ‌ಗೆ ಹೋರಾಟ‌ ಮಾಡಲಾಗುವುದು ಎಂದು ಹೇಳಿದರು. ಬಿಜೆಪಿ ಸರ್ಕಾರವು 2020ರಲ್ಲಿ ತಳವಾರ ಸಮಾಜಕ್ಕೆ ಪರಿಶಿಷ್ಟ ಪಂಗಡದ ಜಾತಿ…

  • ಯಾದಗಿರಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

    ಯಾದಗಿರಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

    ಯಾದಗಿರಿ : ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಾರತ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ್ ವಿಭೂತಿಹಳ್ಳಿ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ಎಲ್ಲ ವರ್ಗಗಳಿಗೂ ಸಮಾನ ಅವಕಾಶಗಳನ್ನು ಒದಗಿಸಿರುವ ಮಹತ್ವದ ದಸ್ತಾವೇಜು ಎಂದರು. ಸಮಾಜದ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಅವರ ಚಿಂತನೆಗಳು ಇಂದಿಗೂ ಮಾರ್ಗದರ್ಶಕವಾಗಿವೆ. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ಅವರ ತತ್ವಗಳು ಸಮಾಜ ಪರಿವರ್ತನೆಗೆ ದಾರಿದೀಪವಾಗಿವೆ…

  • ಯಾದಗಿರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ – ಸಮಾನತೆಯ ಕನಸು ನನಸಾಗಿಸಲು ಸಚಿವ ಶರಣಬಸಪ್ಪ ದರ್ಶನಾಪುರ ಕರೆ

    ಯಾದಗಿರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ – ಸಮಾನತೆಯ ಕನಸು ನನಸಾಗಿಸಲು ಸಚಿವ ಶರಣಬಸಪ್ಪ ದರ್ಶನಾಪುರ ಕರೆ

    ಯಾದಗಿರಿ : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕಂಡಿದ್ದ ಸಮಾನತೆಯ ಕನಸನ್ನು ನನಸಾಗಿಸುವ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಎಲ್ಲರೂ ಬದ್ಧರಾಗಬೇಕು ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಯಾದಗಿರಿ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ…

  • ಶಿಕ್ಷಣವೇ ಸಂಕೋಲೆಗಳಿಂದ ಮುಕ್ತಿ ನೀಡುವ ಶಕ್ತಿ: ಸಿಎಂ ಸಿದ್ದರಾಮಯ್ಯ
    ,

    ಶಿಕ್ಷಣವೇ ಸಂಕೋಲೆಗಳಿಂದ ಮುಕ್ತಿ ನೀಡುವ ಶಕ್ತಿ: ಸಿಎಂ ಸಿದ್ದರಾಮಯ್ಯ

    “ಅಂಬೇಡ್ಕರ್ ಸಂವಿಧಾನದಿಂದಲೇ ನಾನು ಮುಖ್ಯಮಂತ್ರಿ” ಬೆಂಗಳೂರು :  ಸಂವಿಧಾನ ಶಿಲ್ಪಿ B R Ambedkar ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಎಲ್ಲ ಸಂಕೋಲೆಗಳಿಂದ ವಿಮುಕ್ತರಾಗಲು ಶಿಕ್ಷಣವೇ ಪ್ರಬಲ ಅಸ್ತ್ರ ಎಂದು ಮುಖ್ಯಮಂತ್ರಿ Siddaramaiah ಹೇಳಿದರು. ವಿಧಾನಸೌಧದಲ್ಲಿ ಭವ್ಯ ಕಾರ್ಯಕ್ರಮ ಸಮಾಜ ಕಲ್ಯಾಣ ಇಲಾಖೆಯಿಂದ ವಿಧಾನಸೌಧದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಸಿಎಂ ಮಾತನಾಡಿದರು. “ಸಂವಿಧಾನದಿಂದಲೇ ನಾನು ಸಿಎಂ” ಅಂಬೇಡ್ಕರ್ ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ. ಅವರು ದಮನಿತರು,…

  • ಭದ್ರಾ ಯೋಜನೆಗೆ ₹5,300 ಕೋಟಿ ಇನ್ನೂ ಇಲ್ಲ: ಕೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಟೀಕೆ
    , ,

    ಭದ್ರಾ ಯೋಜನೆಗೆ ₹5,300 ಕೋಟಿ ಇನ್ನೂ ಇಲ್ಲ: ಕೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಟೀಕೆ

    ಚಿಕ್ಕಮಗಳೂರು, ಏಪ್ರಿಲ್ 13: ಭದ್ರಾ ಮೇಲ್ದಂಡೆ ಯೋಜನೆಗೆ 2023–24ರ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ ₹5,300 ಕೋಟಿ ಅನುದಾನ ಇನ್ನೂ ಬಿಡುಗಡೆಯಾಗದಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಘೋಷಣೆ ಬಳಿಕ ಅನುಷ್ಠಾನದಲ್ಲಿ ವಿಳಂಬವಾಗಿರುವುದು ರಾಜ್ಯದ ಹಿತಕ್ಕೆ ವಿರುದ್ಧವಾಗಿದೆ ಎಂದು ಅವರು ಹೇಳಿದರು. ಚಿಕ್ಕಮಗಳೂರಿನ ಹಂದೂರು ಗ್ರಾಮದಿಂದ ನರಸಿಂಹರಾಜಪುರವನ್ನು ಸಂಪರ್ಕಿಸುವ ₹36 ಕೋಟಿ ವೆಚ್ಚದ ಭದ್ರಾ ಹಿನ್ನೀರಿನ ಸೇತುವೆ ಉದ್ಘಾಟನೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಈ ಸಂದರ್ಭದಲ್ಲಿ ಸೇತುವೆ ಸೇರಿದಂತೆ ವಿವಿಧ…

  • ಅಂಬೇಡ್ಕರ್ ಜಯಂತಿ ವಿವಾದ: ಶಾಸಕರು, ತಹಸೀಲ್ದಾರ್‌ರ ವಿರುದ್ಧದ ಆರೋಪ ಸತ್ಯಕ್ಕೆ ದೂರ – ರಮೇಶ ದೊರೆ ಆಲ್ದಾಳ

    ಅಂಬೇಡ್ಕರ್ ಜಯಂತಿ ವಿವಾದ: ಶಾಸಕರು, ತಹಸೀಲ್ದಾರ್‌ರ ವಿರುದ್ಧದ ಆರೋಪ ಸತ್ಯಕ್ಕೆ ದೂರ – ರಮೇಶ ದೊರೆ ಆಲ್ದಾಳ

    ಸುರಪುರ: ಸಂವಿಧಾನ ಶಿಲ್ಪಿ B R Ambedkar ಅವರ ಜಯಂತಿ ಆಚರಣೆ ವಿಚಾರದಲ್ಲಿ ತಾಲೂಕು ಆಡಳಿತ ಹಾಗೂ ಶಾಸಕರ ವಿರುದ್ಧ ಮಾಡಲಾಗುತ್ತಿರುವ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನವಾಗಿದೆ ಎಂದು ಸಾಮೂಹಿಕ ಸಂಘಟನೆಗಳ ಒಕ್ಕೂಟದ ಮುಖಂಡ ರಮೇಶ ದೊರೆ ಆಲ್ದಾಳ ಸ್ಪಷ್ಟಪಡಿಸಿದರು. ಸಭೆಯ ನಿರ್ಣಯದಂತೆ ಆಯ್ಕೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 10ರಂದು ತಹಸೀಲ್ದಾರರು ಸಭೆ ಕರೆದು ವಿಶೇಷ ಆಹ್ವಾನಿತರ ಹೆಸರನ್ನು ಸೂಚಿಸಲು ಕೇಳಿದ್ದರು. ಎಲ್ಲಾ ಸಂಘಟನೆಗಳ ಒಮ್ಮತದಿಂದ ಶಿಕ್ಷಣಪ್ರೇಮಿ ಮಾನಪ್ಪ ಕರಡಕಲ್ ಅವರನ್ನು…

Suddi Belaku