Tag: Road Development

  • ಯಾದಗಿರಿ ನಗರದ ವಾರ್ಡ್‌ಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ: ಶಾಸಕ ತುನ್ನೂರ

    ಯಾದಗಿರಿ ನಗರದ ವಾರ್ಡ್‌ಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ: ಶಾಸಕ ತುನ್ನೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾ ಕೇಂದ್ರವೂ ಪ್ರತಿ ವರ್ಷ ವಿಸ್ತಾರವಾಗುತ್ತಿದೆ, ಇಲ್ಲಿನ ಜನರ ಬೇಡಿಕೆಯಂತೆ ನಗರದ  ಎಲ್ಲಾ ವಾರ್ಡ್ಗಳಲ್ಲಿ ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ವಾರ್ಡ್ ಸಂಖ್ಯೆ. ೨೨ರ ವೀರಶೈವ ಕಲ್ಯಾಣ ಮಂಟಪದ ಹತ್ತಿರ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(ಟಿಎಸ್‌ಪಿ) ಯೋಜನೆಯಡಿಯಲ್ಲಿ ನಿರ್ಮಿತಿ ಕೇಂದ್ರದಿAದ ಅಂದಾಜು ೨೫ ಲಕ್ಷ ರೂ, ವೆಚ್ಚದಲ್ಲಿ ನಿರ್ಮಾಣ ಮಾಡಲಿರುವ ಸಿಸಿ ರಸ್ತೆ…

  • ಪಾದಚಾರಿ ರಸ್ತೆ ನಿರ್ಮಾಣದಲ್ಲಿ ಅವ್ಯವಸ್ಥೆ: ಅಧಿಕಾರಿಗಳ ವಿರುದ್ಧ ಕರವೇ ಆಕ್ರೋಶ

    ಪಾದಚಾರಿ ರಸ್ತೆ ನಿರ್ಮಾಣದಲ್ಲಿ ಅವ್ಯವಸ್ಥೆ: ಅಧಿಕಾರಿಗಳ ವಿರುದ್ಧ ಕರವೇ ಆಕ್ರೋಶ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ಸರ್ಕಾರಿ ಪದವಿಕಾಲೇಜಿನಿಂದ ಗ್ರಾಮೀಣ ಠಾಣೆ ವರೆಗಿನ ರಸ್ತೆ ಬದಿ ಪಾದಚಾರಿ ರಸ್ತೆ ನಿರ್ಮಾಣ ಕಾಮಗಾರಿ ವಿಳಂಬವಾಗಿ ನಡೆಯುತ್ತಿರುವುದರಿಂದ ಜನರಿಗೆ ತೊಂದರೆಯಾಗುತ್ತಿದೆ ಅಲ್ಲದೇ ಕಾಮಗಾರಿ ಕಳಪೆಯಾಗಿದ್ದು, ಮೇಲಾಗಿ ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಒಟ್ಟಾರೆ ಕಾಮಗಾರಿ ಬ್ರಷ್ಟಾಚಾರದ ಕೂಪವಾಗಿದ್ದು, ಮಂದಗತಿಯಿAದ ನಡೆಯುತ್ತಿದೆ. ಕಾಮಗಾರಿ ಅಂಗವಾಗಿ ಅಳಿದುಳದ ಮಣ್ಣನ್ನು ರಸ್ತೆಯ ಮೇಲೆ ಬಿಟ್ಟಿರುವುದರಿಂದ ಮೊದಲೇ…

  • ಗ್ರಾಮೀಣ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ಚನ್ನಾರಡ್ಡಿ ಪಾಟೀಲ್

    ಗ್ರಾಮೀಣ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ಚನ್ನಾರಡ್ಡಿ ಪಾಟೀಲ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕಳೆದ 3 ವರ್ಷಗಳಲ್ಲಿ ನನ್ನ ಮತಕ್ಷೇತ್ರದ ಯಾದಗಿರಿ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ಯಾದಗಿರಿ ಮತಕ್ಷೇತ್ರದ ರಾಮಸಮುದ್ರ ತಾಂಡಾದಲ್ಲಿ 2025-26ನೇ ಸಾಲಿನ ಕೆಕೆಆರ್‌ಡಿಬಿ ಮೈಕ್ರೋ ಎಸ್‌ಸಿಪಿ ಯೋಜನೆಯಡಿಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿರ್ಮಾಣ ಮಾಡುತ್ತಿರುವ 2 ಕೋಟಿ ರೂ. ವೆಚ್ಚದಲ್ಲಿ ರಾಮಸಮುದ್ರ ತಾಂಡಾದಿAದ ಆಶನಾಳ ತಾಂಡಾದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ…

  • ಯರಗೋಳ, ಹೋರುಂಚಾದಲ್ಲಿ ₹7 ಕೋಟಿ ರಸ್ತೆ ಕಾಮಗಾರಿಗೆ ಶಾಸಕ ಕಂದಕೂರ ಚಾಲನೆ

    ಯರಗೋಳ, ಹೋರುಂಚಾದಲ್ಲಿ ₹7 ಕೋಟಿ ರಸ್ತೆ ಕಾಮಗಾರಿಗೆ ಶಾಸಕ ಕಂದಕೂರ ಚಾಲನೆ

    ಡೆವಲಪ್ಮೆಂಟ್ ಪಾಲಿಟಿಕ್ಸ್ ಮಾಡಿ, ಸೆಟಲ್‌ಮೆಂಟ್ ರಾಜಕಾರಣ ಬೇಡ: ಡಿಕೆಶಿಗೆ ಶಾಸಕ ಕಂದಕೂರ ಸಲಹ ಸುದ್ದಿ ಬೆಳಕು ವಾರ್ತೆ  ಯಾದಗಿರಿ : ರಾಜ್ಯದಲ್ಲಿ ಅಧಿಕಾರ ನಡೆಸಿದ ಮೂರು ಜನ ಮುಖ್ಯಮಂತ್ರಿಗಳು ತಮ್ಮ ಜನಪರ ಆಡಳಿತದಿಂದ ಜನ ಮಾನಸದಲ್ಲಿ ಅಚ್ಚಳಿಯದಂತೆ ಉಳಿದಿದ್ದಾರೆ ಎಂದು ಗುರಮಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರು ತಿಳಿಸಿದರು. ಸೋಮವಾರ ಮತಕ್ಷೇತ್ರದ ಹೋರುಂಚಾ ಹಾಗೂ ಯರಗೋಳ ಗ್ರಾಮದಲ್ಲಿ ಕೆಕೆಆರ್ ಡಿಬಿಯ ಮೈಕ್ರೋ ಎಸ್.ಸಿಪಿ ಯೋಜನೆಯಡಿ ಥಾವರು ನಾಯಕ ತಾಂಡಾದಿಂದ ತಾನು ನಾಯಕ ತಾಂಡಾವರೆಗೆ ಮುಖ್ಯರಸ್ತೆ 4 ಕೋಟಿ…

  • ಗ್ರಾಮೀಣ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು: ಶಾಸಕ ಕಂದಕೂರ

    ಗ್ರಾಮೀಣ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು: ಶಾಸಕ ಕಂದಕೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸರ್ಕಾರದಿಂದ ಬಿಡುಗಡೆಗೊಳಿಸುವ ಅನುದಾನವನ್ನ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಅಧಿಕಾರಿಗಳು ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುವಂತೆ ಶಾಸಕ ಶರಣಗೌಡ ಕಂದಕೂರ ಸಂಬಂಧಿಸಿದ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಬುಧವಾರ ಗುರಮಠಕಲ್ ಕ್ಷೇತ್ರದ ಚಿನ್ನಾಕಾರ್ ಕ್ರಾಸ್ ಬಳಿ ಕೆಕೆಆರ್ಡಿಬಿ ಮೈಕ್ರೋ ಸಾಮಾನ್ಯ ಯೋಜನೆ ಅಡಿಯಲ್ಲಿ 9.90 ಕೋಟಿ ರೂ.ವೆಚ್ಛದಲ್ಲಿ ಮತಕ್ಷೇತ್ರದ ಸಿಂದಗಿ-ಕೊಡಂಗಲ್ ರಾಜ್ಯ ಹೆದ್ದಾರಿ 16 ಮುಖ್ಯ ರಸ್ತೆ ಆಯ್ದು ಭಾಗಗಳಲ್ಲಿ ಮರು ಡಾಂಬರಕರಣ ಹಾಗೂ ಗುರುಮಠಕಲ್ ಪಟ್ಟಣದ ರಸ್ತೆ…

Suddi Belaku