by
Tag: Social Justice

ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲು ಆಗ್ರಹ
ಸುದ್ದಿ ಬೆಳಕು ವಾರ್ತೆ ಕಲಬುರಗಿ: ಹಿಂದುಳಿದ ಹಾಗೂ ಸಣ್ಣ ಸಣ್ಣ ಕಾಯಕ ಸಮಾಜಗಳಿಗೆ ನೀಡಿದ ಆಶ್ವಾಸನೆಗಳು ಬರೀ ಸುಳ್ಳಾಗದೆ, ಕೊಟ್ಟ ಮಾತು ತಪ್ಪದೆ ನ್ಯಾಯ ದೊರಕಿಸಿಕೊಡುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡಬೇಕು ಎಂದು ಕಲಬುರಗಿ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಒತ್ತಾಯಿಸಿದೆ. ಸಮಾಜದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಅವರಿಗೆ ಸಮಾಜದ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು. ಸಮಾಜದ ಪ್ರಮುಖ ಬೇಡಿಕೆಗಳು: ಪ್ರತ್ಯೇಕ ಅಭಿವೃದ್ಧಿ ನಿಗಮ: ಹಡಪದ ಅಪ್ಪಣ್ಣ…

ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್ ಬದ್ಧ: ಸಿಎಂ
ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ನಮ್ಮ ಸರ್ಕಾರ ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಿದ್ದು, ಅದನ್ನು ಜಾರಿಗೆ ತಂದು ಸಾಮಾಜಿಕ ನ್ಯಾಯ ಒದಗಿಸಲು ನಾವು ಬದ್ಧರಾಗಿದ್ದೇವೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ರಾಷ್ಟ್ರೀಯ ಒಬಿಸಿ ಮಹಾಸಂಘದ 11ನೇ ರಾಷ್ಟ್ರೀಯ ಮಹಾ ಸಮಾವೇಶವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. “21 ರಾಜ್ಯಗಳಿಂದ ಬಂದಿರುವ ನಿಮ್ಮೆಲರನ್ನು ಭೇಟಿ ಮಾಡಿರುವುದು ಸಂತೋಷ ತಂದಿದೆ. ಕಾಂಗ್ರೆಸ್ ಪಕ್ಷ ಹಾಗೂ ಕರ್ನಾಟಕ ಸರ್ಕಾರದ…

ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣಪತ್ರ ನೀಡಲು – ಎನ್. ರವಿಕುಮಾರ್ ಆಗ್ರಹ
ಸುದ್ದಿ ಬೆಳಕು ವಾರ್ತೆ ಬೆಂಗಳೂರು : ಕಲಬುರಗಿಯಲ್ಲಿ ತಳವಾರ ಸಮುದಾಯದವರಿಗೆ ಪರಿಶಿಷ್ಟ ಪಂಗಡ (ಎಸ್ಟಿ) ಪ್ರಮಾಣ ಪತ್ರಕ್ಕಾಗಿ ಹೋರಾಟ ನಡೆಸುತ್ತಿದ್ದವರ ಮೇಲೆ ಲಾಠಿ ಪ್ರಹಾರ ಮಾಡಿ ಬಂಧಿಸಿ ಎಫ್ಐಕಆರ್ ದಾಖಲಿಸಿರುವುದು ಸರಿಯಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ತಿನ ವಿರೋಧಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ್ ಅವರು ಆಗ್ರಹಿಸಿದ್ದಾರೆ. ಮಂಗಳವಾರ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು. ತಳವಾರ ಸಮುದಾಯಕ್ಕೆ ಎಸ್ಟಿಕ ಪ್ರಮಾಣಪತ್ರ ಕೊಡುತ್ತಿಲ್ಲ…

ಒಳ ಮೀಸಲಾತಿ ಸಚಿವ ಸಂಪುಟದಲ್ಲಿ ಸರ್ವಾನುಮತದ ಒಪ್ಪಿಗೆ ಹರ್ಷ!
ಸುದ್ದಿ ಬೆಳಕು ವಾರ್ತೆ ಶಹಾಪುರ, ಏಪ್ರಿಲ್ 25: ಕಳೆದ ನಾಲ್ಕು ದಶಕಗಳಿಂದ ಒಳಮೀಸಲಾತಿ ಹೊರಾಟಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಬಿಂದು ಅನುಸಾರ ಸವಾನುಮತಿದಿÀಂದ ಒಪ್ಪಿಗೆ ನೀಡಿತು, ಮುಖ್ಯಮಂತ್ರಿ ಸಿದ್ರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ನೆನೆಗುದಿಗೆ ಬಿದ್ದಿದ್ದ ನ್ಯಾ,ನಾಗಮೋಹನದಾಸರವರ ವರದಿ ಬಿಂದುಅನುಸಾರದ ಕೆಲವು ಗೊಂದಲಗಳನ್ನು ಸರಿಪಡಿಸಿ, ಸರ್ವರಿಗೂ ಸಮಬಾಳು ಸಮಪಾಲು ಎನ್ನವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೆ ತರುತ್ತಿದೆ ಎಂದು ಸಣ್ಣ ಕೈಗಾರಿಕಾ ಮತ್ತು ಸಾರ್ವತ್ರಿಕ ಉಧ್ಯಮಗಳ ಮಂತ್ರಿಗಳಾದ ಶರಣಬಸ್ಸಪ್ಪಗೌಡ ದರ್ಶನಾಪುರವರು ದೂರವಾಣಿ…

ತಳವಾರ ಸಮಾಜಕ್ಕೆ ಎಸ್ಟಿ ಪ್ರಮಾಣಪತ್ರಕ್ಕಾಗಿ ಏ.27ರಂದು ‘ಕಲಬುರಗಿ ಚಲೋ’ ಕರೆ
ಯಾದಗಿರಿ : ತಳವಾರ ಸಮಾಜಕ್ಕೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ನೀಡುವಂತೆ ಆಗ್ರಹಿಸಿ ಮಾಡು ಇಲ್ಲವೇ ಮಡಿ ಎಂಬ ಘೋಷ ವಾಕ್ಯದೊಂದಿಗೆ ಕಲಬುರಗಿ ಚಲೋ ಏಪ್ರಿಲ್ 27ರಂದು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ತಳವಾರ ಸಮಾಜದ ರಾಜ್ಯಾಧ್ಯಕ್ಷ ಡಾ. ಸರ್ದಾರ ರಾಯಪ್ಪ ಹೇಳಿದರು. ಬುಧವಾರ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಅನಿರ್ದಿಷ್ಟಾವಧಿಗೆ ಹೋರಾಟ ಮಾಡಲಾಗುವುದು ಎಂದು ಹೇಳಿದರು. ಬಿಜೆಪಿ ಸರ್ಕಾರವು 2020ರಲ್ಲಿ ತಳವಾರ ಸಮಾಜಕ್ಕೆ ಪರಿಶಿಷ್ಟ ಪಂಗಡದ ಜಾತಿ…

ಯಾದಗಿರಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಯಾದಗಿರಿ : ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಾರತ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ್ ವಿಭೂತಿಹಳ್ಳಿ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ಎಲ್ಲ ವರ್ಗಗಳಿಗೂ ಸಮಾನ ಅವಕಾಶಗಳನ್ನು ಒದಗಿಸಿರುವ ಮಹತ್ವದ ದಸ್ತಾವೇಜು ಎಂದರು. ಸಮಾಜದ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಅವರ ಚಿಂತನೆಗಳು ಇಂದಿಗೂ ಮಾರ್ಗದರ್ಶಕವಾಗಿವೆ. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ಅವರ ತತ್ವಗಳು ಸಮಾಜ ಪರಿವರ್ತನೆಗೆ ದಾರಿದೀಪವಾಗಿವೆ…

ಯಾದಗಿರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ – ಸಮಾನತೆಯ ಕನಸು ನನಸಾಗಿಸಲು ಸಚಿವ ಶರಣಬಸಪ್ಪ ದರ್ಶನಾಪುರ ಕರೆ
ಯಾದಗಿರಿ : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕಂಡಿದ್ದ ಸಮಾನತೆಯ ಕನಸನ್ನು ನನಸಾಗಿಸುವ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಎಲ್ಲರೂ ಬದ್ಧರಾಗಬೇಕು ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಯಾದಗಿರಿ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ…
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ













