by
Tag: Suddi Belaku News

ಭಾರತೀಯ ಸೇನೆಗೆ ಆಯ್ಕೆಯಾದ ಬೀರಪ್ಪ ಗೋಡಿಹಾಳಗೆ ಭವ್ಯ ಸನ್ಮಾನ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ದೇಶ ಕಾಯುವ ಯೋಧನಿಗಿಂತ ಮಿಗಿಲಾದ ದೇವರಿಲ್ಲ, ಭಾರತಾಂಬೆಯ ರಕ್ಷಣೆಗಾಗಿ ತನ್ನ ಜೀವನವನ್ನೇ ಮುಡಿಪಾಗಿಡುವುದು ಪ್ರತಿಯೊಬ್ಬ ಭಾರತೀಯನಿಗೂ ಸಿಗುವ ಅತ್ಯುನ್ನತ ಸೌಭಾಗ್ಯ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀಧರ ಸಾಹುಕಾರ ಅವರು ನುಡಿದರು. ದೇಶದ ರಕ್ಷಣಾ ಪಡೆಗೆ ಆಯ್ಕೆಯಾಗುವ ಮೂಲಕ ಯಾದಗಿರಿ ಮತಕ್ಷೇತ್ರದ ಗುಂಡಳ್ಳಿ ಗ್ರಾಮದ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಎತ್ತಿ ಹಿಡಿದಿರುವ ವೀರಯೋಧ ಶ್ರೀ ಬೀರಪ್ಪ ತಂದೆ ತಿಪ್ಪಣ್ಣ ಗೋಡಿಹಾಳ ಅವರನ್ನು ಶ್ರೀಧರ ಸಾಹುಕಾರ ಅವರು ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಿದರು, ಹಾಗೂ ಇಂತಹ…
by

ಸೇಡಂಗೆ ಬಡ್ತಿ ಹೊಂದಿದ ಅಧಿಕಾರಿ ಅಂಬಿಕೇಶ್ವರ ಅವರಿಗೆ ಬಿಳ್ಕೊಡುಗೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸರಕಾರಿ ಕೆಲಸದಲ್ಲಿ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದರೆ ಸಾರ್ವಜನಿಕರ ಪ್ರೀತಿ ಗಳಿಸಲು ಸಾಧ್ಯ ಎಂದು ಯಾದಗಿರಿ ನಗರಸಭೆ ಪೌರಾಯುಕ್ತರಾದ ಉಮೇಶ ಚವ್ಹಾಣ ಅವರು ಹೇಳಿದರು. ಇಲ್ಲಿನ ನಗರಸಭೆಯಲ್ಲಿ ಎಲೆಕ್ಟ್ರೀಕಲ್ ಗ್ರೇಡ್-೧ ಅಧಿಕಾರಿಯಾಗಿ ಸುದೀರ್ಘ ಸೇವೆ ಸಲ್ಲಿಸಿ, ಪ್ರಸ್ತುತ ಕಲಬುರಗಿ ಜಿಲ್ಲೆಯ ಸೇಡಂ ನಗರಸಭೆಗೆ ಕಿರಿಯ ಅಭಿಯಂತರರಾಗಿ ಬಡ್ತಿ ಹೊಂದಿರುವ ಅಂಬಿಕೇಶ್ವರ ಅವರಿಗೆ ಸನ್ಮಾನಿಸಿ ಮಾತನಾಡಿದರು. ಅಂಬಿಕೇಶ್ವರ ಅವರು ಯಾದಗಿರಿಯಲ್ಲಿ ಸೇವೆ ಸಲ್ಲಿಸುವಾಗ ನಗರದ ಸಮಸ್ಯೆಗಳಿಗೆ ಅತ್ಯಂತ ಉತ್ತಮವಾಗಿ ಸ್ಪಂದಿಸಿದ್ದಾರೆ. ಕಛೇರಿಯ…
by

ಅನ್ನಭಾಗ್ಯ ಅಕ್ಕಿ ದುರ್ಬಳಕೆ ಮಾಡಿದವರಿಗೆ ಕಠಿಣ ಕಾನೂನು ಕ್ರಮ : ಜಿಲ್ಲಾಧಿಕಾರಿ ಎಚ್ಚರಿಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯಲ್ಲಿ ಪಡಿತರ ಚೀಟಿದಾರರಿಗೆ ವಿತರಣೆ ಮಾಡುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಣೆ ಹಾಗೂ ಸಾಗಾಣಿಕೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶ್ರೀ ರಾಹುಲ್ ತುಕಾರಾಮ ಪಾಂಡ್ವೆ ಅವರು ಎಚ್ಚರಿಕೆ ನೀಡಿದ್ದಾರೆ. ಅವರು ಇತ್ತೀಚಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ರೇಷನ್ ಅಕ್ಕಿಯನ್ನು ಕಾನೂನುಬಾಹಿರವಾಗಿ ಸಂಗ್ರಹಿಸುವ ಅಥವಾ ಸಾಗಿಸುವ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣವೇ…
by

ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ; ಪಂಚಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸರ್ಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರAಟಿ ಯೋಜನೆಯ ಲಾಭ ಅರ್ಹರಿಗೆ ದೊರೆಯುವಂತೆ ನೋಡಿಕೊಳ್ಳಲು ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀ ಶ್ರೇಣಿಕ್ ಕುಮಾರ್ ಧೋಕಾ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಪಂಚಗ್ಯಾರAಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಮಿತಿ ಸಭೆ ನಡೆಸಿದ ಅವರು ಪಂಚಗ್ಯಾರAಟಿ ಯೋಜನೆಯಲಾಭ ಅರ್ಹರಿಗೆ ದೊರೆಯಬೇಕು.ಅನರ್ಹ ಫಲಾನುಭವಿಗಳು ಇದರ ದುರುಪಯೋಗಪಡಿಸಿಕೊಳ್ಳದಂತೆ ನಿಗಾವಹಿಸಲು ಅವರು ಸೂಚಿಸಿದರು. ಜಿಲ್ಲೆಯಲ್ಲಿ ಗೃಹ ಲಕ್ಷ್ಮೀ ಹಾಗೂ ಅನ್ಯಭಾಗ್ಯ ಯೋಜನೆ ಲಾಭ ಪಡೆಯುತ್ತಿದ್ದ ಫಲಾನುಭವಿಗಳು…
by

ರಸ್ತೆ ಮೇಲೆ ಹರಿದ ಸೆಪ್ಟಿಕ್ ನೀರು; ತಕ್ಷಣ ತೆರವುಗೊಳಿಸಲು ಒತ್ತಾಯ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ಮಾತಮಾಣಿಕೇಶ್ವರಿ ಕಾಲೋನಿಯಲ್ಲಿರುವ ಅಲ್ಪಸಂಖ್ಯಾತರ ಇಲಾಖೆಯ ಅಬ್ದುಲ್ ಕಲಾಂ ಹಾಸ್ಟೆಲ್ ಹಿಂಭಾಗದ ಸೆಪ್ಟಿಕ್ ಟ್ಯಾಂಕ್ ತುಂಬಿ ಕಲುಷಿತ ನೀರು ರಸ್ತೆ ಹಾಗೂ ಖಾಲಿ ಜಾಗದಲ್ಲಿ ಉಕ್ಕಿ ಹರಿಯುತ್ತಿದ್ದು, ತೀವ್ರ ದುರ್ವಾಸನೆ ಮತ್ತು ಡೆಂಗ್ಯೂ, ಮಲೇರಿಯಾದಂತಹ ಮಾರಕ ಸಾಂಕ್ರಾಮಿಕ ರೋಗಗಳ ಭೀತಿ ಸೃಷ್ಟಿಸಿದೆ. ವಿದ್ಯಾರ್ಥಿಗಳು ಹಾಗೂ ಸ್ಥಳೀಯ ನಾಗರಿಕರ ಆರೋಗ್ಯಕ್ಕೆ ಕಂಟಕವಾಗಿರುವ ಈ ಸಮಸ್ಯೆಯ ಕುರಿತು ಅಧಿಕಾರಿಗಳು ತೀವ್ರ ನಿರ್ಲಕ್ಷ್ಯ ವಹಿಸಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣವೇ ಎಚ್ಚೆತ್ತುಕೊಂಡು ಕಲುಷಿತ ನೀರನ್ನು…
by

ಯಾದಗಿರಿ ದೇವಾಲಯಗಳಲ್ಲಿ ಸಿಸಿಟಿವಿ, UPI ಕಡ್ಡಾಯ; ಜಿಲ್ಲಾಧಿಕಾರಿ ಮಹತ್ವದ ಆದೇಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಧರ್ಮದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಹುಂಡಿ, ದೇಣಿಗೆ, ಚಿನ್ನ-ಬೆಳ್ಳಿ ವಸ್ತುಗಳ ಭದ್ರತೆ ಹಾಗೂ ಲೆಕ್ಕಪತ್ರ ನಿರ್ವಹಣೆಯಲ್ಲಿ ಸಂಪೂರ್ಣ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಖಚಿತಪಡಿಸಿಕೊಳ್ಳಲು ಸರ್ಕಾರದ ಮಾರ್ಗಸೂಚಿಗಳನ್ನು (SOP) ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳಲ್ಲಿ ದೇವಾಲಯಗಳ ಹುಂಡಿ ಕಳ್ಳತನ ಹಾಗೂ ಹಣ ದುರುಪಯೋಗ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ…
by

ಸಾಂಸ್ಕೃತಿಕ ಚರಿತ್ರೆಯಲ್ಲಿ ಕನಕದಾಸರ ಕೊಡುಗೆ ಅಪಾರ: ಅನಸೂಯಾ ಛಲವಾದಿ
ದೋರನಹಳ್ಳಿಯಲ್ಲಿ ‘ಕನಕ ದರ್ಶನ’ ಉಪನ್ಯಾಸ ಕಾರ್ಯಕ್ರಮ ಸುದ್ದಿ ಬೆಳಕು ವಾರ್ತೆ ದೋರನಹಳ್ಳಿ : ಕನಕದಾಸರ ಸಾಧಕ ಜೀವನ ಕೇವಲ ಚರಿತ್ರೆಯ ವಿಷಯವಲ್ಲ, ಅದು ಕನ್ನಡ ನಾಡಿನ ಅಸ್ಮಿತೆಯಾಗಿದ್ದು, ಕರ್ನಾಟಕದ ಸಾಂಸ್ಕೃತಿಕ ಚರಿತ್ರೆಯಲ್ಲಿ ಅವರ ಕೊಡುಗೆ ಅಪಾರವಾಗಿದೆ ಎಂದು ಪ್ರಗತಿಪರ ಚಿಂತಕಿ ಅನಸೂಯಾ ಛಲವಾದಿ ಹೇಳಿದರು. ತಾಲೂಕಿನ ದೋರನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಜ್ಯೋತಿರ್ಗಮಯ ಸೇವಾ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ‘ಕನಕ ದರ್ಶನ’ ಉಪನ್ಯಾಸ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ…
by

ಉಳ್ಳೆಸೂಗುರದಲ್ಲಿ ವಿಬಿ-ಜಿ ರಾಮ್ ಜಿ ಕಾರ್ಮಿಕರ ಜಾಗೃತಿ ಅಭಿಯಾನ
ಸುದ್ದಿ ಬೆಳಕು ವಾರ್ತೆ ವಡಿಗೇರಾ: ಗ್ರಾಮೀಣ ಜನರಿಗೆ ಆಪತ್ತು ಬಾಂಧವ್ಯವಾಗಿರುವ ವಿಕಾಸಿತ ಭಾರತ ಫಾರ್ ಗ್ಯಾರಂಟಿ ಆ್ಯಂಡ್ ರೋಜಗಾರ್ ಮಿಷನ್ ಗ್ರಾಮೀಣ ಯೋಜನಯಿಂದ ಬಡವರ, ನಿರ್ಗತಿಕರ ದಾರದೀಪವಾಗಿದೆ ಎಂದು ತಾಲ್ಲೂಕು ಐಇಸಿ ಸಂಯೋಜಕ ದುರ್ಗೇಶ್ ಅವರು ಹೇಳಿದರು. ತಾಲ್ಲೂಕಿನ ಉಳ್ಳೆಸೂಗುರು ಗ್ರಾಮದಲ್ಲಿ ಐಇಸಿ ಚಟುವಟಿಕೆಯಡಿ ಆಯೋಜಿಸಿದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಇದೇ ಜುಲೈ ಒಂದರಿಂದ ದೇಶದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಆರಂಭವಾಗಿದ್ದು, ಕೂಲಿ ಕಾರ್ಮಿಕರಿಗೆ ಬಹುಪಯೋಗ ಯೋಜನೆಗಳು ಒಳಗೊಂಡಿದ್ದು, ದಿನಕ್ಕೆ ಕೂಲಿ 370 ರಿಂದ…
by
- ‘ಟೀಮ್ ಕರ್ನಾಟಕ’ವಾಗಿ ಒಟ್ಟಾಗಿ ಕೆಲಸ ಮಾಡೋಣ: ವಿಪಕ್ಷಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ
















