Tag: Suddi Belaku News

  • ಸೇಡಂ–ಯಾದಗಿರಿ ಬಸ್ ಅವ್ಯವಸ್ಥೆ: 8 ಬಸ್ ತಡೆದು ವಿದ್ಯಾರ್ಥಿಗಳ ರಸ್ತೆ ತಡೆ ಪ್ರತಿಭಟನೆ

    ಸೇಡಂ–ಯಾದಗಿರಿ ಬಸ್ ಅವ್ಯವಸ್ಥೆ: 8 ಬಸ್ ತಡೆದು ವಿದ್ಯಾರ್ಥಿಗಳ ರಸ್ತೆ ತಡೆ ಪ್ರತಿಭಟನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸೇಡಂ–ಯಾದಗಿರಿ ಮಾರ್ಗದಲ್ಲಿ ಸಂಚರಿಸುವ ಸರ್ಕಾರಿ ಬಸ್‌ಗಳು ಸಮಯಕ್ಕೆ ಸರಿಯಾಗಿ ಬಾರದಿರುವುದು, ವಿದ್ಯಾರ್ಥಿಗಳಿಗೆ ಸಮರ್ಪಕ ಆಸನ ವ್ಯವಸ್ಥೆ ಇಲ್ಲದಿರುವುದು ಹಾಗೂ ಸಾರಿಗೆ ಇಲಾಖೆಯ ನಿರ್ಲಕ್ಷ್ಯವನ್ನು ಖಂಡಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯಡಹಳ್ಳಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ರಸ್ತೆ ತಡೆದು ತೀವ್ರ ಪ್ರತಿಭಟನೆ ನಡೆಸಿದರು. ಹತ್ತುಕುಣಿ, ಯಡಹಳ್ಳಿ, ಹೊರುಂಚ–ಹೊರುಂಚ ತಾಂಡಾ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳು ಪ್ರತಿದಿನ ಇದೇ ಮಾರ್ಗದ ಬಸ್‌ಗಳನ್ನು ಅವಲಂಬಿಸಿ ಶಾಲೆ ಹಾಗೂ ಕಾಲೇಜುಗಳಿಗೆ ತೆರಳುತ್ತಿದ್ದಾರೆ. ಆದರೆ ಬಸ್‌ಗಳು ನಿಗದಿತ ವೇಳೆಗೆ…

  • ಯಾದಗಿರಿಯಲ್ಲಿ ಭುಗಿಲೆದ್ದ ರೈತರ ಆಕ್ರೋಶ: ಬೆಳೆ ಹಾನಿಗೆ ಪ್ರತಿ ಎಕರೆಗೆ 50 ಸಾವಿರ ಪರಿಹಾರ, ಸಂಪೂರ್ಣ ಸಾಲ ಮನ್ನಾಗೆ ಆಗ್ರಹ

    ಯಾದಗಿರಿಯಲ್ಲಿ ಭುಗಿಲೆದ್ದ ರೈತರ ಆಕ್ರೋಶ: ಬೆಳೆ ಹಾನಿಗೆ ಪ್ರತಿ ಎಕರೆಗೆ 50 ಸಾವಿರ ಪರಿಹಾರ, ಸಂಪೂರ್ಣ ಸಾಲ ಮನ್ನಾಗೆ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ (ಜುಲೈ 15): ಮಳೆಯಿಲ್ಲದೆ ಬೆಳೆ ಒಣಗುತ್ತಿರುವುದು, ಸಾಲದ ಬಾಧೆಯಿಂದ ರೈತರ ಆತ್ಮಹತ್ಯೆ ಸೇರಿದಂತೆ ವಿವಿಧ ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್) ಯಾದಗಿರಿ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿಗಳಿಗೆ ಇಂದು ತುರ್ತು ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದೆ. ಈ ವರ್ಷದ ಮೇ ತಿಂಗಳಿನಲ್ಲಿ ರೋಹಿಣಿ ಮಳೆ ಪ್ರಾರಂಭವಾದಾಗ ಬಿತ್ತನೆ ಮಾಡಿದ್ದ ಬೆಳೆಗಳು, ಕಳೆದ 45 ದಿನಗಳಿಂದ ಮಳೆಯಿಲ್ಲದೆ ಸಂಪೂರ್ಣ ಒಣಗುತ್ತಿವೆ. ಇದರಿಂದ ಕಂಗಾಲಾಗಿರುವ ರೈತರಿಗೆ ತಕ್ಷಣವೇ ನೈಸರ್ಗಿಕ ವಿಕೋಪ…

  • ಶಿವನಗೌಡ ನಾಯಕ ಜನ್ಮದಿನದಲ್ಲಿ ಅಭಿವೃದ್ಧಿಯ ಸಂಕಲ್ಪ; ವಿನಯ ಗುರೂಜಿ ಪ್ರಶಂಸೆ

    ಶಿವನಗೌಡ ನಾಯಕ ಜನ್ಮದಿನದಲ್ಲಿ ಅಭಿವೃದ್ಧಿಯ ಸಂಕಲ್ಪ; ವಿನಯ ಗುರೂಜಿ ಪ್ರಶಂಸೆ

    ಸುದ್ದಿ ಬೆಳಕು ವಾರ್ತೆ ಕವಿತಾಳ: ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಹಾಗೂ ಸಮಗ್ರ ನೀರಾವರಿ ಯೋಜನೆ ಜಾರಿಗಾಗಿ ನವಲಿ ಮತ್ತು ತಿಂಥಿಣಿ ಸೇತುವೆ ಬಳಿ ಜಲಾಶಯ ನಿರ್ಮಾಣದ ವಿಷಯವನ್ನು ಸಂಬಂಧಿಸಿದವರ ಗಮನಕ್ಕೆ ತಂದು, ಶೀಘ್ರದಲ್ಲೇ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವ ಪ್ರಯತ್ನ ಮಾಡಲಾಗುವುದು ಎಂದು ಗೌರಿಗದ್ದೆಯ ಅವಧೂತ ವಿನಯ ಗುರೂಜಿ ಹೇಳಿದರು. ಕೆಎಸ್‌ಎನ್ ಜನಕಲ್ಯಾಣ ಸಮಿತಿ ವತಿಯಿಂದ ಮಾಜಿ ಸಚಿವ ಕೆ. ಶಿವನಗೌಡ ನಾಯಕ ಅವರ 49ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಸಮಗ್ರ…

  • ರಾಯಚೂರಿನ ಅಭಿವೃದ್ಧಿಗೆ ನವಲಿ ಜಲಾಶಯ, ಏಮ್ಸ್ ಅನಿವಾರ್ಯ: ಕೆ. ಶಿವನಗೌಡ ನಾಯಕ

    ರಾಯಚೂರಿನ ಅಭಿವೃದ್ಧಿಗೆ ನವಲಿ ಜಲಾಶಯ, ಏಮ್ಸ್ ಅನಿವಾರ್ಯ: ಕೆ. ಶಿವನಗೌಡ ನಾಯಕ

    ಸುದ್ದಿ ಬೆಳಕು ವಾರ್ತೆ ರಾಯಚೂರು (ಕವಿತಾಳ): ಕಳೆದ 25 ವರ್ಷಗಳಿಂದ ಮಾನ್ವಿ, ಸಿರವಾರ ಹಾಗೂ ರಾಯಚೂರು ಭಾಗದಲ್ಲಿ ಸಮಗ್ರ ನೀರಾವರಿ ಸೌಲಭ್ಯ ಕೊರತೆಯಿದ್ದು, ಈ ಭಾಗದ ನೀರಾವರಿ ಸಮಸ್ಯೆ ನಿವಾರಣೆಗೆ ತುಂಗಭದ್ರಾ ನದಿಗೆ ನವಲಿ ಜಲಾಶಯ ನಿರ್ಮಾಣ ಅತ್ಯಗತ್ಯವಾಗಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಕೆ. ಶಿವನಗೌಡ ನಾಯಕ ಹೇಳಿದರು. ಕೆಎಸ್‌ಎನ್ ಜನಕಲ್ಯಾಣ ಸಮಿತಿ ವತಿಯಿಂದ ಅವರ 49ನೇ ಜನ್ಮದಿನದ ಅಂಗವಾಗಿ ಕವಿತಾಳ ಪಟ್ಟಣದಲ್ಲಿ ಆಯೋಜಿಸಿದ್ದ ಸಮಗ್ರ ನೀರಾವರಿ, ನವಲಿ ಜಲಾಶಯ ನಿರ್ಮಾಣ,…

  • ಬೈಕ್ ರ‍್ಯಾಲಿ ಮೂಲಕ ಎಸ್ ಐಆರ್ ಮತ ಪರಿಷ್ಕರಣೆ ಜಾಗೃತಿ ಜಾಥಾ

    ಬೈಕ್ ರ‍್ಯಾಲಿ ಮೂಲಕ ಎಸ್ ಐಆರ್ ಮತ ಪರಿಷ್ಕರಣೆ ಜಾಗೃತಿ ಜಾಥಾ

    ಸುದ್ದಿ ಬೆಳಕು ವಾರ್ತೆ ವಡಗೆರಾ: ತಾಲ್ಲೂಕಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭಗೊಂಡಿದ್ದು, ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಅಗತ್ಯ ಮಾಹಿತಿ ನೀಡುವ ಮೂಲಕ ಜನರು ಸಹಕರಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಹಿರೇಮಠ ಹೇಳಿದರು. ಪಟ್ಟಣದ ತಹಶಿಲ್ದಾರ ಕಚೇರಿಯಿಂದ ಹೋಸ ಬಸ್ ನಿಲ್ದಾಣ ವರೆಗೂ ಹಮ್ಮಿಕೊಂಡಿದ್ದ ಎಸ್‌ಐಆರ್ ವಿಶೇಷ ಜಾಥಾ ಹಾಗೂ ಜಾಗೃತಿ ಬೈಕ್ ರ‍್ಯಾಲಿಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು, ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದೇ ಎಸ್‌ಐಆರ್‌…

  • ಮಂತ್ರಿ ಆಗುವ ಆಸೆ ಬಿಟ್ಟು ಶಾಸಕರು ಹಳ್ಳಿಗಳಿಗೆ ಬರಲಿ: ಮಾಜಿ ಸಚಿವ ರಾಜೂಗೌಡ ಕಿಡಿ

    ಮಂತ್ರಿ ಆಗುವ ಆಸೆ ಬಿಟ್ಟು ಶಾಸಕರು ಹಳ್ಳಿಗಳಿಗೆ ಬರಲಿ: ಮಾಜಿ ಸಚಿವ ರಾಜೂಗೌಡ ಕಿಡಿ

    ಒಂದೇ ವಾರದಲ್ಲಿ ಚಟ್ಟಳ್ಳಿಯ ಇಬ್ಬರು ರೈತರ ಆತ್ಮಹತ್ಯೆ; ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಬರದ ನಡುವೆ ಸರ್ಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ ನಿಯೋಗ ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಳೆ ಇಲ್ಲದೇ ಜಿಲ್ಲೆಯ ರೈತರು ತೊಂದರೆಯಲ್ಲಿದ್ದು, ಸರ್ಕಾರ ಈ ಕೂಡಲೇ ಗಮನ ಹರಿಸಿ ಸೂಕ್ತ ಕ್ರಮ ಜರುಗಿಸಬೇಕು ಮತ್ತು ಜಿಲ್ಲೆಯ ಶಾಸಕರು ಮಂತ್ರಿ ಆಗುವ ಆಶೆ ಬಿಟ್ಟು ಹಳ್ಳಿಗಳಿಗೆ ಭೇಟಿ ನೀಡಿ ರೈತರ ಕಷ್ಟ ಕೇಳುವ ಮೂಲಕ ಇನ್ನಷ್ಟು ಆತ್ಮಹತ್ಯೆಗಳು ತಡೆಯಬೇಕೆಂದು ಮಾಜಿ ಸಚಿವ ರಾಜೂಗೌಡ ಆಗ್ರಹಿಸಿದರು.…

  • ವರುಣನ ಕೃಪೆಗೆ ರೈತರ ವಿಶೇಷ ಪ್ರಾರ್ಥನೆ: ಹೆಡಗಿಮದ್ರಿ ಮಠದಲ್ಲಿ ಸಪ್ತ ಭಜನೆ

    ವರುಣನ ಕೃಪೆಗೆ ರೈತರ ವಿಶೇಷ ಪ್ರಾರ್ಥನೆ: ಹೆಡಗಿಮದ್ರಿ ಮಠದಲ್ಲಿ ಸಪ್ತ ಭಜನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮುಂಗಾರು ಮಳೆ ಕೈಕೊಟ್ಟು ಬೆಳೆಗಳು ಒಣಗಿ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಉತ್ತಮ ಮಳೆಯಾಗಿ ಅನ್ನದಾತರ ಬದುಕು ಹಸನಾಗಲಿ ಎಂಬ ಸಂಕಲ್ಪದೊಂದಿಗೆ ಯಾದಗಿರಿ ಸಮೀಪದ ಹೆಡಗಿಮದ್ರಿ ಗ್ರಾಮದ ಶ್ರೀ ಶಾಂತ ಶಿವಯೋಗೇಶ್ವರ ಸಂಸ್ಥಾನ ಮಠದಲ್ಲಿ ಏಳು ದಿನಗಳ ಸಪ್ತ ಭಜನೆ ಹಾಗೂ ಶಿವನಾಮ ಸ್ಮರಣೆ ಆರಂಭವಾಗಿದೆ. ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಶಿವಯೋಗಿ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಹಾಗೂ ಗ್ರಾಮಸ್ಥರ ಉಪಸ್ಥಿತಿಯಲ್ಲಿ ಮಂಗಳವಾರದಿಂದ ರೈತರು…

  • ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಕೆಎಸ್‌ಎನ್ ಅಭಿಮಾನಿಗಳು

    ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಕೆಎಸ್‌ಎನ್ ಅಭಿಮಾನಿಗಳು

    ಸುದ್ದಿ ಬೆಳಕು ವಾರ್ತೆ ಅರಕೇರಾ : ಮಾಜಿ ಸಚಿವರು ಹಾಗೂ ಕಲ್ಯಾಣ ಕರ್ನಾಟಕದ ಹೆಮ್ಮೆಯ ನಾಯಕರಾದ ಶ್ರೀ ಕೆ. ಶಿವನಗೌಡ ನಾಯಕರವರ 49ನೇ ಹುಟ್ಟುಹಬ್ಬದ ಅಂಗವಾಗಿ ಕೆ.ಎಸ್.ಎನ್. ಜನ ಕಲ್ಯಾಣ ಸಮಿತಿ ವತಿಯಿಂದ ಜಾಗೀರ ಜಾಡಲದಿನ್ನಿ ಹಾಗೂ ನಾಗಡದಿನ್ನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಹಾಗೂ ಪೆನ್‌ಗಳನ್ನು ವಿತರಿಸಲಾಯಿತು. ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆಯೋಜಿಸಲಾದ ಈ ಸಮಾಜಮುಖಿ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು…

  • ನಿಗಧಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಿ : ಶಾಸಕ ತುನ್ನೂರ

    ನಿಗಧಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಿ : ಶಾಸಕ ತುನ್ನೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನನ್ನ ಮತಕ್ಷೇತ್ರದಲ್ಲಿ ಕೈಗೊಳ್ಳುವ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳು ಸರ್ಕಾರ ನಿಗಧಿಪಡಿಸಿದ ಅವಧಿಯೊಳಗೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗುಣಮಟ್ಟದಿಂದ ಕಾಮಗಾರಿ ಕೈಗೊಳ್ಳಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ನಗರಸಭೆ ಹಿಂಭಾಗದಲ್ಲಿ ಹಮ್ಮಿಕೊಂಡಿದ್ದ ೨೦೨೫-೨೬ನೇ ಸಾಲಿನ ಕೆಕೆಆರ್‌ಡಿಬಿ ಮೈಕ್ರೋ ಸಾಮಾನ್ಯ ಯೋಜನೆಯಡಿಯಲ್ಲಿ ಲೊಕೋಪಯೊಗಿ ಇಲಾಖೆಯಿಂದ ನಗರದ ನಗರಸಭೆ ಹಿಂದುಗಡೆಯಿAದ ಡಾನ್‌ಬಾಸ್ಕೋ ಶಾಲೆಯವರೆಗೆ ೧.೨೦ ಕೋಟಿ ರೂ. ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ನಾನು ಶಾಸಕನಾಗಿ ಆಯ್ಕೆಯಾಗಿ…

  • ಸಹಕಾರ ಸಂಘಗಳ ಅಭಿವೃದ್ಧಿಗೆ ತರಬೇತಿ ಅಗತ್ಯ: ಶಾಂತಗೌಡ ಮಾಲಿ ಪಾಟೀಲ್

    ಸಹಕಾರ ಸಂಘಗಳ ಅಭಿವೃದ್ಧಿಗೆ ತರಬೇತಿ ಅಗತ್ಯ: ಶಾಂತಗೌಡ ಮಾಲಿ ಪಾಟೀಲ್

    ಸುದ್ದಿ ಬೆಳಕು ವಾರ್ತೆ ಶಹಾಪುರ: ಸಹಕಾರ ಸಂಘಗಳಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಸಹಕಾರ ಸಂಘಗಳನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸುವ ಜೊತೆಗೆ ಇಂತಹ ತರಬೇತಿ ಪಡೆಯುವುದರಿಂದ ಸಹಕಾರ ಸಂಘಗಳನ್ನು ಬಲಪಡಿಸಲು ಸಾಧ್ಯವೆಂದು ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಮಹಾಮಂಡಳದ ನಿರ್ದೇಶಕರು ಹಾಗೂ ಸಂಘದ ನಿರ್ದೇಶಕರಾದ ಶಾಂತಗೌಡ ಮಾಲಿ ಪಾಟೀಲ್ ನಾಗನಟಗಿ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ, ಬೆಂಗಳೂರು ಹಾಗೂ ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ ನಿ, ಯಾದಗಿರಿ ಹಾಗೂ ಸಹಕಾರ ಇಲಾಖೆ ಯಾದಗಿರಿ ಹಾಗೂ ಪ್ರಾಥಮಿಕ ಕೃಷಿ…

Suddi Belaku