Tag: Surpur News

  • ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

    ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಜ್ಯದಲ್ಲಿ ದಲಿತರು ಹಾಗೂ ಬಡ ಜನರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಸಾಮಾಜಿಕ ಬಹಿಷ್ಕಾರ ಹಾಗೂ ಹಲ್ಲೆ ಪ್ರಕರಣಗಳನ್ನು ಖಂಡಿಸಿ, ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ. ನಂ. 47/74-75) ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆ ನಡೆಸಿದ ಮುಖಂಡರು, ರಾಜ್ಯದಲ್ಲಿ ದಲಿತ ಸಮುದಾಯದವರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಆತಂಕಕಾರಿ…

  • ಡೀಸೆಲ್ ಕೊರತೆ: ಸುರಪುರದಲ್ಲಿ ರಾತ್ರಿಯಿಡೀ ಸಾಲಿನಲ್ಲಿ ನಿಂತ ಜನರು

    ಡೀಸೆಲ್ ಕೊರತೆ: ಸುರಪುರದಲ್ಲಿ ರಾತ್ರಿಯಿಡೀ ಸಾಲಿನಲ್ಲಿ ನಿಂತ ಜನರು

    ಸುದ್ದಿ ಬೆಳಕು ವಾರ್ತೆ ಸುರಪುರ: ನಗರದಲ್ಲಿ ಡೀಸೆಲ್ ಕೊರತೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪೆಟ್ರೋಲ್ ಬಂಕ್‌ಗಳ ಮುಂದೆ ವಾಹನಗಳ ದೀರ್ಘ ಸಾಲು ಕಾಣಿಸಿಕೊಂಡು, ಪ್ರಮುಖ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಗರಸಭೆ ಸಮೀಪದ ಪೆಟ್ರೋಲ್ ಬಂಕ್ ಬಳಿ ಸೋಮವಾರ ತಡರಾತ್ರಿ ಕಂಡುಬಂತು. ಡೀಸೆಲ್ ಪಡೆಯಲು ಟ್ರ್ಯಾಕ್ಟರ್, ಲಾರಿ, ಬೈಕ್ ಸೇರಿದಂತೆ ನೂರಾರು ವಾಹನಗಳು ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಸಾಲುಗಟ್ಟಿ ನಿಂತಿದ್ದವು. ವಾಹನಗಳನ್ನು ರಸ್ತೆ ಮಧ್ಯೆಯೇ ಅಡ್ಡಲಾಗಿ ನಿಲ್ಲಿಸಿದ್ದರಿಂದ ಬಸ್ ನಿಲ್ದಾಣದಿಂದ ವಿವಿಧ ಕಡೆಗಳಿಗೆ ತೆರಳುವ ವಾಹನಗಳಿಗೆ ರಸ್ತೆ ಇಲ್ಲದಂತಾಯಿತು.…

  • ದೇವಪುರ ಬಳಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ – ಹಲವರಿಗೆ ಗಾಯ

    ದೇವಪುರ ಬಳಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ – ಹಲವರಿಗೆ ಗಾಯ

    ಸುದ್ದಿ ಬೆಳಕು ವಾರ್ತೆ ಸುರಪುರ : ಜಿಲ್ಲೆಯ ಸುರಪುರ ತಾಲೂಕಿನ ದೇವಪುರ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಹೆದ್ದಾರಿಯಿಂದ ಪಕ್ಕಕ್ಕೆ ಇಳಿದು ಅಪಘಾತಕ್ಕೀಡಾದ ಪರಿಣಾಮ ಹಲವರು ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ದಾವಣಗೆರೆಯಿಂದ ಕಲಬುರ್ಗಿ ಕಡೆಗೆ ತೆರಳುತ್ತಿದ್ದ ಕಲಬುರ್ಗಿ ಬಸ್ ಘಟಕ ಸಂಖ್ಯೆ–3ರ ಬಸ್‌ನ್ನು ಚಾಲಕ ವೇಗವಾಗಿ ಚಲಾಯಿಸುತ್ತಿದ್ದ ವೇಳೆ ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಇಳಿದಿದೆ ಎಂದು ತಿಳಿದು ಬಂದಿದೆ. ಬಸ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದು, ಕ್ಷಣಾರ್ಧದಲ್ಲಿ ಪ್ರಯಾಣಿಕರಲ್ಲಿ…

  • ಆರ್ಥಿಕ ಸ್ವಾವಲಂಬನೆಗೆ ಸಹಕಾರವೇ ಮೂಲ ಮಂತ್ರ : ಶರಣಯ್ಯ ಸ್ವಾಮಿ ನೀಲಗಿರಿಮಠ

    ಆರ್ಥಿಕ ಸ್ವಾವಲಂಬನೆಗೆ ಸಹಕಾರವೇ ಮೂಲ ಮಂತ್ರ : ಶರಣಯ್ಯ ಸ್ವಾಮಿ ನೀಲಗಿರಿಮಠ

    ಸುದ್ದಿ ಬೆಳಕು ವಾರ್ತೆ ​ಸುರಪುರ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ ನಿ., ಯಾದಗಿರಿ ಹಾಗೂ ಯಾದಗಿರಿ ಸಹಕಾರ ಇಲಾಖೆ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯ ಪತ್ತಿನ ಸಹಕಾರ ಸಂಘ ನಿ, ಸುರಪುರ ಇವರುಗಳ ಸಂಯುಕ್ತಾಶ್ರಯದಲ್ಲಿ ಆಡಳಿತ ಮಂಡಳಿ ನಿರ್ದೇಶಕರಿಗಾಗಿ ‘ಕ್ಲಸ್ಟರ್ ತರಬೇತಿ ಕಾರ್ಯಕ್ರಮ’ವನ್ನು ಆಯೋಜಿಸಲಾಗಿತ್ತು. ​ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಜಗದ್ಗುರು ರೇಣುಕಾಚಾರ್ಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಶ್ರೀ ಶರಣಯ್ಯ ಸ್ವಾಮಿ ನೀಲಗಿರಿಮಠ, “ಪತ್ತಿನ ಸಹಕಾರ…

  • ಶಾಂತಪೂರ ಕ್ರಾಸ್ ಬಳಿ ರಸ್ತೆ ತಡೆ ಹೋರಾಟ – ಹೆದ್ದಾರಿ ಕಾಮಗಾರಿ ಆರಂಭಕ್ಕೆ ಆಗ್ರಹ

    ಶಾಂತಪೂರ ಕ್ರಾಸ್ ಬಳಿ ರಸ್ತೆ ತಡೆ ಹೋರಾಟ – ಹೆದ್ದಾರಿ ಕಾಮಗಾರಿ ಆರಂಭಕ್ಕೆ ಆಗ್ರಹ

    ಸುದ್ದಿ ಬೆಳಕು ವಾರ್ತೆ ಸುರಪುರ ಏಪ್ರಿಲ್ 18 : ತಾಲೂಕಿನ ಶಾಂತಪೂರ ಕ್ರಾಸ್ ಹತ್ತಿರ ಇರುವ ರಾಷ್ಟ್ರೀಯ ಹೆದ್ದಾರಿ-150 ಅಗಲೀಕರಣ ಹಾಗೂ ರಸ್ತೆ ಕಾಮಗಾರಿ ತಕ್ಷಣ ಆರಂಭಿಸುವಂತೆ ಆಗ್ರಹಿಸಿ ಇಂದು ಭಾನುವಾರ ಬೆಳಗ್ಗೆ 9 ಗಂಟೆಯಿಂದ ರಸ್ತೆ ತಡೆ (ರಾಸ್ತಾ ರೋಖೋ) ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಂಥಣಿ, ಬಂಡೋಳಿ, ಶಾಂತಪೂರ, ಹುಣಸಿಹೊಳೆ, ಲಿಂಗದಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಶನಿವಾರ ತಹಸೀಲ್ದಾರ್ ಹಾಗೂ ಪೊಲೀಸ್ ಇನ್ಸಪೆಕ್ಟರ್ ಅವರಿಗೆ ಮನವಿ ಪತ್ರ ಸಲ್ಲಿಸಿದ ಮುಖಂಡರು,…

  • ಯಾದಗಿರಿ ಅಪಘಾತ: ಒಂದೇ ಕುಟುಂಬದ 7 ಮಂದಿ ಸಜೀವ ದಹನ

    ಯಾದಗಿರಿ ಅಪಘಾತ: ಒಂದೇ ಕುಟುಂಬದ 7 ಮಂದಿ ಸಜೀವ ದಹನ

      ಯಾದಗಿರಿ: ಜಿಲ್ಲೆಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನಗೊಂಡು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಸಿರವಾರ ಪಟ್ಟಣ ಪಂಚಾಯತ್ ಸದಸ್ಯ ಕೃಷ್ಣ ನಾಯಕ, ಅವರ ಮಗಳು, ಅಳಿಯ ಹಾಗೂ ಮೊಮ್ಮಕ್ಕಳು ಸೇರಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕುಟುಂಬವು ಸುರಪುರದಲ್ಲಿರುವ ಮನೆ ದೇವರ ದರ್ಶನ ಪಡೆದು ವಾಪಸ್ಸು ಸಿರವಾರ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ, ಶಾಂತಪುರ ಕ್ರಾಸ್ ಬಳಿ…

  • ಯಾದಗಿರಿ ಬಳಿ ಭೀಕರ ಅಪಘಾತ: ಕಾರು–ಬಸ್ ಡಿಕ್ಕಿ, 7 ಮಂದಿ ಸಜೀವ ದಹನ
    ,

    ಯಾದಗಿರಿ ಬಳಿ ಭೀಕರ ಅಪಘಾತ: ಕಾರು–ಬಸ್ ಡಿಕ್ಕಿ, 7 ಮಂದಿ ಸಜೀವ ದಹನ

    ಯಾದಗಿರಿ: ಜಿಲ್ಲೆಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್ ಬಳಿ ಕಾರು ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಪ್ರಯಾಣಿಕರು ಸಜೀವ ದಹನಗೊಂಡು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಬೆಂಗಳೂರುದಿಂದ ಕಲಬುರಗಿ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಸಾಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಯಿಂದ ಎರಡೂ ವಾಹನಗಳಿಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಸಜೀವ ದಹನಗೊಂಡು…

  • ಯಾದಗಿರಿ ಜಿಲ್ಲೆಯ ಬಿ. ಲಕ್ಷ್ಮಣರಿಗೆ “ಜಾನಪದ ಶ್ರೀ” ಪ್ರಶಸ್ತಿ – ಜನಪದ ಕಲೆ ಸೇವೆಗೆ ರಾಜ್ಯದ ಗೌರವ

    ಯಾದಗಿರಿ ಜಿಲ್ಲೆಯ ಬಿ. ಲಕ್ಷ್ಮಣರಿಗೆ “ಜಾನಪದ ಶ್ರೀ” ಪ್ರಶಸ್ತಿ – ಜನಪದ ಕಲೆ ಸೇವೆಗೆ ರಾಜ್ಯದ ಗೌರವ

    ಸುರಪುರ : ರಾಜ್ಯ ಸರ್ಕಾರವು 2025-26ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಪ್ರಶಸ್ತಿ, ಸಾಹಿತ್ಯ ಮತ್ತು ನಾಟಕ ಪ್ರಶಸ್ತಿ, ಕಲಾ ಪ್ರಶಸ್ತಿ ಹಾಗೂ ಸಂಗೀತ–ನೃತ್ಯ ವಿಭಾಗಗಳ ವಿವಿಧ ಪ್ರಶಸ್ತಿಗಳಿಗೆ ಸಾಧಕರನ್ನು ಆಯ್ಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪ್ರಶಸ್ತಿ ಪಟ್ಟಿಯಲ್ಲಿ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜನಪದ ಕಲಾವಿದರಾದ ಬಿ. ಲಕ್ಷ್ಮಣ ಅವರು “ಜಾನಪದ ಶ್ರೀ” ಪ್ರಶಸ್ತಿಗೆ ಆಯ್ಕೆಯಾಗಿರುವುದು ಜಿಲ್ಲೆಯ ಕಲಾಭಿಮಾನಿಗಳಿಗೆ ಹೆಮ್ಮೆಯ ಸಂಗತಿಯಾಗಿದೆ. “ದುಂದುಮೆಯ ದುಂದುಭಿ” ಎಂಬ ಜನಪದ ಗೀತೆಯ ಮೂಲಕ…

  • ಅಂಬೇಡ್ಕರ್ ಜಯಂತಿ ವಿವಾದ: ಶಾಸಕರು, ತಹಸೀಲ್ದಾರ್‌ರ ವಿರುದ್ಧದ ಆರೋಪ ಸತ್ಯಕ್ಕೆ ದೂರ – ರಮೇಶ ದೊರೆ ಆಲ್ದಾಳ

    ಅಂಬೇಡ್ಕರ್ ಜಯಂತಿ ವಿವಾದ: ಶಾಸಕರು, ತಹಸೀಲ್ದಾರ್‌ರ ವಿರುದ್ಧದ ಆರೋಪ ಸತ್ಯಕ್ಕೆ ದೂರ – ರಮೇಶ ದೊರೆ ಆಲ್ದಾಳ

    ಸುರಪುರ: ಸಂವಿಧಾನ ಶಿಲ್ಪಿ B R Ambedkar ಅವರ ಜಯಂತಿ ಆಚರಣೆ ವಿಚಾರದಲ್ಲಿ ತಾಲೂಕು ಆಡಳಿತ ಹಾಗೂ ಶಾಸಕರ ವಿರುದ್ಧ ಮಾಡಲಾಗುತ್ತಿರುವ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನವಾಗಿದೆ ಎಂದು ಸಾಮೂಹಿಕ ಸಂಘಟನೆಗಳ ಒಕ್ಕೂಟದ ಮುಖಂಡ ರಮೇಶ ದೊರೆ ಆಲ್ದಾಳ ಸ್ಪಷ್ಟಪಡಿಸಿದರು. ಸಭೆಯ ನಿರ್ಣಯದಂತೆ ಆಯ್ಕೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 10ರಂದು ತಹಸೀಲ್ದಾರರು ಸಭೆ ಕರೆದು ವಿಶೇಷ ಆಹ್ವಾನಿತರ ಹೆಸರನ್ನು ಸೂಚಿಸಲು ಕೇಳಿದ್ದರು. ಎಲ್ಲಾ ಸಂಘಟನೆಗಳ ಒಮ್ಮತದಿಂದ ಶಿಕ್ಷಣಪ್ರೇಮಿ ಮಾನಪ್ಪ ಕರಡಕಲ್ ಅವರನ್ನು…

  • ಅಂಬೇಡ್ಕರ್ ಜಯಂತಿ ಆಹ್ವಾನ ವಿವಾದ – ಮಾನಪ್ಪ ಕಟ್ಟಿಮನಿ ಕಡೆಗಣನೆಗೆ ದಲಿತ ಸಂಘಟನೆಗಳ ಆಕ್ರೋಶ

    ಅಂಬೇಡ್ಕರ್ ಜಯಂತಿ ಆಹ್ವಾನ ವಿವಾದ – ಮಾನಪ್ಪ ಕಟ್ಟಿಮನಿ ಕಡೆಗಣನೆಗೆ ದಲಿತ ಸಂಘಟನೆಗಳ ಆಕ್ರೋಶ

    ಸುರಪುರ: ತಾಲೂಕು ಆಡಳಿತದಿಂದ ಆಯೋಜಿಸಲಾಗುತ್ತಿರುವ ಡಾ. ಬಾಬಾಸಾಹೇಬ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಆಹ್ವಾನದಲ್ಲಿ ಸಮಾಜದ ಹಿರಿಯ ಮುಖಂಡ ಮಾನಪ್ಪ ಕಟ್ಟಿಮನಿ ಅವರ ಹೆಸರನ್ನು ಕೈಬಿಟ್ಟಿರುವುದಕ್ಕೆ ದಲಿತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ದಲಿತ ಪರ ಸಂಘಟನೆಗಳ ಮುಖಂಡ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ಪೂರ್ವಭಾವಿ ಸಭೆಯಲ್ಲಿ ಒಪ್ಪಿಗೆಯಾದ ನಿರ್ಣಯವನ್ನು ಲೆಕ್ಕಿಸದೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಪಿಸಿದರು. ಪೂರ್ವಭಾವಿ ಸಭೆ ನಿರ್ಣಯ ಉಲ್ಲಂಘನೆ ಅಂಬೇಡ್ಕರ್ ಜಯಂತಿ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ…

Suddi Belaku