Tag: Yadgir News

  • ಮೇ 26ರಂದು ಯಾದಗಿರಿಯಲ್ಲಿ ಬಿಜೆಪಿ ಉಗ್ರ ಪ್ರತಿಭಟನೆ

    ಮೇ 26ರಂದು ಯಾದಗಿರಿಯಲ್ಲಿ ಬಿಜೆಪಿ ಉಗ್ರ ಪ್ರತಿಭಟನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರ ಸೇರಿದಂತೆಯೇ ಇಡಿ ಯಾದಗಿರಿ ಸುಮಾರು 16 ಕ್ಕೂ ಹೆಚ್ಚು ಬೇಡಿಕೆಗಳಿಗೆ ಆಗ್ರಹಿಸಿ ಮೇ 26ರಂದು ನಗರದಲ್ಲಿ ಉಗ್ರ ಹೋರಾಟ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಬಿಜೆಪಿ ಕಾರ್ಯಕಾರಿ ಮಂಡಳಿ ಸದಸ್ಯ ಮಹೇಶರೆಡ್ಡಿ ಮುದ್ದಾಳ ಹೇಳಿದ್ದಾರೆ. ಇಲ್ಲಿನ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು. ಅಂದು ಬೆಳಗ್ಗೆ 9ಕ್ಕೆ ಮೈಲಾಪುರ ಅಗಸಿಯಿಂದ ನಗರಸಭೆಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಅಲ್ಲಿಯೇ ಧರಣಿ ಕುಳಿತುಕೊಳ್ಳಲಾಗುವುದು. ಜಿಲ್ಲಾಧಿಕಾರಿ ಮತ್ತು ಪೌರಾಯುಕ್ತರು ಸ್ಥಳಕ್ಕೇ…

  • ನಗರ ಹಾಗೂ ಗ್ರಾಮೀಣ ಭಾಗದ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ತುನ್ನೂರ

    ನಗರ ಹಾಗೂ ಗ್ರಾಮೀಣ ಭಾಗದ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ತುನ್ನೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾ ಕೇಂದ್ರವಾಗಿ ಯಾದಗಿರಿ ನಗರದ ೧೫ ವರ್ಷ ಕಳೆದಿದೆ, ನಗರ ವರ್ಷ-ವರ್ಷಕ್ಕೆ ವಿಸ್ತಾರವಾಗುತ್ತಿದೆ, ಇಲ್ಲಿನ ಜನರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು, ನಾನು ಶಾಸಕನಾಗಿ ಆಯ್ಕೆಯಾಗಿ ೩ ವರ್ಷಗಳಲ್ಲಿ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ಹೊಸಳ್ಳಿ ಕ್ರಾಸ್‌ನಲ್ಲಿ ಹಮ್ಮಿಕೊಂಡಿದ್ದ ಲೋಕೋಪಯೋಗಿ ಇಲಾಖೆಯಿಂದ ೭ ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಿರುವ ಕ್ರಾಸ್‌ನಿಂದ…

  • ದೇವಪುರ ಬಳಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ – ಹಲವರಿಗೆ ಗಾಯ

    ದೇವಪುರ ಬಳಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ – ಹಲವರಿಗೆ ಗಾಯ

    ಸುದ್ದಿ ಬೆಳಕು ವಾರ್ತೆ ಸುರಪುರ : ಜಿಲ್ಲೆಯ ಸುರಪುರ ತಾಲೂಕಿನ ದೇವಪುರ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಹೆದ್ದಾರಿಯಿಂದ ಪಕ್ಕಕ್ಕೆ ಇಳಿದು ಅಪಘಾತಕ್ಕೀಡಾದ ಪರಿಣಾಮ ಹಲವರು ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ದಾವಣಗೆರೆಯಿಂದ ಕಲಬುರ್ಗಿ ಕಡೆಗೆ ತೆರಳುತ್ತಿದ್ದ ಕಲಬುರ್ಗಿ ಬಸ್ ಘಟಕ ಸಂಖ್ಯೆ–3ರ ಬಸ್‌ನ್ನು ಚಾಲಕ ವೇಗವಾಗಿ ಚಲಾಯಿಸುತ್ತಿದ್ದ ವೇಳೆ ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಇಳಿದಿದೆ ಎಂದು ತಿಳಿದು ಬಂದಿದೆ. ಬಸ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದು, ಕ್ಷಣಾರ್ಧದಲ್ಲಿ ಪ್ರಯಾಣಿಕರಲ್ಲಿ…

  • ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ರಾಹುಲ್ ಪಾಂಡ್ವೆ ಅಧಿಕಾರ ಸ್ವೀಕಾರ

    ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ರಾಹುಲ್ ಪಾಂಡ್ವೆ ಅಧಿಕಾರ ಸ್ವೀಕಾರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರಾಹುಲ್ ಪಾಂಡ್ವೆ ತುಕಾರಾಮ್ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದು,ನಿರ್ಗಮಿತ ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಅವರು ಅಧಿಕಾರ ಹಸ್ತಾಂತರಿಸಿದರು. 2016 ನೇ ವೃಂದದ ಐಎಎಸ್ ಅಧಿಕಾರಿಗಳಾದ ಶ್ರೀ ರಾಹುಲ್ ಪಾಂಡ್ವೆ ಅವರು ಕಲ್ಬುರ್ಗಿ ವಿಭಾಗದ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆದೇಶದನ್ವಯ ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ಇಂದು ಅವರು ಅಧಿಕಾರ…

  • ಅಂಗ್ಲ ಬ್ಯಾನರ್ ತೆರವಿಗೆ ಕ್ರಮ ಕೈಗೊಳ್ಳದಿದ್ದರೆ ಕರವೇಯಿಂದ ಹೋರಾಟ: ಹತ್ತಿಮನಿ ಎಚ್ಚರಿಕೆ

    ಅಂಗ್ಲ ಬ್ಯಾನರ್ ತೆರವಿಗೆ ಕ್ರಮ ಕೈಗೊಳ್ಳದಿದ್ದರೆ ಕರವೇಯಿಂದ ಹೋರಾಟ: ಹತ್ತಿಮನಿ ಎಚ್ಚರಿಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರಸಭೆಯ ಬಾಡಿಗೆ ಜಾಹೀರಾತು ಹೋರ್ಡಿಂಗ್‌ಗಳ ಬಾಡಿಗೆ ಪಡೆದು ಆಂಗ್ಲ ಭಾಷೆಯ ಜಾಹೀರಾತು ಪ್ರಕಟಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ನಗರಾಧ್ಯಕ್ಷ ಅಂಬ್ರೇಷ್ ಹತ್ತಿಮನಿ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರ್ಕಾರ 2023 ರಲ್ಲಿಯೇ ನಿಯಮಾವಳಿ ರೂಪಿಸಿ ಯಾವುದೇ ಫಲಕ ಜಾಹೀರಾತು, ಅಂಗಡಿ ಮುಂಗಟ್ಟುಗಳಲ್ಲಿನ ನಾಮಫಲಕಗಳು 60:40 ಅನುಪಾತದಲ್ಲಿ ಕನ್ನಡ : ಆಂಗ್ಲ ಇಲ್ಲವೇ ಇತರ ಭಾಷೆಗಳಲ್ಲಿ ಇರಬೇಕೆಂಬ ಆದೇಶವೇ ಹೊರಡಿಸಿದೆ. ಆದರೆ…

  • ಯಾದಗಿರಿ ಜಿಲ್ಲಾಧಿಕಾರಿ ವರ್ಗಾವಣೆ – ಪಾಂಡ್ವೆ ರಾಹುಲ್ ತುಕಾರಾಂ ನೇಮಕ

    ಯಾದಗಿರಿ ಜಿಲ್ಲಾಧಿಕಾರಿ ವರ್ಗಾವಣೆ – ಪಾಂಡ್ವೆ ರಾಹುಲ್ ತುಕಾರಾಂ ನೇಮಕ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಜ್ಯ ಸರ್ಕಾರವು ಯಾದಗಿರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದ ಪಾಂಡ್ವೆ ರಾಹುಲ್ ತುಕಾರಾಂ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಆದೇಶ ಪ್ರಕಟವಾಗಿದ್ದು, ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ಬೆಂಗಳೂರಿನ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಇ-ಆಡಳಿತ ವಿಭಾಗದ ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವೀಸಸ್…

  • ಬೇಸಿಗೆಯ ಕಡುಬಿಸಿಲಿನಲ್ಲಿ ನಿರಂತರ ವಿದ್ಯುತ್ ಕಡಿತ – ಸಾರ್ವಜನಿಕರ ಆಕ್ರೋಶ : ಶ್ರೀಧರ ಸಾಹುಕಾರ

    ಬೇಸಿಗೆಯ ಕಡುಬಿಸಿಲಿನಲ್ಲಿ ನಿರಂತರ ವಿದ್ಯುತ್ ಕಡಿತ – ಸಾರ್ವಜನಿಕರ ಆಕ್ರೋಶ : ಶ್ರೀಧರ ಸಾಹುಕಾರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪ್ರಸ್ತುತ ದಿನಗಳಲ್ಲಿ ಯಾದಗಿರಿ ಮತಕ್ಷೇತ್ರದಲ್ಲಿ “ಪದೇ ಪದೇ ಕರೆಂಟ್ ಕಟ್‌ಗೆ, ಜನ ಬೇಸತ್ತಿದ್ದಾರೆ” ಯಾದಗಿರಿ ಜಿಲ್ಲೆಯಲ್ಲಿ 42% ಬಿಸಿಲಿನ ಸೆಕೆಯಿಂದ ಜನ ಹೈರಾಣಾಗಿದ್ದರೆ, ಮತ್ತೊಂದೆಡೆ ದಿನದಲ್ಲಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಹತ್ತಾರು ಬಾರಿ ಯಾವುದೇ ಮುನ್ಸೂಚನೆ ಇಲ್ಲದೆ ವಿದ್ಯುತ್ ಕಡಿತಗೊಳಿಸುತ್ತಿರುವುದು ಯಾದಗಿರಿ ಮತಕ್ಷೇತ್ರದ ಸಾರ್ವಜನಿಕರ ತೀವ್ರ ಕೆರಳಿಕೆಗೆ ಕಾರಣವಾಗಿದೆ. ತಿಂಗಳ ಕೊನೆಗೆ ಕರೆಂಟ್ ಬಿಲ್ ಮಾತ್ರ ಸರಿಯಾದ ಸಮಯಕ್ಕೆ ಬರುತ್ತದೆ, ಆದರೆ ಬಳಸಲು ಕರೆಂಟ್ ಮಾತ್ರ ಇರುವುದಿಲ್ಲ. ಎಂದು ಬಿಜೆಪಿ…

  • ಭೂಮಾಪಕರ ಮುಷ್ಕರದಿಂದ ರೈತರಿಗೆ ತೊಂದರೆ – ಸಮಸ್ಯೆ ಇತ್ಯರ್ಥಕ್ಕೆ ಕರವೇ ಆಗ್ರಹ

    ಭೂಮಾಪಕರ ಮುಷ್ಕರದಿಂದ ರೈತರಿಗೆ ತೊಂದರೆ – ಸಮಸ್ಯೆ ಇತ್ಯರ್ಥಕ್ಕೆ ಕರವೇ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮುಂಗಾರು ಆರಂಭವಾಗುವ ಮೊದಲೇ ರೈತರಿಗೆ ಅನುಕೂಲಕರವಾಗುವ ನಿಟ್ಟಿನಲ್ಲಿ ಕೃಷಿ ಇಲಾಖೆ ಮುಂಚಿತವಾಗಿಯೇ ಕಾರ್ಯೋನ್ಮುಖವಾಗಿ ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿಎನ್ ಭೀಮುನಾಯಕ ಆಗ್ರಹಿಸಿದರು. ನಗರದ ಕರವೇ ಜಿಲ್ಲಾ ಕಾರ್ಯಾಲಯದಲ್ಲಿ ಜರುಗಿದ ಜಿಲ್ಲಾ ಘಟಕದ ಪದಾಧಿಕಾರಿಗಳು ಆರು ತಾಲ್ಲೂಕುಗಳ ಅಧ್ಯಕ್ಷರುಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕರವೇ ಸಂಘಟನೆಯ ಜೊತೆಗೆ ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆಗಳು ಮುಂಗಾರು ಆರಂಭವಾಗುವ ಮೊದಲೇ ಅಗತ್ಯ ಬೀಜ, ರಸಗೊಬ್ಬರ ಸೇರಿದಂತೆ…

  • ಪತ್ರಕರ್ತರ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಲಿ: ಶಾಸಕ ತುನ್ನೂರು

    ಪತ್ರಕರ್ತರ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಲಿ: ಶಾಸಕ ತುನ್ನೂರು

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪತ್ರಕರ್ತರ ಮಕ್ಕಳು ಪ್ರತಿಭೆ ಮೂಲಕ ಸಮಾಜದಲ್ಲಿ ಮುಖ್ಯಾವಾಹಿನಿಗೆ ಬರಬೇಕು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಸಾಧಕ ಪತ್ರಕರ್ತರ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಸಮಾಜ ಸುಧಾರಣೆಯಲ್ಲಿ ಮಾಧ್ಯಮಗಳ ಪಾತ್ರ ಬಹಳಷ್ಟು ದೊಡ್ಡದು ಇದೆ.‌ ತಮ್ಮ ಮಕ್ಕಳಿಗೆ ಹೆಚ್ಚಿನ ಶಿಕ್ಷಣ ಕಲ್ಪಿಸುವ ಜವಾಬ್ದಾರಿ ಬಹು ದೊಡ್ಡದು ಇದೆ ಎಂದರು. ಪತ್ರಕರ್ತರು…

  • ವಕೀಲರಿಗೆ ಪ್ರೋತ್ಸಾಹ ಧನ ಯೋಜನೆ – ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

    ಸುದ್ದಿ ಬೆಳಕು ವಾರ್ತೆ ಯಾದಗಿರಿ :  2026-27ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆದಿಂದ ವಕೀಲರಿಗೆ ಪ್ರೋತ್ಸಾಹ ಧನ ಯೋಜನೆಯಡಿ ಅರ್ಹ ಕಾನೂನು ಪದವೀಧರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸದಾಶಿವ ಎಂ.ನಾರಾಯಣಕರ್ ಅವರು ತಿಳಿಸಿದ್ದಾರೆ. ಯಾದಗಿರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಕೀಲರಿಗೆ ಪ್ರೋತ್ಸಾಹ ಧನ ಯೋಜನೆಯಡಿ ಅರ್ಹ ಕಾನೂನು ಪದವೀಧರ ಅಭ್ಯರ್ಥಿಗಳಿಂದ ಈ ನಿಬಂಧನೆಗೊಳಪಟ್ಟು ಹಿಂದುಳಿದ ವರ್ಗಗಳ ಪ್ರವರ್ಗ-1 ರಲ್ಲಿ ಬರುವ ಸಮುದಾಯದ ಅಭ್ಯರ್ಥಿಯ ಕುಟುಂಬದ ವಾರ್ಷಿಕ…

Suddi Belaku