Tag: Yadgir News

  • ಸಮಾಜದ ಏಳಿಗೆಗಾಗಿ ಎಲ್ಲರೂ ಒಟ್ಟಾಗಿ ಶ್ರಮಿಸೋಣ: ರಾಚಣ್ಣಗೌಡ ಮುದ್ನಾಳ

    ಸಮಾಜದ ಏಳಿಗೆಗಾಗಿ ಎಲ್ಲರೂ ಒಟ್ಟಾಗಿ ಶ್ರಮಿಸೋಣ: ರಾಚಣ್ಣಗೌಡ ಮುದ್ನಾಳ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಒಗ್ಗಟ್ಟಿನಲ್ಲಿ ಬಲವಿದೆ. ಸಮಾಜದ ವಿಷಯ ಬಂದಾಗ ಎಲ್ಲರೂ ರಾಜಕೀಯ, ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು ಎಲ್ಲರೂ ಒಂದಾಗಿ ಶ್ರಮಿಸೋಣ ಎಂದು ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡ ಹಾಗೂ ಉದ್ಯಮಿ ರಾಚಣ್ಣಗೌಡ ಮುದ್ನಾಳ ಹೇಳಿದರು. ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ, ಜಿಲ್ಲಾ ಯುವ ಘಟಕ, ತಾಲೂಕು ಘಟಕ, ತಾಲೂಕು ಯುವ ಘಟಕ ಹಾಗೂ ವೀರಶೈವ ಸಮಾಜದ ಸಂಯುಕ್ತಾಶ್ರಯದಲ್ಲಿ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ನೂತನ ಪದಾಧಿಕಾರಿಗಳ ಅಭಿನಂದನಾ…

  • ಮೇ 10ರಂದು ಯಾದಗಿರಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

    ಮೇ 10ರಂದು ಯಾದಗಿರಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಹಾಸಾಧ್ವಿ ಶಿವಶರಣೆ ಶ್ರೀ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಇದೇ ಮೇ 10 ಭಾನುವಾರ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ರೆಡ್ಡಿ ಸಮಾಜ ಅಧ್ಯಕ್ಷ ರಾಮರೆಡ್ಡಿಗೌಡ ತಂಗಡಗಿ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂದು ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಈ ಜಯಂತಿ ಆಯೋಜಿಸಿ, ಹೇಮರೆಡ್ಡಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಲಾಗುವುದು ಅದಕ್ಕೂ ಪೂರ್ವದಲ್ಲಿ ಬೆಳಿಗ್ಗೆ ಬಸವೇಶ್ವರ…

  • ಸಾರ್ವಜನಿಕರಿಗೆ ಸರಿಯಾಗಿ ಗ್ಯಾಸ್ ಸಿಲಿಂಡರ್ ವಿತರಿಸಿ: ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಸೂಚನೆ

    ಸಾರ್ವಜನಿಕರಿಗೆ ಸರಿಯಾಗಿ ಗ್ಯಾಸ್ ಸಿಲಿಂಡರ್ ವಿತರಿಸಿ: ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಸೂಚನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಾರ್ವಜನಿಕರಿಗೆ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳನ್ನು ಸಮರ್ಪಕವಾಗಿ ಹಾಗೂ ನಿಗದಿತ ದರದಲ್ಲಿ ವಿತರಣೆ ಮಾಡುವಂತೆ ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಗ್ಯಾಸ್ ಏಜೆನ್ಸಿದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗ್ಯಾಸ್ ಏಜೆನ್ಸಿದಾರರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಗ್ಯಾಸ್ ಸಿಲಿಂಡರ್‌ಗಳನ್ನು ಅನಧಿಕೃತವಾಗಿ ಮಾರಾಟ ಮಾಡುವುದು, ಹೆಚ್ಚುವರಿ ದರ ವಸೂಲಿ ಮಾಡುವುದು ಅಥವಾ ಕೃತಕ ಅಭಾವ ಸೃಷ್ಟಿಸುವುದು ಕಂಡುಬಂದರೆ ಅಗತ್ಯ ವಸ್ತುಗಳ ಕಾಯ್ದೆ-1955 ಹಾಗೂ ಪೆಟ್ರೋಲಿಯಂ ವಸ್ತುಗಳ ಸಂಗ್ರಹ ಮತ್ತು…

  • ಯಾದಗಿರಿ ನಗರದಲ್ಲಿ ಎರಡು ದಿನ ನೀರು ಸರಬರಾಜು ಸ್ಥಗಿತ: ಸಹಕರಿಸಲು ಮನವಿ

    ಯಾದಗಿರಿ ನಗರದಲ್ಲಿ ಎರಡು ದಿನ ನೀರು ಸರಬರಾಜು ಸ್ಥಗಿತ: ಸಹಕರಿಸಲು ಮನವಿ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ : ನಗರದ ನೀರು ಶುದ್ಧೀಕರಣ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಮೇ 6 ಮತ್ತು 7ರಂದು ನಗರಾದ್ಯಂತ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪೌರಾಯುಕ್ತರಾದ ಉಮೇಶ ಚವ್ಹಾಣ ತಿಳಿಸಿದ್ದಾರೆ. ನೀರು ಶುದ್ಧೀಕರಣ ಘಟಕದಲ್ಲಿರುವ ಮೋಟಾರ್‌ನ ‘ಫುಟ್‌ಬಾಲ್’ (Foot valve) ದುರಸ್ತಿಯಲ್ಲಿದ್ದು, ಅದನ್ನು ಸರಿಪಡಿಸುವುದು ಅತ್ಯಗತ್ಯವಾಗಿದೆ. ಈ ತುರ್ತು ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ದಿನಾಂಕ 06-05-2026 (ಬುಧವಾರ), ​ದಿನಾಂಕ: 07-05-2026 (ಗುರುವಾರ) ದುರಸ್ತಿ ಕಾರ್ಯದ ಅವಧಿಯಲ್ಲಿ ನೀರಿನ ಲಭ್ಯತೆ…

  • 📰 ಯಾದಗಿರಿ ಜಿಲ್ಲೆಯಲ್ಲಿ ಬಿಸಿಗಾಳಿ ಎಚ್ಚರಿಕೆ: ಮೇ 3ರಿಂದ 5ರವರೆಗೆ ಯೆಲ್ಲೋ ಅಲರ್ಟ್
    ,

    📰 ಯಾದಗಿರಿ ಜಿಲ್ಲೆಯಲ್ಲಿ ಬಿಸಿಗಾಳಿ ಎಚ್ಚರಿಕೆ: ಮೇ 3ರಿಂದ 5ರವರೆಗೆ ಯೆಲ್ಲೋ ಅಲರ್ಟ್

    ಯಾದಗಿರಿ, ಮೇ 3:ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಯಾದಗಿರಿ ಜಿಲ್ಲೆಯಲ್ಲಿ ಮೇ 3ರಿಂದ 5ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಅವರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಬಿಸಿಗಾಳಿಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಮನವಿ ಮಾಡಿದ್ದಾರೆ. ⚠️ ಮಧ್ಯಾಹ್ನ ಬಿಸಿಲಿನಿಂದ ದೂರವಿರಿ ಮಧ್ಯಾಹ್ನ 12ರಿಂದ ಸಂಜೆ 4ರವರೆಗೆ ತೀವ್ರ ಬಿಸಿಲು ಇರುವುದರಿಂದ ಈ ಸಮಯದಲ್ಲಿ…

  • ಗ್ರಾಮ ಪಂಚಾಯತಿಯ ಗ್ರಂಥಾಲಯಗಳಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರಕ್ಕೆ ಆಹ್ವಾನ

    ಗ್ರಾಮ ಪಂಚಾಯತಿಯ ಗ್ರಂಥಾಲಯಗಳಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರಕ್ಕೆ ಆಹ್ವಾನ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಗ್ರಾಮೀಣ ಭಾಗದ ಎಲ್ಲಾ ಗ್ರಾಮ ಪಂಚಾಯತಿಯ ಗ್ರಂಥಾಲಯಗಳಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಮೇ 1 ರಿಂದ 15ರ ವರೆಗೆ ಆಯೋಜಿಸಲಾಗಿದೆ ಎಂದು ಎಂದು ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಲವೀಶ್ ಒರಡಿಯಾ ಅವರು ತಿಳಿಸಿದ್ದಾರೆ. ಶಿಬಿರವನ್ನು ವ್ಯವಸ್ಥಿತವಾಗಿ 2026ರ ಮೇ 1 ರಿಂದ ರಿಂದ 15ರ ವರೆಗೆ ಜರುಗುವಂತೆ ಕ್ರಮವಹಿಸಲು ಹಾಗೂ ಶಿಬಿರ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಮೇಲ್ವಿಚಾರಣೆ ಕೈಗೊಳ್ಳಲು ಈ ಕಛೇರಿಯಿಂದ ಈಗಾಗಲೇ ಎಲ್ಲಾ…

  • ಕನ್ನಡ ಪ್ರೀತಿಗೆ ಹೊಸ ರೂಪ: ಮದುವೆ ಕಾರ್ಡ್‌ನಲ್ಲಿ ಕರ್ನಾಟಕ ನಕ್ಷೆ

    ಕನ್ನಡ ಪ್ರೀತಿಗೆ ಹೊಸ ರೂಪ: ಮದುವೆ ಕಾರ್ಡ್‌ನಲ್ಲಿ ಕರ್ನಾಟಕ ನಕ್ಷೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯ ಯರಗೋಳ ಗ್ರಾಮದಲ್ಲಿ ಕನ್ನಡಾಭಿಮಾನವನ್ನು ವಿಶಿಷ್ಟವಾಗಿ ಅಭಿವ್ಯಕ್ತಿಸಿದ ಘಟನೆ ಎಲ್ಲರ ಗಮನ ಸೆಳೆದಿದೆ. ಮಾನೇಗಾರ ಕುಟುಂಬವು ತಮ್ಮ ಮನೆಯ ವಿವಾಹ ಆಮಂತ್ರಣ ಪತ್ರಿಕೆಯನ್ನು ಕರ್ನಾಟಕ ನಕ್ಷೆ ವಿನ್ಯಾಸದಲ್ಲಿ ಮುದ್ರಿಸಿ, ನಾಡು-ನುಡಿಯ ಮೇಲಿನ ತಮ್ಮ ಪ್ರೀತಿಯನ್ನು ಸೊಗಸಾಗಿ ಪ್ರದರ್ಶಿಸಿದೆ. ಗ್ರಾಮದ ಕಾಶಮ್ಮ–ಬಸವರಾಜ ಮಾನೇಗಾರ ದಂಪತಿಯ ತೃತೀಯ ಪುತ್ರ ರಮೇಶ್ ಅವರ ವಿವಾಹವು, ಅನ್ನಮ್ಮ–ವಜ್ರಕಾಂತ ಬೆಳಗುಂದಿ ದಂಪತಿಯ ಪುತ್ರಿ ಸುಧಾ ಅವರೊಂದಿಗೆ ನಿಶ್ಚಯಗೊಂಡಿದೆ. ಮೇ ೪ರಂದು ಯರಗೋಳ ಗ್ರಾಮದಲ್ಲೇ ಈ ವಿವಾಹ ಸಮಾರಂಭ…

  • ಯುವ ಶಕ್ತಿ ದೇಶದ ಪ್ರಗತಿಗೆ ಆಧಾರ : ಶರಣಪ್ಪ ಮಾನೇಗಾರ್

    ಯುವ ಶಕ್ತಿ ದೇಶದ ಪ್ರಗತಿಗೆ ಆಧಾರ : ಶರಣಪ್ಪ ಮಾನೇಗಾರ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಮ್ಮ ರಾಜ್ಯ, ರಾಷ್ಟ್ರದ ಪ್ರಗತಿಗೆ ಯುವ ಶಕ್ತಿಯ ಕೊಡುಗೆ ಅತ್ಯವಶ್ಯವಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡರಾದ ಶರಣಪ್ಪ ಮಾನೇಗಾರ ಅವರು ತಿಳಿಸಿದರು. ಯಾದಗಿರಿ ತಾಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಿಲ್ಲನಕೇರಾ ಪ್ರಿಮಿಯರ್ ಲೀಗ್ ಸೀಸನ್ ನಾಲ್ಕರ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಯುವಕರು ಈ ರಾಷ್ಟ್ರದ ಸಂಪತ್ತು ಅವರನ್ನು ಬೆನ್ನು ತಟ್ಟಿ ಬೆಂಬಲಿಸಿ ಪ್ರೋತ್ಸಾಹಿಸುವುದು ನಮ್ಮ ಆದ್ಯ ಕರ್ತವ್ಯ ಈ ನಿಟ್ಟಿನಲ್ಲಿ…

  • ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ ಜನರಿಗೆ ತಲುಪಿಸಲು ಎನ್‌ಜಿಒಗಳಿಗೆ ಕರೆ

    ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ ಜನರಿಗೆ ತಲುಪಿಸಲು ಎನ್‌ಜಿಒಗಳಿಗೆ ಕರೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕೇಂದ್ರ ಸರ್ಕಾರದ ಸೂರ್ಯ ಘರ್ ಮುಪ್ತ್ ಬೀಜಿಲಿ ಯೋಜನೆಯು ಭಾರತದ ಪ್ರತಿಯೊಂದು ಹಳ್ಳಿ-ಹಳ್ಳಿಗೂ ಪ್ರತಿ ಮನೆ-ಮನೆಗೂ ತಲುಪಿಸುವ ಜವಾಬ್ದಾರಿ ಸ್ವಯಂ ಸೇವಾ ಸಂಸ್ಥೆಗಳಿಂದ ಸಾಧ್ಯವೆಂದು ಪೆವಾರ್ಡ್ ಕೆ ಜಿಲ್ಲಾಧ್ಯಕ್ಷ ಚಂದಪ್ಪ ಯಾದವ್ ತಿಳಿಸಿದರು. ಕರ್ನಾಟಕ ನಗರ ಮತ್ತು ಗ್ರಾಮಾಬ್ಯುದಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ ಹಾಗೂ ಪೆವರ್ಡ್ ಕೆ ಯಾದಗಿರಿ ಜಿಲ್ಲೆವತಿಯಿಂದ ಆಯೋಜಿಸಿದ ಜಿಲ್ಲಾ ಒಕ್ಕೂಟದ ಸಭೆಯು ಶ್ರೀಮತಿ ಸಿದ್ದಲಿಂಗಮ್ಮ ಮಣ್ಣೂರ್ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜರುಗಿತು. ಈ…

  • ಕುಡಿಯುವ ನೀರಿಗೆ ಹಾಹಾಕಾರ – ಬೀದಿಗಿಳಿದು ಹೋರಾಟಕ್ಕೆ ಮುದ್ನಾಳ ಎಚ್ಚರಿಕೆ

    ಕುಡಿಯುವ ನೀರಿಗೆ ಹಾಹಾಕಾರ – ಬೀದಿಗಿಳಿದು ಹೋರಾಟಕ್ಕೆ ಮುದ್ನಾಳ ಎಚ್ಚರಿಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರ ಸೇರಿದಂತೆಯೇ ಯಾದಗಿರಿ ವಿಧಾನಸಭಾ ಮತಕ್ಷೇತ್ರದಲ್ಲಿ ಪ್ರತಿ ಹಳ್ಳಿಗಳಲ್ಲೂ ಕುಡಿಯುವ ನೀರಿನ ಭೀಕರ ಸಮಸ್ಯೆ ಎದುರಾಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿರುವ ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯ ಮಹೇಶರೆಡ್ಡಿ ಮುದ್ನಾಳ ಅವರು, ತಕ್ಷಣವೇ ಇದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸದಿದ್ದರೇ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ ಈ ಕುರಿತು ಹೇಳಿಕೆ ನೀಡಿರುವ ಅವರು, ಬೇಸಿಗೆ ಆರಂಭವಾಗಿ ಮೂರು ತಿಂಗಳೂ ಗತಿಸಿದರೂ ಜನರಿಗೆ ಮತ್ತು ಜಾನುವಾರುಗಳಿಗೆ ಶುದ್ದ ಕುಡಿಯುವ…

Suddi Belaku