Tag: Yadgir News

  • ಸಾರ್ವಜನಿಕ ಶಿಕ್ಷಣ ಉಳಿಸಿ; ಕಾರ್ಪೊರೇಟ್ ಹಸ್ತಾಂತರ ಕೈಬಿಡಿ: ಎಐಡಿಎಸ್ಓ ಆಗ್ರಹ

    ಸಾರ್ವಜನಿಕ ಶಿಕ್ಷಣ ಉಳಿಸಿ; ಕಾರ್ಪೊರೇಟ್ ಹಸ್ತಾಂತರ ಕೈಬಿಡಿ: ಎಐಡಿಎಸ್ಓ ಆಗ್ರಹ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಜ್ಯದ ಸರ್ಕಾರಿ ಶಾಲೆಗಳನ್ನು ಕಾರ್ಪೊರೇಟ್ ಕಂಪನಿಗಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ದತ್ತು ಪಡೆಯುವಂತೆ ರಾಜ್ಯ ಸರ್ಕಾರ ಮುಂದಾಗಿರುವ ಕ್ರಮವನ್ನು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಓ) ಯಾದಗಿರಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾ ಸಮಿತಿಯು, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ಬದಲು ಸರ್ಕಾರಿ ಶಾಲೆಗಳನ್ನು ಖಾಸಗಿ ಮತ್ತು ಕಾರ್ಪೊರೇಟ್ ಸಂಸ್ಥೆಗಳಿಗೆ ವಹಿಸುವುದು ಶಿಕ್ಷಣದ ಮೂಲ ಆಶಯಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದೆ.…

  • ರೈತರ ಅಭಿವೃದ್ಧಿಗೆ ಸದಾ ಸಿದ್ಧ: ಶಾಂತರಡ್ಡಿ ಚೌದ್ರಿ

    ರೈತರ ಅಭಿವೃದ್ಧಿಗೆ ಸದಾ ಸಿದ್ಧ: ಶಾಂತರಡ್ಡಿ ಚೌದ್ರಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೆಂಗಳೂರು, ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ, ಸಹಕಾರ ಇಲಾಖೆ ಯಾದಗಿರಿ ಹಾಗೂ ನೀರು ಬಳಕೆದಾರರ ಸಹಕಾರ ಸಂಘ ನಿ., ಮುದನೂರು (ಬಿ) ಇವರ ಸಂಯುಕ್ತ ಆಶ್ರಯದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಕ್ಲಸ್ಟರ್ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಶಾಂತರಡ್ಡಿ ಚೌದ್ರಿ (ಮುದನೂರು ಬಿ), ರಾಜ್ಯದಲ್ಲಿ ಸಹಕಾರ ಕ್ಷೇತ್ರವು ರೈತರ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಆಧಾರವಾಗಿದ್ದು,…

  • ಸೇವಾ ಕಾರ್ಯದಿಂದಲೇ ಹಿರಿಯರಿಗೆ ನಿಜವಾದ ಗೌರವ: ಹೆಡಗಿಮದ್ರಾ ಶ್ರೀ

    ಸೇವಾ ಕಾರ್ಯದಿಂದಲೇ ಹಿರಿಯರಿಗೆ ನಿಜವಾದ ಗೌರವ: ಹೆಡಗಿಮದ್ರಾ ಶ್ರೀ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಹಿರಿಯರ ಭಾವಚಿತ್ರಕ್ಕೆ ಪುಷ್ಪಮಾಲೆ ಹಾಕಿ, ನೈವೇದ್ಯ ಸಮರ್ಪಿಸುವುದಕ್ಕಿಂತ ಸಮಾಜಕ್ಕೆ ಉಪಯೋಗವಾಗುವ ಸೇವಾ ಕಾರ್ಯಗಳ ಮೂಲಕ ಅವರನ್ನು ಸ್ಮರಿಸುವುದೇ ಅರ್ಥಪೂರ್ಣ ಎಂದು ಹೆಡಗಿಮದ್ರಾ ಶಾಂತಶಿವಯೋಗಿ ಮಠದ ಪೀಠಾಧಿಪತಿಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಯಾದಗಿರಿ ನಗರದ ಶ್ರೀ ರಾಚನಗೌಡ ಮುದ್ನಾಳ ಅವರ ಮನೆಯ ಮುಂಭಾಗದಲ್ಲಿ ಶುಕ್ರವಾರ ಆಯೋಜಿಸಿದ್ದ ಲಿಂಗೈಕ್ಯರ ಪುಣ್ಯಸ್ಮರಣೋತ್ಸವ ಹಾಗೂ ಉಚಿತ ನೇತ್ರ ತಪಾಸಣೆ, ಚಿಕಿತ್ಸೆ ಮತ್ತು ಕನ್ನಡಕ ವಿತರಣಾ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ…

  • ಶಹಾಪುರ ಸಾಗರ ಕೊಲೆ ಪ್ರಕರಣ: 20 ಆರೋಪಿಗಳಿಗೆ 12 ವರ್ಷ ಕಠಿಣ ಜೈಲು ಶಿಕ್ಷೆ

    ಶಹಾಪುರ ಸಾಗರ ಕೊಲೆ ಪ್ರಕರಣ: 20 ಆರೋಪಿಗಳಿಗೆ 12 ವರ್ಷ ಕಠಿಣ ಜೈಲು ಶಿಕ್ಷೆ

    ​2014ರಲ್ಲಿ ನಡೆದಿದ್ದ ಬಸವೇಶ್ವರ ಜಾತ್ರೆಯ ಜಗಳ; 12 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ನ್ಯಾಯಾಲಯದ ಮಹತ್ವದ ತೀರ್ಪು; ನೊಂದ ಕುಟುಂಬಕ್ಕೆ ಪರಿಹಾರ. ಸುದ್ದಿ ಬೆಳಕು ವಾರ್ತೆ ​ಯಾದಗಿರಿ (ಶಹಾಪುರ) : ತಾಲೂಕಿನ ಸಾಗರ ಗ್ರಾಮದಲ್ಲಿ 2014ರಲ್ಲಿ ಜಾತ್ರಾ ಮಹೋತ್ಸವದ ವೇಳೆ ನಡೆದಿದ್ದ ಗಲಾಟೆ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ವಿಚಾರಣೆ ನಡೆಸಿದ ಶಹಾಪುರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, 20 ಮಂದಿ ಆರೋಪಿಗಳಿಗೆ 12 ವರ್ಷಗಳ ಕಠಿಣ ಕಾರಾವಾಸ ಹಾಗೂ ಒಟ್ಟು 4,25,000 ರೂ.…

  • ‘ಸಂಸತ್ ಚಲೋ’ ರಾಜಕೀಯ ಷಡ್ಯಂತ್ರ: ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ವಾಗ್ದಾಳಿ

    ‘ಸಂಸತ್ ಚಲೋ’ ರಾಜಕೀಯ ಷಡ್ಯಂತ್ರ: ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ವಾಗ್ದಾಳಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಮುಂದಿಟ್ಟುಕೊಂಡು ನಡೆಯುತ್ತಿರುವ ‘ಸಂಸತ್‌ ಚಲೋ’ ಪ್ರತಿಭಟನೆ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಸಾಹುಕಾರ ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ಹೆಸರಿನಲ್ಲಿ ಆರಂಭವಾದ ಹೋರಾಟವನ್ನು ಕೆಲವರು ತಮ್ಮ ರಾಜಕೀಯ ಭವಿಷ್ಯ ಕಟ್ಟಿಕೊಳ್ಳಲು ಬಳಸಿಕೊಳ್ಳುತ್ತಿದ್ದಾರೆ. ಜನಬೆಂಬಲವಿಲ್ಲದ ಪ್ರತಿಭಟನೆಯನ್ನು ದೊಡ್ಡದಾಗಿ ಬಿಂಬಿಸಲು ಉದ್ದೇಶಪೂರ್ವಕವಾಗಿ ಪ್ರಚೋದನೆ, ಗೊಂದಲ ಮತ್ತು ಗಲಭೆ ಸೃಷ್ಟಿಸಲಾಗುತ್ತಿದೆ. ನಂತರ ಮಾಧ್ಯಮಗಳ ಮುಂದೆ ಅನುಕಂಪ ಗಿಟ್ಟಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ. ಪ್ರತಿಭಟನೆಯ…

  • ಗ್ರಾಮೀಣ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ಚನ್ನಾರಡ್ಡಿ ಪಾಟೀಲ್

    ಗ್ರಾಮೀಣ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ಚನ್ನಾರಡ್ಡಿ ಪಾಟೀಲ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕಳೆದ 3 ವರ್ಷಗಳಲ್ಲಿ ನನ್ನ ಮತಕ್ಷೇತ್ರದ ಯಾದಗಿರಿ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ಯಾದಗಿರಿ ಮತಕ್ಷೇತ್ರದ ರಾಮಸಮುದ್ರ ತಾಂಡಾದಲ್ಲಿ 2025-26ನೇ ಸಾಲಿನ ಕೆಕೆಆರ್‌ಡಿಬಿ ಮೈಕ್ರೋ ಎಸ್‌ಸಿಪಿ ಯೋಜನೆಯಡಿಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿರ್ಮಾಣ ಮಾಡುತ್ತಿರುವ 2 ಕೋಟಿ ರೂ. ವೆಚ್ಚದಲ್ಲಿ ರಾಮಸಮುದ್ರ ತಾಂಡಾದಿAದ ಆಶನಾಳ ತಾಂಡಾದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ…

  • ಗ್ರಂಥಾಲಯದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಶಾಸಕ ತುನ್ನೂರ ಸಲಹೆ

    ಗ್ರಂಥಾಲಯದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಶಾಸಕ ತುನ್ನೂರ ಸಲಹೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮೌಲ್ಯವಿದೆ, ಸಾಕ್ಷರತೆಯಿಂದ ಮಾತ್ರ ನಾವೇಲ್ಲರೂ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು, ಸರ್ಕಾರ ಶಿಕ್ಷಣಕ್ಕಾಗಿ ಸಾಕಷ್ಟು ಹಣ ಖರ್ಚು ಮಾಡುತ್ತಿದೆ, ಇಲ್ಲಿರುವ ಗ್ರಂಥಾಲಯಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ, ಗ್ರಾಮದ ವಿಧ್ಯಾರ್ಥಿಗಳು ಅದರ ಲಾಭ ಪಡೆದುಕೊಳ್ಳಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಸಲಹೆ ನೀಡಿದರು. ರಾಮಸಮುದ್ರ ಗ್ರಾಮದಲ್ಲಿ ತಾ.ಪಂನಿAದ 25 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಗ್ರಂಥಾಲಯಕ್ಕೆ ಭೇಟಿ ನೀಡಿದ ಶಾಸಕರು, ತಾ.ಪಂ.…

  • ಡಾ. ವೀರಬಸವಂತರೆಡ್ಡಿ ಮುದ್ನಾಳ ವೈದ್ಯಕೀಯ–ರಾಜಕೀಯಕ್ಕೆ ಮಾದರಿ: ಸಚಿವ ಎಂ.ಬಿ. ಪಾಟೀಲ್

    ಡಾ. ವೀರಬಸವಂತರೆಡ್ಡಿ ಮುದ್ನಾಳ ವೈದ್ಯಕೀಯ–ರಾಜಕೀಯಕ್ಕೆ ಮಾದರಿ: ಸಚಿವ ಎಂ.ಬಿ. ಪಾಟೀಲ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮಾಜಿ ಶಾಸಕರಾದ ಲಿಂ.ಡಾ.ವೀರಬಸವಂತರೆಡ್ಡಿ ಮುದ್ದಾಳ ಅವರು ಕಾಯಕ ನಿಷ್ಠೆ, ಶಿಸ್ತಿನ ಸಿಪಾಯಿ, ಬದ್ಧತೆಯ ಜೀವನ ನಡೆಸುವ ಮೂಲಕ ವೈದ್ಯಕೀಯ ವೃತ್ತಿ ಮತ್ತು ರಾಜಕೀಯದಲ್ಲೂ ಇತರರಿಗೆ ಮಾದರಿಯಾಗಿದ್ದರೆಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ನಗರದಲ್ಲಿ ಸೋಮವಾರ ಆಯೋಜಿಸಿದ್ದ ಡಾ.ವೀರಬಸವಂತರೆಡ್ಡಿ ಮುದ್ನಾಳ ಅವರ 2ನೇ ಪುಣ್ಯಸ್ಮರಣೆ ಹಾಗೂ ಸಾಹಿತಿ ಡಾ.ಸುಭಾಷಚಂದ್ರ ಕೌಲಗಿ ಸಂಪಾದಕತ್ವದ ಗ್ರಂಥ ಬಿಡುಗಡೆ ಮಾಡಿ, ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿಜಯಪುರದ ಬಿಎಲ್‌ಡಿ ಸಂಸ್ಥೆಯ ಮೆಡಿಕಲ್ ಕಾಲೇಜಿನಲ್ಲಿ ಸುಮಾರು…

  • ಬಸವಸಾಗರಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ; ಸದ್ಯ ರೈತರಿಗೆ ಕಾಲುವೆ ನೀರು ಸಾಧ್ಯವಿಲ್ಲ
    ,

    ಬಸವಸಾಗರಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ; ಸದ್ಯ ರೈತರಿಗೆ ಕಾಲುವೆ ನೀರು ಸಾಧ್ಯವಿಲ್ಲ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕೃಷ್ಣಾ ಅಚ್ಚು ಕಟ್ಟು ಭಾಗದ ರೈತರ ಜೀವನಾಡಿ ಬಸವಸಾಗರ ಜಲಾಶಯಕ್ಕೆ ಮಂಗಳವಾರ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಸಚಿವರು ಆಲಮಟ್ಟಿ ಶಾಸ್ತ್ರೀ ಹಾಗೂ ನಾರಾಯಣಪುರ ಬಸವಸಾಗರ ಅವಳಿ ಜಲಾಶಯಗಳಲ್ಲಿ ಕೃಷಿಗಾಗಿ ಕಾಲುವೆಗಳಿಗೆ ನೀರು ಬಿಡಲು ಕೇವಲ 10 ಟಿಎಂಸಿಯಷ್ಟು ಲಭ್ಯವಿದೆ ಒಂದೊಮ್ಮೆ ಕೃಷ್ಣಾ ಹಾಗೂ ಅದರ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿ ಅವಳಿ ಜಲಾಶಯಗಳು ಸಂಪೂರ್ಣ ಭರ್ತಿಯಾದರೆ…

  • ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಮನವಿ

    ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಮನವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ವೈನ್ ಶಾಪ್‌ಗಳು ಹಾಗೂ ಬಾರ್‌ಗಳಿಂದ ಅಕ್ರಮವಾಗಿ ಮದ್ಯ ಸಾಗಾಟ ಮತ್ತು ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾರ್ಮಿಕ ಸೇನೆ ಜಿಲ್ಲಾ ಘಟಕದಿಂದ ಅಬಕಾರಿ ಇಲಾಖೆಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ಮಾತಾನಾಡಿದ ಸಂಘದ ಜಿಲ್ಲಾ ಅಧ್ಯಕ್ಷ ಪೋಲಪ್ಪ ಎಂ. ನಾರಾಯಣೋರ್ ಅವರು ಯಾದಗಿರಿ ಅಬಕಾರಿ ಉಪ ಆಯುಕ್ತರಿಗೆ ಸಲ್ಲಿಸಿ ಮಾತಾನಾಡಿದ ಅವರು ಕೆಲವು ವೈನ್ ಶಾಪ್‌ಗಳು ಮತ್ತು ಬಾರ್‌ಗಳಿಂದ ಟಂಟಂ…

Suddi Belaku