by
Tag: ಯಾದಗಿರಿ

ವಿದ್ಯುತ್ ವೈರ್ ಕಟ್ ಆರೋಪ; ಯಾದಗಿರಿ ಜೇಸ್ಕಾಂ ಕಚೇರಿಗೆ ರೈತರ ಮುತ್ತಿಗೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಐಪಿ ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂಬ ಆರೋಪದ ನಡುವೆ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ವಿದ್ಯುತ್ ಲೈನ್ ಕತ್ತರಿಸಿರುವ ಘಟನೆ ತೀವ್ರ ಉದ್ವಿಗ್ನತೆಗೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಬಾಚವಾರ, ನಿಂಗಸದಲ್ಳಿ, ಹಣಮಾನಾಯಕ ತಾಂಡಾ ಸೇರಿದಂತೆ ಹಲವು ಗ್ರಾಮಗಳ ರೈತರು ಜೇಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಯರಗೋಳ ಗ್ರಾಮದ 110 ಕೆವಿ ವಿದ್ಯುತ್ ಕೇಂದ್ರದಿಂದ ಬಾಚವಾರ, ನಿಂಗಸದಲ್ಳಿ ಹಾಗೂ ಹಣಮಾನಾಯಕ ತಾಂಡಾ ಭಾಗದ ಐಪಿ ಸೆಟ್ಗಳಿಗೆ ವಿದ್ಯುತ್ ಪೂರೈಕೆಯಾಗುತ್ತಿತ್ತು.…

ರೈತರ ಆತ್ಮಹತ್ಯೆ ತಡೆಯಲು ತಕ್ಷಣ ಬರ ಘೋಷಿಸಿ: ವಿಶ್ವನಾಥ ನಾಯಕ ಒತ್ತಾಯ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ಶೇ. 25 ಕ್ಕೂ ಕಮ್ಮಿ ಮಳೆಯಾದ ಹಿನ್ನೆಲೆಯಲ್ಲಿ ಕೂಡಲೇ ಬರ ಪೀಡಿತ ಎಂದು ಘೋಷಿಸಬೇಕು ಬರಪರಿಹಾರ ಕಾಮಗಾರಿ ಆರಂಭಿಸಬೇಕು ಮತ್ತು ರೈತರ ಸಾಲಮನ್ನಾ ಮಾಡಬೇಕು ಎಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಬಿ.ಎನ್. ವಿಶ್ವನಾಥ ನಾಯಕ ಒತ್ತಾಯಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಮಳೆಯೇ ಬಾರದ ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳು ನೀರಿಲ್ಲದೇ ಒಣಗುತ್ತಿವೆ. ಒಣಗಿದ ಬೆಳೆ ಕಂಡು ರೈತರು ಕಂಗಾಲಾಗಿದ್ದಾರೆ. ಮಳೆ ಬಾರದೇ ಇದ್ದುದರಿಂದ ರೈತರು…
by

ರಸ್ತೆ ಮೇಲೆ ಹರಿದ ಸೆಪ್ಟಿಕ್ ನೀರು; ತಕ್ಷಣ ತೆರವುಗೊಳಿಸಲು ಒತ್ತಾಯ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ಮಾತಮಾಣಿಕೇಶ್ವರಿ ಕಾಲೋನಿಯಲ್ಲಿರುವ ಅಲ್ಪಸಂಖ್ಯಾತರ ಇಲಾಖೆಯ ಅಬ್ದುಲ್ ಕಲಾಂ ಹಾಸ್ಟೆಲ್ ಹಿಂಭಾಗದ ಸೆಪ್ಟಿಕ್ ಟ್ಯಾಂಕ್ ತುಂಬಿ ಕಲುಷಿತ ನೀರು ರಸ್ತೆ ಹಾಗೂ ಖಾಲಿ ಜಾಗದಲ್ಲಿ ಉಕ್ಕಿ ಹರಿಯುತ್ತಿದ್ದು, ತೀವ್ರ ದುರ್ವಾಸನೆ ಮತ್ತು ಡೆಂಗ್ಯೂ, ಮಲೇರಿಯಾದಂತಹ ಮಾರಕ ಸಾಂಕ್ರಾಮಿಕ ರೋಗಗಳ ಭೀತಿ ಸೃಷ್ಟಿಸಿದೆ. ವಿದ್ಯಾರ್ಥಿಗಳು ಹಾಗೂ ಸ್ಥಳೀಯ ನಾಗರಿಕರ ಆರೋಗ್ಯಕ್ಕೆ ಕಂಟಕವಾಗಿರುವ ಈ ಸಮಸ್ಯೆಯ ಕುರಿತು ಅಧಿಕಾರಿಗಳು ತೀವ್ರ ನಿರ್ಲಕ್ಷ್ಯ ವಹಿಸಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಕ್ಷಣವೇ ಎಚ್ಚೆತ್ತುಕೊಂಡು ಕಲುಷಿತ ನೀರನ್ನು…
by

ಯಾದಗಿರಿ ದೇವಾಲಯಗಳಲ್ಲಿ ಸಿಸಿಟಿವಿ, UPI ಕಡ್ಡಾಯ; ಜಿಲ್ಲಾಧಿಕಾರಿ ಮಹತ್ವದ ಆದೇಶ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಧರ್ಮದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಹುಂಡಿ, ದೇಣಿಗೆ, ಚಿನ್ನ-ಬೆಳ್ಳಿ ವಸ್ತುಗಳ ಭದ್ರತೆ ಹಾಗೂ ಲೆಕ್ಕಪತ್ರ ನಿರ್ವಹಣೆಯಲ್ಲಿ ಸಂಪೂರ್ಣ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಖಚಿತಪಡಿಸಿಕೊಳ್ಳಲು ಸರ್ಕಾರದ ಮಾರ್ಗಸೂಚಿಗಳನ್ನು (SOP) ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳಲ್ಲಿ ದೇವಾಲಯಗಳ ಹುಂಡಿ ಕಳ್ಳತನ ಹಾಗೂ ಹಣ ದುರುಪಯೋಗ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ…
by

ಯಾದಗಿರಿ: ಬಸ್ನಲ್ಲೇ ಹೃದಯಾಘಾತದಿಂದ ಪ್ರಯಾಣಿಕ ಸಾವು
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿಯಿಂದ ಗುರುಮಠಕಲ್ ಕಡೆಗೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್ಟಿಸಿ) ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ರಾಮಚಂದ್ರ (62) ಎಂದು ಗುರುತಿಸಲಾಗಿದ್ದು, ಅವರು ಯಾದಗಿರಿ ತಾಲೂಕಿನ ಯದ್ಲಾಪುರ ತಾಂಡಾ ನಿವಾಸಿಯಾಗಿದ್ದಾರೆ. ಯಾದಗಿರಿ–ಗುರುಮಠಕಲ್ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್ ಆಶನಾಳ ಸಮೀಪ ತಲುಪಿದ ವೇಳೆ ರಾಮಚಂದ್ರ ಅವರಿಗೆ ಏಕಾಏಕಿ ಹೃದಯಾಘಾತ ಉಂಟಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ, ಅವರು ಬಸ್ನಲ್ಲಿಯೇ ಮೃತಪಟ್ಟಿದ್ದಾರೆ…
by

ಭೀಮಾ ನದಿಯಲ್ಲಿ ಮುಳುಗಿ ಮೀನುಗಾರ ಸಾವು: ಕುಟುಂಬಕ್ಕೆ ಶಾಸಕ ತುನ್ನೂರ್ ಸಾಂತ್ವನ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ತಾಲೂಕಿನ ತಳಕ ಗ್ರಾಮದ ಮೀನುಗಾರ ಹಣಮಂತ ಚಂದಪ್ಪ ಸಗರ ಅವರು ಇತ್ತೀಚೆಗೆ ಭೀಮಾ ನದಿಯಲ್ಲಿ ಬಿದ್ದು ಅಕಾಲಿಕ ಮರಣ ಹೊಂದಿದ ಹಿನ್ನೆಲೆಯಲ್ಲಿ, ಯಾದಗಿರಿ ಕ್ಷೇತ್ರದ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರು ಮೃತರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಘಟನೆಯಿಂದ ತೀವ್ರ ಆಘಾತಕ್ಕೊಳಗಾಗಿರುವ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ ಶಾಸಕರು, ಹಣಮಂತ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದರು. ಮೀನುಗಾರಿಕೆಗೆ ತೆರಳಿದ್ದಾಗ ಸಂಭವಿಸಿದ ಈ ದುರ್ಘಟನೆ ನಿಜಕ್ಕೂ ಬೇಸರ…
by

ಮಳೆಗಾಗಿ ಮೈಲಾರಲಿಂಗೇಶ್ವರನ ಮೊರೆ ಹೋದ ರಾಮಸಮುದ್ರ ಗ್ರಾಮಸ್ಥರು: ಭಜನೆ ಮಾಡುತ್ತಾ ಪಾದಯಾತ್ರೆ
ಮೈಲಾಪುರದ ದೇಗುಲದಲ್ಲಿ ವಿಶೇಷ ಪೂಜೆ | ಅನ್ನದಾತರ ಬದುಕು ಹಸನಾಗಲಿ ಎಂದು ವರುಣನಲ್ಲಿ ಪ್ರಾರ್ಥನೆ ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮುಂಗಾರು ಮಳೆಗಾಗಿ ಕಾದು ಕುಳಿತಿರುವ ಯಾದಗಿರಿ ತಾಲೂಕಿನ ರಾಮಸಮುದ್ರ ಗ್ರಾಮಸ್ಥರು ವರುಣನ ಕೃಪೆಗಾಗಿ ಮೈಲಾಪುರದ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಭಜನೆ ಮಾಡುತ್ತಾ ಪಾದಯಾತ್ರೆ ನಡೆಸಿದರು. ಮಳೆಗಾಗಿ ಪ್ರಾರ್ಥಿಸಿ ಗ್ರಾಮದಿಂದ ಕಾಲ್ನಡಿಗೆಯಲ್ಲಿ ಹೊರಟ ನೂರಾರು ಭಕ್ತರ ತಂಡವು, ದಾರಿಯುದ್ದಕ್ಕೂ ದೇವರ ನಾಮಸ್ಮರಣೆ ಹಾಗೂ ಭಜನೆಗಳನ್ನು ಮಾಡುತ್ತಾ ಮೈಲಾಪುರದ ದೇಗುಲವನ್ನು ತಲುಪಿತು. ದೇವಾಲಯದ ಆವರಣದಲ್ಲಿ ಮಳೆಗಾಗಿ ವಿಶೇಷ ಭಜನೆ…
by

ಗ್ಯಾರಂಟಿ ಯೋಜನೆ ನಿಲ್ಲಿಸಿ, ರೈತರ ಸಾಲ ಮನ್ನಾ ಮಾಡಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಗೆ ಶಾಸಕ ಕಂದಕೂರು ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದ್ದು, ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಂದು ವರ್ಷ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ, ರೈತರ ಸಾಲ ಮನ್ನಾ ಮಾಡಬೇಕು ಎಂದು ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಒತ್ತಾಯಿಸಿದ್ದಾರೆ. ಯಾದಗಿರಿ ತಾಲೂಕಿನ ಹೊನಗೇರಾ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ರೈತರ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ರೈತರ ಆತ್ಮಹತ್ಯೆ ತಡೆಯಲು ಸಾಲ ಮನ್ನಾ ಅನಿವಾರ್ಯ “ರಾಜ್ಯದಲ್ಲಿ ಮಳೆಯಿಲ್ಲ, ಬೆಳೆಯಿಲ್ಲ.…
by

ಯಾದಗಿರಿಯಲ್ಲಿ ₹20 ಲಕ್ಷ ವೆಚ್ಚದ ಸಾರ್ವಜನಿಕ ಶೌಚಾಲಯ ಉದ್ಘಾಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಬೆಳೆಯುತ್ತಿರುವ ನಗರದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ವಿವಿಧಡೆ ಶೌಚಾಲಯಗಳ ನಿರ್ಮಾಣ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು. ಇಲ್ಲಿನ ವಾರ್ಡ 31ರ ಶಶಿಧರ ಕಾಲೋನಿಯಲ್ಲಿ ನಗರಸಭೆಯಿಂದ ನಗರೋತ್ಥಾನ ಹಂತ 3 ರಲ್ಲಿ ಸುಮಾರು 20 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾದ ಶೌಚಾಲಯ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಜನರು ನಿರ್ಸಗದ ಕರೆಗಳನ್ನು ಪೂರೈಸಿಕೊಳ್ಳುವುದು ಅತಿ ಅಗತ್ಯವಾಗಿದೆ. ನಗರ ಪ್ರದೇಶಗಳಲ್ಲಿ ಹೊರಗಿನಿಂದ ಬರುವ ಜನರು ಇದಕ್ಕಾಗಿ ಪರದಾಡುತ್ತಾರೆ. ಇದನ್ನು ತಪ್ಪಿಸಲು…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ
















