ಸುದ್ದಿ ಬೆಳಕು ವಾರ್ತೆ
ಯಾದಗಿರಿ, ಏಪ್ರಿಲ್ 17 : “ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಗುರಿ ತಲುಪಲು ಮತ್ತು ಉನ್ನತ ಶಿಕ್ಷಣ ಪಡೆಯಲು ಕಠಿಣ ಪರಿಶ್ರಮ ಹಾಗೂ ಓದು ಮಾತ್ರ ಏಕೈಕ ಮಾರ್ಗವಾಗಿದೆ” ಎಂದು ಮಹಾತ್ಮ ಗಾಂಧಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ನಾಸೀರ್ ಅಹ್ಮದ್ ಅವರು ಅಭಿಪ್ರಾಯಪಟ್ಟರು.
ನಗರದ ನಾಜೀರ್ ಕಾಲೋನಿ ಸ್ಟೇಷನ್ ಏರಿಯಾದಲ್ಲಿರುವ ಮಹಾತ್ಮ ಗಾಂಧಿ ಕಲಾ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.
ಇತ್ತೀಚೆಗೆ ನಡೆದ ಪಿಯುಸಿ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸಾಧಕ ವಿದ್ಯಾರ್ಥಿಗಳಿಗೆ ಗೌರವ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿ ಕಾಲೇಜಿಗೆ ಕೀರ್ತಿ ತಂದ ಸಾಧಕ ವಿದ್ಯಾರ್ಥಿಗಳಾದ ತಹೂರಾ ಸದಾಫ್, ಅಯ್ಯಮ್ಮ, ಪಾರ್ವತಿ, ದೀಪಿಕಾ, ಅರ್ಚನಾ,ಚೈತ್ರಾ ಈ ವಿದ್ಯಾರ್ಥಿಗಳನ್ನು ಸಂಸ್ಥೆಯ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿ, ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಕೋರಲಾಯಿತು.
ಉಪಸ್ಥಿತರಿದ್ದ ಗಣ್ಯರು
ಈ ಸಂಭ್ರಮದ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ನಾಗೇಂದ್ರ ದೇಶಮುಖ, ಮಹಮ್ಮದ್ ನವಾಬ್ ಪಾಷಾ, ಪ್ರಶಾಂತ, ಮಲ್ಲಿಕಾರ್ಜುನ, ಲತಾ, ನೌಶೀನಿ ಫರ್ಹಾನ್, ಶಭಾನ ಬೇಗಂ, ಮಹಾಲಕ್ಷ್ಮಿ, ಅಕ್ಷತಾ, ಸವಿತಾ, ಸಲೀಮ್ ಜಾವೇದ್, ಸಮೀರ್ ಖಾನ್ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಈ ಸಾಧನೆಗೆ ಪಾಲಕರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.










Leave a Reply